
ನವದೆಹಲಿ: ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಎರಡು ದಿನಗಳ ಭೇಟಿಗಾಗಿ ಸೋಮವಾರ ಭಾರತಕ್ಕೆ ಆಗಮಿಸಲಿದ್ದಾರೆ. ಉಭಯ ದೇಶಗಳ ನಡುವಿನ ಗಡಿ ಸಮಸ್ಯೆ ಇತ್ಯರ್ಥಕ್ಕೆ ಸಂಬಂಧಿಸಿದಂತೆ ಈ ಭೇಟಿ ನಡೆಯುತ್ತಿದೆ ಎಂದು ಎರಡೂ ದೇಶಗಳು ಹೇಳಿವೆ.
ಆದರೆ ಅಮೆರಿಕದ ತೆರಿಗೆ ದಾಳಿಯಿಂದ ಆಕ್ರೋಶಗೊಂಡಿರುವ ಭಾರತ, ಚೀನಾ, ರಷ್ಯಾ ಒಂದಾಗುತ್ತಿವೆ ಎಂಬ ವರದಿಗಳ ಬೆನ್ನಲ್ಲೇ ಮತ್ತು ಭಾರತದ ಪ್ರಧಾನಿ ಮೋದಿ ಚೀನಾ ಭೇಟಿಗೂ ಮುನ್ನ ವಾಂಗ್ ಆಗಮನ ಸಾಕಷ್ಟು ಕುತೂಹಲ ಮೂಡಿಸಿದೆ.
ಈ ಭೇಟಿ ವೇಳೆ ಗಡಿ ನಿಯಂತ್ರಣ ರೇಖೆಯುದ್ದಕ್ಕೂ (ಎಲ್ಎಸಿ) ಇರುವ ಸದ್ಯದ ಪರಿಸ್ಥಿತಿ ಸಂಬಂಧ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರೊಂದಿಗೆ ವಾಂಗ್ ಚರ್ಚೆ ನಡೆಸಲಿದ್ದಾರೆ.
2020ರ ಗಲ್ವಾನ್ ಸಂಘರ್ಷದ ಬಳಿಕ ಚೀನಾ ಹಾಗೂ ಭಾರತದ ನಡುವಿನ ಸಂಬಂಧ ಸಂಪೂರ್ಣ ಹಳಸಿತ್ತು. ಇದೀಗ ಎರಡೂ ದೇಶಗಳು ಪರಸ್ಪರ ವಿಶ್ವಾಸವೃದ್ಧಿಯ ಹಲವು ಕ್ರಮಗಳನ್ನು ಕೈಗೊಂಡಿದ್ದು ಅದರ ಬೆನ್ನಲ್ಲೇ ವಾಂಗ್ ಆಗಮನವಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ