ಧೋವಲ್ ಮಿಂಚಿನ ಮಾತುಕತೆ: ಗಡಿಯಿಂದ 2 ಕಿ.ಮೀ. ಹಿಂದೆ ಸರಿದ ಚೀನಾ ಸೇನೆ

Kannadaprabha News   | Asianet News
Published : Jul 09, 2020, 07:39 AM IST
ಧೋವಲ್ ಮಿಂಚಿನ ಮಾತುಕತೆ: ಗಡಿಯಿಂದ 2 ಕಿ.ಮೀ. ಹಿಂದೆ ಸರಿದ ಚೀನಾ ಸೇನೆ

ಸಾರಾಂಶ

ಗಲ್ವಾನ್‌ ಕಣಿವೆಯಲ್ಲಿ ಮಂಗಳವಾರ ಹಾಗೂ ಹಾಟ್‌ ಸ್ಟ್ರಿಂಗ್‌ ಪ್ರದೇಶದ ಗಸ್ತು ಪಾಯಿಂಟ್‌ 15ರ ಬಳಿಯಿಂದ ಬುಧವಾರ ಚೀನಾ ಸೇನೆ ಜಾಗ ಖಾಲಿ ಮಾಡಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ನವದೆಹಲಿ(ಜು.09): ಭಾರತ-ಚೀನಾ ನಡುವೆ ಪೂರ್ವ ಲಡಾಖ್‌ನಲ್ಲಿ ಸಂಘರ್ಷ ಏರ್ಪಟ್ಟಿದ್ದ ನಾಲ್ಕು ವಿವಾದಿತ ಸ್ಥಳಗಳ ಪೈಕಿ ಎರಡು ಸ್ಥಳಗಳಿಂದ ಉಭಯ ಸೇನೆಗಳು ಪೂರ್ವ ನಿರ್ಧರಿತ ರೀತಿಯಲ್ಲಿ 2 ಕಿ.ಮೀ.ನಷ್ಟುಹಿಂದಕ್ಕೆ ಸರಿಯುವ ಪ್ರಕ್ರಿಯೆ ಪೂರ್ಣಗೊಂಡಿದೆ. ಗಲ್ವಾನ್‌ ಕಣಿವೆಯಲ್ಲಿ ಮಂಗಳವಾರ ಹಾಗೂ ಹಾಟ್‌ ಸ್ಟ್ರಿಂಗ್‌ ಪ್ರದೇಶದ ಗಸ್ತು ಪಾಯಿಂಟ್‌ 15ರ ಬಳಿಯಿಂದ ಬುಧವಾರ ಚೀನಾ ಸೇನೆ ಜಾಗ ಖಾಲಿ ಮಾಡಿದೆ ಎಂದು ಮೂಲಗಳು ತಿಳಿಸಿವೆ.

ಇನ್ನು, ಗೋಗ್ರಾ ಪ್ರದೇಶದ 17ಎ ಗಸ್ತು ಪಾಯಿಂಟ್‌ನಿಂದ ಗುರುವಾರ ಉಭಯ ಸೇನೆಗಳು 2 ಕಿ.ಮೀ. ಹಿಂದಕ್ಕೆ ಸರಿಯಲಿವೆ ಎಂದು ಹೇಳಲಾಗಿದೆ. ಆದರೆ, ನಾಲ್ಕನೇ ವಿವಾದಿತ ಪ್ರದೇಶವಾದ ಪ್ಯಾಂಗಾಂಗ್‌ ಲೇಕ್‌ನ ಫಿಂಗರ್‌ 4 ಪ್ರದೇಶದಲ್ಲಿ ಈಗಲೂ ಚೀನಾದ ಚಟುವಟಿಕೆಗಳು ಕಂಡುಬರುತ್ತಿವೆ. ಅಲ್ಲಿಂದ ವಾಹನಗಳು ಹಾಗೂ ಟೆಂಟ್‌ಗಳನ್ನು ತೆರವುಗೊಳಿಸಿದ್ದರೂ ಕಣಿವೆಯ ಬೆಟ್ಟದ ಮೇಲೆ ಚೀನಾದ ಸೇನೆ ಈಗಲೂ ಇದೆ ಎಂದು ಮೂಲಗಳು ಹೇಳಿವೆ.

ಭಾರತ, ಅಮೆರಿಕಾ ಸೇರಿ ಚೀನಾ ಬುಡಕ್ಕೆ 'D'ಬಾಂಬ್..!

ಸೇನೆ ಹಿಂಪಡೆತ ಪ್ರಕ್ರಿಯೆಯನ್ನು ಚುರುಕುಗೊಳಿಸಲು ಉಭಯ ದೇಶಗಳು ನೇಮಿಸಿರುವ ವಿಶೇಷ ಪ್ರತಿನಿಧಿಗಳಾದ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ ಹಾಗೂ ಚೀನಾದ ವಿದೇಶಾಂಗ ಸಚಿವ ವಾಂಗ್‌ ಯಿ ನಡುವೆ ಭಾನುವಾರ ನಡೆದ ಸುದೀರ್ಘ ಮಾತುಕತೆಯ ನಂತರ ಸೇನೆ ಹಿಂಪಡೆತ ಪ್ರಕ್ರಿಯೆ ಆರಂಭವಾಗಿದೆ. ಮೊದಲ ಮೂರು ದಿನಗಳಲ್ಲಿ ಅರ್ಧದಷ್ಟು ಹಿಂದೆಗೆತ ಪೂರ್ಣವಾಗಿದ್ದು, ಚೀನಾ ಸೇನೆಯೀಗ ಎರಡೂ ದೇಶಗಳು ಗೌರವಿಸುವ ನೈಜ ಗಡಿ ನಿಯಂತ್ರಣ ರೇಖೆಯ (ಎಲ್‌ಎಸಿ) ಒಳಗೇ ಇದೆ. ಉಪಗ್ರಹ ಚಿತ್ರದಲ್ಲಿ ಗಲ್ವಾನ್‌ ನದಿ ಭಾರತಕ್ಕೆ ಪ್ರವೇಶಿಸುವ ಸ್ಥಳದಲ್ಲಿ ಈಗ ಚೀನಾ ಸೇನೆಯ ಟೆಂಟ್‌ಗಳು ಕಾಣಿಸುತ್ತಿಲ್ಲ. ಇನ್ನು ಎರಡು-ಮೂರು ದಿನಗಳಲ್ಲಿ ಇನ್ನೆರಡು ಪ್ರದೇಶಗಳಿಂದಲೂ ಸೇನೆ ವಾಪಸ್‌ ಹೋಗಲಿದ್ದು, ಮುಂದಿನ ವಾರ ಉಭಯ ದೇಶಗಳ ನಡುವೆ ಇನ್ನೊಂದು ಸುತ್ತಿನ ಉನ್ನತ ಹಂತದ ಮಾತುಕತೆ ನಡೆಯಲಿದೆ ಎಂದು ಹೇಳಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
ಸಿಎಂ ಕುರ್ಚಿಗೆ 500 ಕೋಟಿ, ಸ್ಫೋಟಕ ಹೇಳಿಕೆ ಬೆನ್ನಲ್ಲೇ ಸಿಧು ಪತ್ನಿ ಕಾಂಗ್ರೆಸ್‌ನಿಂದ ಅಮಾನತು