
ನವದೆಹಲಿ(ಜು.19): ಗಡಿಯುದ್ದಕ್ಕೂ ಭಾರತೀಯ ಸೇನೆ ವಿರುದ್ಧ ಸದಾ ಕಾಲು ಕೆರೆದು ಜಗಳ ಕಾಯುವ ಚೀನಾ, ಇದೀಗ ವಿದೇಶದಲ್ಲಿರುವ ಭಾರತೀಯರು ಮತ್ತು ಭಾರತೀಯ ಯೋಜನಾ ಪ್ರದೇಶಗಳ ಮೇಲೆ ದಾಳಿ ನಡೆಸಲು ಮ್ಯಾನ್ಮಾರ್ ಉಗ್ರರಿಗೆ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದೆ ಎಂಬ ವಿಚಾರವನ್ನು ಭಾರತದ ಭದ್ರತಾ ಏಜೆನ್ಸಿಗಳು ಬಯಲು ಮಾಡಿವೆ.
ಇತ್ತೀಚೆಗಷ್ಟೇ ಮ್ಯಾನ್ಮಾರ್ -ಥಾಯ್ಲೆಂಡ್ ಗಡಿ ಪ್ರದೇಶದಲ್ಲಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ಪತ್ತೆಯಾಗಿದ್ದು, ಇವುಗಳನ್ನು ಮ್ಯಾನ್ಮಾರ್ನಲ್ಲಿರುವ ಭಾರತೀಯರು, ಅವರ ಆಸ್ತಿ ಹಾಗೂ ಭಾರತದ ಆಗ್ನೇಯ ಏಷ್ಯಾಕ್ಕೆ ಸಂಪರ್ಕ ಕೊಂಡಿಯಾಗಲಿರುವ ಕಲಾದಾನ್ ಮಲ್ಟಿಮಾಡೆಲ್(ಹೆದ್ದಾರಿ) ಯೋಜನೆಯನ್ನು ಗುರಿಯಾಗಿಸಿ ದಾಳಿ ನಡೆಸಲು ಚೀನಾ ಪೂರೈಸಿರಬಹುದು ಎಂದು ಹೇಳಲಾಗಿದೆ.
ಕಲಾದಾನ್ ಯೋಜನೆ ಇರುವ ಪ್ರದೇಶ ಸೇರಿದಂತೆ ಇನ್ನಿತರ ಕಡೆಗಳಲ್ಲಿ ಮ್ಯಾನ್ಮಾರ್ನ ಬಂಡುಕೋರ ಸಂಘಟನೆ ಅರಾಕನ್ ಆರ್ಮಿ ಉಗ್ರ ನೆಲೆಗಳನ್ನು ಸ್ಥಾಪನೆ ಮಾಡಿದೆ. ಹೀಗಾಗಿ, ಅರಾಕನ್ ಆರ್ಮಿ ಹಾಗೂ ಬಂಡುಕೋರ ಸಂಘಟನೆಗಳಿಂದ ಕಲಾದಾನ್ ಯೋಜನೆ ರಕ್ಷಣೆಗಾಗಿ ಕಳೆದ ತಿಂಗಳಷ್ಟೇ ಭಾರತ ಮತ್ತು ಮಯಾನ್ಮಾರ್ ಸೇನಾ ಪಡೆಗಳು ಜಂಟಿ ಕಾರ್ಯಾಚರಣೆ ನಡೆಸಿದ್ದವು. ಇದಾಗಿ ಕೆಲವೇ ದಿನಗಳಲ್ಲಿ ಮ್ಯಾನ್ಮಾರ್- ಥಾಯ್ಲೆಂಡ್ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದು, ಈ ವೇಲೆ ಚೀನಾ ಸೇನೆಗೆ ಸೇರಿದ ಎಕೆ-47, ಗ್ರೆನೇಡ್ಗಳು, ಮಿಷಿನ್ ಗನ್ಗಳು ಸೇರಿದಂತೆ ಇನ್ನಿತರ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ಪತ್ತೆಯಾಗಿವೆ. ಈ ಸಂಬಂಧ ಬಂಧನಕ್ಕೊಳಗಾದ 6 ಮಂದಿಯ ವಿಚಾರಣೆ ವೇಳೆ ಚೀನಾದ ಈ ಶಸ್ತ್ರಾಸ್ತ್ರಗಳು ಅರಾಕನ್ ಆರ್ಮಿಗೆ ರವಾನೆಯಾಗಿದೆ ಎಂದು ತಿಳಿದುಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ