'ದೇಶದಲ್ಲಾಗುವ ತಪ್ಪಿಗೆ ನಾವೇ ಹೊಣೆ, ಬ್ರಿಟಿಷರನ್ನು ದೂಷಿಸಲು ಸಾಧ್ಯವಿಲ್ಲ'

Published : Feb 28, 2020, 12:38 PM IST
'ದೇಶದಲ್ಲಾಗುವ ತಪ್ಪಿಗೆ ನಾವೇ ಹೊಣೆ, ಬ್ರಿಟಿಷರನ್ನು ದೂಷಿಸಲು ಸಾಧ್ಯವಿಲ್ಲ'

ಸಾರಾಂಶ

ನಾವೀಗ ಸ್ವತಂತ್ರರು| ದೇಶದಲ್ಲಾಗುವ ತಪ್ಪಿಗೆ ನಾವೇ ಹೊಣೆ, ಬ್ರಿಟಿಷರನ್ನು ದೂಷಿಸಲು ಸಾಧ್ಯವಿಲ್ಲ| ದೆಹಲಿ ಗಲಭೆ ನಡುವೆ, ಆರ್‌ಎಸ್‌ಎಸ್‌ ನಾಯಕ ಭಾಗವತ್ ಮಾತು

ನವದೆಹಲಿ[ಫೆ.28]: ದೆಹಲಿಯಲ್ಲಿ ಪೌರತ್ವ ತಿದ್ದುಪಡಿ ಕಾನೂನು ಸಂಬಂಧ ಭುಗಿಲೆದ್ದಿರುವ ಹಿಂಸಾಚಾರ ನಡುವೆ RSS ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಯೊಂದನ್ನು ನೀಡುತ್ತಾ 'ದೇಶದಲ್ಲಿ ಏನೇ ತಪ್ಪಾದರೂ, ಬ್ರಿಟಿಷರನ್ನು ದೂಷಿಸುವುದು ಸರಿಯಲ್ಲ. ನಾವು ಗುಲಾಮರಂತೆ ಇದ್ದಾಗ ಏನೋ ನಡೆಯುತ್ತಿತ್ತು. ಆದರೆ ಈಗ ಅದು ಸಾಧ್ಯವಿಲ್ಲ' ಎಂದಿದ್ದಾರೆ.

ನಾಗ್ಪುರದಲ್ಲಿ ನಡೆಯುತ್ತಿರುವ ನವವರ್ಷ 2020 ಕಾರ್ಯಕ್ರಮದಲ್ಲಿ ಸಾಮಾಜಿಕ ಶಿಸ್ತಿನ ಕುರಿತು ಮಾತನಾಡಿದ RSS ನಾಯಕ ಭಾಗವತ್ 'ನಾವೀಗ ಸ್ವತಂತ್ರರು. ಇಂದು ನಮ್ಮ ದೇಶದಲ್ಲಿ ನಮ್ಮದೇ ಆಡಳಿತವಿದೆ. ಸ್ವಾತಂತ್ರ್ಯ ಕಾಪಾಡಿಕೊಂಡು, ಸರಿಯಾಗಿ ಮುನ್ನಡೆಸಲು ಸಾಮಾಜಿಕ ಹಾಗೂ ನಾಗರಿಕ ಶಿಸ್ತು ಅತ್ಯಗತ್ಯ' ಎಂದಿದ್ದಾರೆ.

ಅಲ್ಲದೇ 'ನಮ್ಮ ದೇಶದಲ್ಲಿ ಏನೇ ನಡೆದರೂ ಅದಕ್ಕೆ ನಾವೇ ಜವಾಬ್ದಾರರು. ಹೀಗಾಗಿ ನಾವೇನೇ ನಿರ್ಧಾರ ತೆಗೆದುಕೊಳ್ಳುವುದಕ್ಕೂ ಮೊದಲು ಅನೇಕ ಬಾರಿ ಯೋಚಿಸಬೇಕಾಗುತ್ತದೆ. ಗುಲಾಮರಾಗಿದ್ದಾಗ ಏನೋ ನಡೆಯುತ್ತಿತ್ತು. ಆದರೀಗ ಅದು ಸಾಧ್ಯವಿಲ್ಲ. ನಾವು ಬ್ರಿಟಿಷರಿಂದ ಸ್ವಾತಂತ್ರ್ಯ ಪಡೆದಾಗಿದೆ' ಎಂದಿದ್ದಾರೆ

ಭಾಷಣದ ನಡುವೆ ಮೋಹನ್ ಭಾಗವತ್ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಹಾಗೂ ಭಗಿನಿ ನಿವೇದಿತಾ ಕುರಿತಾಗಿಯೂ ಉಲ್ಲೇಖಿಸಿದ್ದರೆಂಬುವುದು ಗಮನಾರ್ಹ
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಅಗರ್ಭ ಶ್ರೀಮಂತನೆಂದು ಎಂಜಿನಿಯರ್‌ನನ್ನ ಮದುವೆಯಾದಳು... ಫಸ್ಟ್‌ ನೈಟ್‌ನಲ್ಲೇ ಬಯಲಾಯ್ತು ಕರಾಳ ಸತ್ಯ!
ನನ್ನ ಜೊತೆಗೂ ಬಾ: ಗೆಳೆಯನ ಗರ್ಲ್‌ಫ್ರೆಂಡ್‌ಗೆ ಸಂದೇಶ: ಪ್ರಶ್ನಿಸಿದ್ದಕ್ಕೆ ಸ್ನೇಹಿತನನ್ನೇ ಕೊಂದು ಪೀಸ್ ಪೀಸ್ ಮಾಡಿದ