ಶಾಲಾ ಮೈದಾನದಲ್ಲಿ ಆಟವಾಡುತ್ತಿದ್ದ 3ನೇ ತರಗತಿ ಬಾಲಕಿ ಹೃದಯಾಘಾತದಿಂದ ಸಾವು!

Published : Sep 14, 2024, 10:04 PM IST
ಶಾಲಾ ಮೈದಾನದಲ್ಲಿ ಆಟವಾಡುತ್ತಿದ್ದ 3ನೇ ತರಗತಿ ಬಾಲಕಿ ಹೃದಯಾಘಾತದಿಂದ ಸಾವು!

ಸಾರಾಂಶ

ಶಾಲಾ ಮೈದಾನದಲ್ಲಿ ಆಟವಾಡುತ್ತಿದ್ದ 3ನೇ ತರಗತಿ ಬಾಲಕಿ ಹೃದಯಾಘಾತದಿಂದ ಕುಸಿದು ಬಿದ್ದ ಮೃತಪಟ್ಟ ಘಟನೆ ನಡೆದಿದೆ. ಈ ಘಟನೆ ಮತ್ತೆ ಹಾರ್ಟ್ ಆ್ಯಟಾಕ್ ಆತಂಕ ಹೆಚ್ಚಿಸಿದೆ.

ಲಖನೌ(ಸೆ.14) ಚಿಕ್ಕ ಮಕ್ಕಳು, ಯುವ ಸಮೂಹ ಸೇರಿದಂತೆ ಬಹುತೇಕರು ಇದೀಗ ಹೃದಯಾಘಾತ ಸಮಸ್ಯೆಗೆ ಸಿಲುಕುತ್ತಿದ್ದಾರೆ. ಕಳೆದ 4 ವರ್ಷದಲ್ಲಿ ಹೃದಯಾಘಾತ ಸಂಖ್ಯೆ ಹೆಚ್ಚಾಗುತ್ತಿದೆ ಅನ್ನೋ ವರದಿ ಆತಂಕ ತರಿಸುತ್ತಿದೆ. ಇದರ ಬೆನ್ನಲ್ಲೇ 3ನೇ ತರಗತಿ ಬಾಲಕಿ ಶಾಲಾ ಮೈದಾನದಲ್ಲಿ ಆಟವಾಡುತ್ತಿದ್ದ ವೇಳೆ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟ ಘಟನೆ ಉತ್ತರ ಪ್ರದೇಶದ ಲಖನೌದಲ್ಲಿ ನಡೆದಿದೆ. ಈ ಘಟನೆ ಹಾರ್ಟ್ ಆ್ಯಟಾಕ್ ಕುರಿತು ಆತಂಕ ಹೆಚ್ಚಿಸಿದೆ. 

ಶಾಲಾ ಪ್ರಿನ್ಸಿಪಾಲ್ ನೀಡಿದ ಮಾಹಿತಿ ಪ್ರಕಾರ, 3ನೇ ತರಗತಿಯಲ್ಲಿ ಓದುತ್ತಿರುವ ಮಾನ್ವಿ ಸಿಂಗ್ ತರಗತಿಯ ಇತರ ವಿದ್ಯಾರ್ಥಿಗಳ ಜೊತೆ ಶಾಲಾ ಮೈದಾನದಲ್ಲಿ ಆಟವಾಡಿದ್ದಾರೆ. ಈ ವೇಳೆ ಏಕಾಏಕಿ 9 ವರ್ಷದ ಮಾನ್ವಿ ಸಿಂಗ್ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾಳೆ.ಇತರ ವಿದ್ಯಾರ್ಥಿಗಳು ಮಾನ್ವಿಯನ್ನು ಎಬ್ಬಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ಸಾಧ್ಯವಾಗಿಲ್ಲ. ಹೀಗಾಗಿ ಕೆಲ ವಿದ್ಯಾರ್ಥಿಗಳ ಓಡೋಡಿ ಶಾಲೆಗೆ ಆಗಮಿಸಿ ಶಿಕ್ಷಕರಿಗೆ ಮಾಹಿತಿ ನೀಡಿದ್ದಾರೆ.

ದೇಶಭಕ್ತಿ ಗೀತೆ ಹಾಡುತ್ತಲೇ ಹೃದಯಾಘಾತದಿಂದ ಪ್ರಾಣ ಬಿಟ್ಟ ಮಹಿಳೆ, ಸೆರೆಯಾಯ್ತು ಕೊನೆ ಕ್ಷಣ!

ಶಾಲಾ ಸಿಬ್ಬಂದಿಗಳು ಹಾಗೂ ಶಿಕ್ಷಕರು ತಕ್ಷಣವೇ ಸ್ಛಳೀಯ ಆಸ್ಪತ್ರೆ ದಾಖಲಿಸಿದ್ದಾರೆ. ಇತ್ತ ಆಸ್ಪತ್ರೆಗೆ ಧಾವಿಸಿದ ಪೋಷಕರು ಮಲ್ಟಿಸ್ಪೆಷಾಲಿಟಿ ಚಂದನಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಷ್ಟೊತ್ತಿಗೆ ಬಾಲಕಿ ಮಾನ್ವಿ ಮೃತಪಟ್ಟಿದ್ದಾಳೆ. ಪರಿಶೀಲನೆ ನಡೆಸಿದ ವೈದ್ಯರು ಹೃದಯಾಘಾತದಿಂದ ಬಾಲಕಿ ಮೃತಪಟ್ಟಿರುವುದಾಗಿ ಖಚಿತಪಡಿಸಿದ್ದಾರೆ. ಮಾಹಿತಿ ತಿಳಿದು ಪೊಲೀಸರು ಆಸ್ಪತ್ರೆ ದಾಖಲಿಸಿ ವೈದ್ಯರಿಂದ ವರದಿ ಪಡೆದಿದ್ದಾರೆ.

ಚುರುಕಿನ ವಿದ್ಯಾರ್ಥಿ, ಯಾವುದೇ ಆರೋಗ್ಯ ಸಮಸ್ಯೆ ಇಲ್ಲದ ಮಾನ್ವಿ ದಿಢೀರ್ ಹೃದಯಾಘಾತಕ್ಕೆ ಬಲಿಯಾಗಿರುವುದು ಆತಂಕ ಹೆಚ್ಚಿಸಿದೆ. ವಿದ್ಯಾರ್ಥಿ ನಿಧನದಿಂದ ಶಾಲೆಯಲ್ಲಿ ಶೋಕಾಚರಣೆ ಆಚರಿಸಿ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿದ್ದಾರೆ.  ಇತ್ತ ಪೋಷಕರು ಮಗಳನ್ನು ಕಳೆದುಕೊಂಡು ಕಂಗಾಲಾಗಿದ್ದಾರೆ. 

ಚಿಕ್ಕ ಮಕ್ಕಳಲ್ಲೂ ಹೃದಾಯಾಘತ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿರುವುದು ಆರೋಗ್ಯದ ಕುರಿತು ಹಲವು ಸವಾಲುಗಳನ್ನೇ ಮುಂದಿಟ್ಟಿದೆ. ಆರೋಗ್ಯ ಕಾಪಾಡಿಕೊಂಡವರೇ ಗಂಭೀರ ಸಮಸ್ಯೆಗಳಿಗೆ ತುತ್ತಾಗುತ್ತಿದ್ದಾರೆ. ಅಂಕಿ ಅಂಶಗಳ ಪ್ರಕಾರ, ಹೃದಯಾಘಾತ ಸಮಸ್ಯೆಗಳ ಪ್ರಮಾಣ ಗಣನೀಯವಾಗಿ ಹೆಚ್ಚಾಗಿದೆ. ಇದೇ ರೀತಿ ಹಲವು ಘಟನೆಗಳು ವರದಿಯಾಗಿದೆ. ಜಿಮ್ ಅಭ್ಯಾಸ ಮಾಡುತ್ತಿದ್ದ ವ್ಯಕ್ತಿ ಕುಸಿದು ಬಿದ್ದು ಸಾವನ್ನಪ್ಪಿದ ಹಲವು ಘಟನೆಗಳು ನಡೆದಿದೆ. ಕುಳಿತಲ್ಲೇ ಹೃದಯಾಘಾತಕ್ಕೆ ಬಲಿಯಾದ ವಿಡಿಯೋಗಳು ಸುದ್ದಿಯಾಗಿದೆ. ಈ ರೀತಿ  ನಡೆದಿರುವ ಘಟನೆಗಳು ಆರೋಗ್ಯ ಕುರಿತ ಆತಂಕ ಹೆಚ್ಚಿಸುತ್ತಿದೆ. 

ಪೆಟ್ರೋಲ್ ತುಂಬಿಸಲು ಕಾಯುತ್ತಿದ್ದ ಶಿಕ್ಷಕನಿಗೆ ದಿಢೀರ್ ಹೃದಯಾಘಾತ, ಸಿಸಿವಿಯಲ್ಲಿ ಕೊನೆ ಕ್ಷಣ ಸೆರೆ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕರ್ನಾಟಕಕ್ಕೆ ಶೀತ ಅಲೆಯ ಕಂಟಕ: ರಾಯಚೂರಿನಲ್ಲಿ 9.4 ಡಿಗ್ರಿಗೆ ಕುಸಿದ ತಾಪಮಾನ! ಎಲ್ಲೆಲ್ಲಿ ಆರೆಂಜ್ ಅಲರ್ಟ್?
ಮುಕೇಶ್ ಅಂಬಾನಿ 68ರಲ್ಲೂ ಫಿಟ್ & ಎನರ್ಜಿಟಿಕ್‌ ಆಗಿರಲು ಬೆಳಗ್ಗಿನ ಈ ಅಭ್ಯಾಸ ಕಾರಣ!