
ಪಟನಾ(ನ.03): ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರ ಸಾವಿನಲ್ಲಿ ಪುತ್ರ ಚಿರಾಗ್ ಪಾಸ್ವಾನ್ ಕೈವಾಡ ಇದೆ ಎಂದು ಎನ್ಡಿಎದ ಮಿತ್ರ ಪಕ್ಷ ಹಿಂದೂಸ್ಥಾನಿ ಅವಾಮಿ ಮೋರ್ಚಾ ಆರೋಪಿಸಿದೆ. ಅಲ್ಲದೆ ಈ ಕುರಿತು ತನಿಖೆ ನಡೆಸುವಂತೆ ಕೋರಿ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದೆ.
ಪಾಸ್ವಾನ್ ಮೃತಪಟ್ಟಮರುದಿನವೇ ಅವರ ಫೋಟೋ ಪಕ್ಕ ನಿಂತು ನಗುತ್ತಲೇ ವಿಡಿಯೋ ಮಾಡಿಕೊಂಡಿದ್ದಾರೆ. ಪಾಸ್ವಾನ್ ಆಸ್ಪತ್ರೆಯಲ್ಲಿದ್ದ ವೇಳೆ ಕೇವಲ ಮೂವರಿಗೆ ಮಾತ್ರ ಭೇಟಿಗೆ ಅವಕಾಶ ನೀಡಲಾಗಿದೆ. ನಿಧನದ ಬಗ್ಗೆ ಮೆಡಿಕಲ್ ಬುಲೆಟಿನ್ ಬಿಡುಗಡೆ ಮಾಡಿಲ್ಲ. ಈ ಎಲ್ಲಾ ನಡೆಗಳು ಶಂಕಾಸ್ಪದವಾಗಿದ್ದು, ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿರುವ ಚಿರಾಗ್, ಆಸ್ಪತ್ರೆಯಲ್ಲಿದ್ದಾಗ ಭೇಟಿ ಮಾಡದವರು ಈಗ ಅವರು ಸತ್ತ ಮೇಲೆ ರಾಜಕೀಯ ಮಾಡುತ್ತಿದ್ದಾರೆ ಎಂದು ಬೇಸರಿಸಿದ್ದಾರೆ. ಅಲ್ಲದೇ ಈ ಪತ್ರದ ಹಿಂದೆ ನಿತೀಶ್ ಕುಮಾರ್ ಕೈವಾಡ ಇದೆ ಎಂದು ದೂರಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ