ಹವಾಮಾನ ಬದಲಾವಣೆಯೂ ಬೆಂಗಳೂರಿಗೆ ಜನರ ಸಾಮೂಹಿಕ ವಲಸೆಗೆ ಕಾರಣವಾಗಬಹುದು: ಮೂರ್ತಿ

Published : Dec 22, 2024, 11:08 AM IST
ಹವಾಮಾನ ಬದಲಾವಣೆಯೂ ಬೆಂಗಳೂರಿಗೆ ಜನರ ಸಾಮೂಹಿಕ ವಲಸೆಗೆ ಕಾರಣವಾಗಬಹುದು: ಮೂರ್ತಿ

ಸಾರಾಂಶ

ಹವಾಮಾನ ಬದಲಾವಣೆಯಿಂದಾಗಿ ಭವಿಷ್ಯದಲ್ಲಿ ವಾಸಿಸಲು ಯೋಗ್ಯವಲ್ಲದ ಸ್ಥಳಗಳಿಂದ ಬೆಂಗಳೂರು, ಪುಣೆ ಹಾಗೂ ಹೈದರಾಬಾದ್‌ಗೆ ಜನ ಸಾಮೂಹಿಕ ವಲಸೆ ಬರಬಹುದು ಎಂದು ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಅಭಿಪ್ರಾಯಪಟ್ಟಿದ್ದಾರೆ. 

ಪುಣೆ: ವರ್ಷದಿಂದ ವರ್ಷಕ್ಕೆ ವೇಗವಾಗಿ ಬದಲಾಗುತ್ತಿರುವ ಹವಾಮಾನ ಬದಲಾವಣೆಯನ್ನು ಸಮಯಕ್ಕೆ ತಕ್ಕಂತೆ ಎದುರಿಸಲು ವಿಫಲವಾದರೆ ತಾಪಮಾನ ಮತ್ತು ಹವಾಮಾನ ಬದಲಾವಣೆಯಿಂದಾಗಿ ಭವಿಷ್ಯದಲ್ಲಿ ವಾಸಿಸಲು ಯೋಗ್ಯವಲ್ಲದ ಸ್ಥಳಗಳಿಂದ ಬೆಂಗಳೂರು, ಪುಣೆ ಹಾಗೂ ಹೈದರಾಬಾದ್‌ಗೆ ಜನ ಸಾಮೂಹಿಕ ವಲಸೆ ಬರಲು ಕಾರಣವಾಗಬಹುದು ಎಂದು ಇನ್‌ಫೋಸಿಸ್ ಸಹ ಸಂಸ್ಥಾಪಕ ಟೆಕ್ ದೈತ್ಯ ನಾರಾಯಣ ಮೂರ್ತಿ ಹೇಳಿದ್ದಾರೆ.  ಭಾರತ ಹಾಗೂ ಕೆಲ ಆಫ್ರಿಕಾದ ದೇಶಗಳು ತೀವ್ರತರದ ತಾಪಮಾನ ಏರಿಕೆಗೆ ಗುರಿಯಾಗುತ್ತಿವೆ. ಹೀಗಾಗಿ ಮುಂದಿನ 20- 25 ವರ್ಷಗಳಲ್ಲಿ ಭಾರತದ ಕೆಲ ಸ್ಥಳಗಳು ವಾಸಿಸಲು ಯೋಗ್ಯವಲ್ಲದ ಸ್ಥಳವಾಗಿ ಬದಲಾಗಬಹುದು. ಹೀಗಾಗಿ ಈ ಸ್ಥಳಗಳಿಂದ ಜನ ಬೆಂಗಳೂರು, ಪುಣೆ, ಹೈದರಾಬಾದ್‌ನಂತಹ ಸ್ಥಳಗಳಿಗೆ ಸಾಮೂಹಿಕ ವಲಸೆ ಹೆಚ್ಚಾಗಬಹುದು ಎಂದು ನಾರಾಯಣಮೂರ್ತಿಯವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 

ಅಲ್ಲದೇ ಟ್ರಾಫಿಕ್‌ ಹಾಗೂ ವಾಯು ಮಾಲಿನ್ಯದ ಸಮಸ್ಯೆಯಿಂದಾಗಿ ಬೆಂಗಳೂರು, ಪುಣೆ, ಹೈದರಾಬಾದ್‌ನ ಮುಂದಿನ ದಿನಗಳಲ್ಲಿ  ವಾಸಿಸಲು ಬಹಳ ಕಷ್ಟವೆನಿಸುವ ಸ್ಥಳವಾಗಲಿದೆ ಎಂದು ನಾರಾಯಣಮೂರ್ತಿ ಹೇಳಿದ್ದಾರೆ. ಪುಣೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಅವರು ಈ ಅಭಿಪ್ರಾಯ ತಿಳಿಸಿದ್ದಾರೆ. ನಾವು ಭಾರತದಲ್ಲಿ, ವಿಶೇಷವಾಗಿ ಕಾರ್ಪೊರೇಟ್ ವಲಯ, ರಾಜಕಾರಣಿಗಳು ಮತ್ತು ಅಧಿಕಾರಶಾಹಿಗಳೊಂದಿಗೆ ಸಹಕರಿಸಬೇಕು ಮತ್ತು ಸಾಮೂಹಿಕ ವಲಸೆ ಇಲ್ಲ ಎಂದು ಖಚಿತಪಡಿಸಿಕೊಳ್ಳಬೇಕು. ಅದು ಸವಾಲಿನ ವಿಚಾರ.  ರಾಜಕಾರಣಿಗಳು ಮತ್ತು ಅಧಿಕಾರಶಾಹಿಗಳೊಂದಿಗೆ ಕಾರ್ಪೊರೇಟ್ ಜಗತ್ತು ಈ ಸಮಸ್ಯೆಯನ್ನು ಪರಿಹರಿಸಲು ಸಾಧ್ಯವಾಗುತ್ತದೆ ಎಂದು ಮೂರ್ತಿ ವಿಶ್ವಾಸ ವ್ಯಕ್ತಪಡಿಸಿದರು. ಭಾರತೀಯರು ಎಲ್ಲವನ್ನೂ ಕೊನೆ ಗಳಿಗೆಯಲ್ಲಿ ಮಾಡುವ ಮನಸ್ಥಿತಿ ಹೊಂದಿದ್ದಾರೆ. ಆದರೆ 2030ರ ವೇಳೆಗೆ ದೇಶದ ಈ ಮನಸ್ಥಿತಿ ಬದಲಾಗಲಿದ್ದು ಗಮನಾರ್ಹ ಪ್ರಗತಿ ಕಂಡುಬರಲಿದೆ ಎಂದು ಅವರು ಹೇಳಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕಟಿಹಾರ್ ಜಂಕ್ಷನ್‌ನಲ್ಲಿ ಮಹಿಳೆಯ ಭಯಾನಕ ಅನುಭವ: 30-40 ಪುರುಷರು ನುಗ್ಗಲು ಯತ್ನ, ಶೌಚಾಲಯದಲ್ಲಿ ಸಿಲುಕಿದ ಮಹಿಳೆ!
ದೇಶದ ಅಗ್ರ ಟಿ20 ಟೂರ್ನಿಯಲ್ಲೇ ಮ್ಯಾಚ್‌ ಫಿಕ್ಸಿಂಗ್‌, ನಾಲ್ವರು ಕ್ರಿಕೆಟಿಗರ ಸಸ್ಪೆಂಡ್‌ ಮಾಡಿ ತನಿಖೆಗೆ ಆದೇಶಿಸಿದ ಬಿಸಿಸಿಐ!