
ತೆಲಂಗಾಣ(ಏ.30): ಸಾಮಾಜಿಕ ಅಂತರ ಪಾಲನೆ, ಸೋಂಕಿ ಹರದಂತೆ ನೋಡಿಕೊಳ್ಳಲು ತಂತ್ರಜ್ಞಾನಗಳ ಬಳಕೆ ಉತ್ತಮ. ಇದರ ಅಂಗವಾಗಿ ಇದೀಗ ನಾಗರೀಕ ವಿಮಾನಯಾನ ಸಚಿವಾಲಯ ತೆಲಂಗಾಣ ಸರ್ಕಾರಕ್ಕೆ ಡ್ರೋನ್ ಮೂಲಕ ಲಸಿಕೆ ನೀಡಲು ಗ್ರೀನ್ ಸಿಗ್ನಲ್ ನೀಡಿದೆ.
ಕೊರೋನಾ ನಿಯಂತ್ರಣಕ್ಕೆ ಬೆಂಗಳೂರಿನಲ್ಲಿ ಡ್ರೋಣ್ ಮೂಲಕ ಸ್ಯಾನಿಟೈಸರ್ ಸಿಂಪಡಣೆ
ಬೆಂಗಳೂರಿನಲ್ಲಿ ಸ್ಯಾನಿಟೈಸ್ ಮಾಡಲು ಕರ್ನಾಟಕ ಸರ್ಕಾರ ಡ್ರೋನ್ ಬಳಕೆ ಮಾಡುತ್ತಿದೆ. ಇದರ ಬೆನ್ನಲ್ಲೇ ತೆಲಂಗಾಣ ಸರ್ಕಾರ ಲಸಿಕೆ ನೀಡಲು ಡ್ರೋನ್ ಬಳಕೆ ಮಾಡಲು ಅನುಮತಿ ಕೇಳಿತ್ತು. ಇದಕ್ಕೆ ವಿಮಾನಯಾನ ಸಚಿವಾಲಯ ಒಪ್ಪಿಗೆ ಸೂಚಿಸಿದೆ.
ಇದೀಗ ತೆಲಂಗಾಣ ಸರ್ಕಾರ ರಾಜ್ಯದಲ್ಲಿ ಕೊರೋನಾ ನಿಯಂತ್ರಿಸಲು ಡ್ರೋನ್ ಬಳಕೆ ಮಾಡಲಿದೆ. ತೆಲಂಗಾಣದ ಹಲವು ಭಾಗಗಳಿಗೆ ಡ್ರೋನ್ ಮೂಲಕ ಲಸಿಕೆ ರವಾನೆಯಾಗಲಿದೆ. ಈ ಮೂಲಕ ರಾಜ್ಯಜಲ್ಲಿ ಸರಾಗವಾಗಿ ಲಸಿಕೆ ಹಂಚಲು ತೆಲಂಗಾಣ ಮುಂದಾಗಿದೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ