ಸಿಎಂ ಎಂದರೆ ರಾಜನಲ್ಲ; ಮನಬಂದಂತೆ ನಡೆಯಲು ಉಳಿಗಮಾನ್ಯ ಯುಗವಲ್ಲ: ಸುಪ್ರೀಂ ಕೋರ್ಟ್ ತಪಾರಕಿ!

Published : Sep 06, 2024, 07:27 AM IST
ಸಿಎಂ ಎಂದರೆ ರಾಜನಲ್ಲ; ಮನಬಂದಂತೆ ನಡೆಯಲು ಉಳಿಗಮಾನ್ಯ ಯುಗವಲ್ಲ: ಸುಪ್ರೀಂ ಕೋರ್ಟ್ ತಪಾರಕಿ!

ಸಾರಾಂಶ

‘ಮುಖ್ಯಮಂತ್ರಿ ಎಂದರೆ ಹಳೆಯ ಕಾಲದ ರಾಜನಂತಲ್ಲ. ಅವರು ಇಂದು ಇತರರ ಸಲಹೆ ಕೇಳಿ ಅದಕ್ಕೆ ಅನುಗುಣವಾಗಿ ಕಾರ್ಯನಿರ್ವಹಿಸಬೇಕು’ ಎಂದು ಸುಪ್ರೀಂ ಕೋರ್ಟ್ ಚಾಟಿ ಬೀಸಿದೆ.

ನವದೆಹಲಿ (ಸೆ.6): ‘ಮುಖ್ಯಮಂತ್ರಿ ಎಂದರೆ ಹಳೆಯ ಕಾಲದ ರಾಜನಂತಲ್ಲ. ಅವರು ಇಂದು ಇತರರ ಸಲಹೆ ಕೇಳಿ ಅದಕ್ಕೆ ಅನುಗುಣವಾಗಿ ಕಾರ್ಯನಿರ್ವಹಿಸಬೇಕು’ ಎಂದು ಸುಪ್ರೀಂ ಕೋರ್ಟ್ ಚಾಟಿ ಬೀಸಿದೆ.

ಉತ್ತರಾಖಂಡದಲ್ಲಿ ರಾಹುಲ್ ಎಂಬ ಅರಣ್ಯಾಧಿಕಾರಿಯನ್ನು ರಾಜಾಜಿ ಹುಲಿ ರಕ್ಷಿತಾರಣ್ಯದ ಮುಖ್ಯಸ್ಥರನ್ನಾಗಿ ಧಾಮಿ ನೇಮಿಸಿದ್ದರು. ‘ರಾಹುಲ್‌ ಅವರ ವಿರುದ್ಧ ಕಾರ್ಬೆಟ್‌ ಹುಲಿ ರಕ್ಷಿತಾರಣ್ಯದಲ್ಲಿನ ಮರ ಕಡಿತ ಪ್ರಕರಣದಲ್ಲಿ ಇಲಾಖಾ ತನಿಖೆ ನಡೆಯುತ್ತಿದ್ದು, ಅವರನ್ನು ನೇಮಿಸಬಾರದು’ ಎಂಬ ರಾಜ್ಯದ ಅರಣ್ಯ ಅರಣ್ಯ ಸಚಿವರು ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಯ ಆಕ್ಷೇಪವನ್ನು ಧಾಮಿ ಕಡೆಗಣಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಸುಪ್ರಿಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆ ಆಗಿತ್ತು.

ಇದರ ವಿಚಾರಣೆ ನಡೆಸಿದ ನ್ಯಾ। ಪಿ.ಕೆ. ಮಿಶ್ರಾ ಹಾಗೂ ನ್ಯಾ। ಕೆ.ಎಸ್‌. ವಿಶ್ವನಾಥನ್ ಅವರ ಪೀಠ, ‘ಇಲಾಖಾ ತನಿಖೆಯ ಆರೋಪ ಹೊತ್ತ ರಾಹುಲ್‌ ಮೇಲೆ ನಿಮಗೇಕೆ (ಸಿಎಂ ಧಾಮಿ) ಅಷ್ಟು ಪ್ರೀತಿ? ಸಚಿವರು ಹಾಗೂ ಮುಖ್ಯ ಕಾರ್ಯದರ್ಶಿಗಳು ಆಕ್ಷೇಪ ಎತ್ತಿದರೂ ರಾಹುಲ್‌ ಅವರನ್ನೇ ನೇಮಿಸಿದ್ದಕ್ಕೇಕೆ? ರಾಹುಲ್‌ ನಿರ್ದೋಷಿ ಎಂದು ತನಿಖೆಯಲ್ಲಿ ಸಾಬೀತಾಗುವವರೆಗೆ ಅನ್ಯರನ್ನು ಏಕೆ ಆ ಹುದ್ದೆಗೆ ನೇಮಿಸಲಿಲ್ಲ?’ ಎಂದು ಪ್ರಶ್ನಿಸಿತು.

‘ಒಂದು ರಾಜ್ಯದ ಮುಖ್ಯಸ್ಥನಾದವನು ಹಳೆಯ ಕಾಲದ ರಾಜನಂತೆ ‘ನನ್ನ ಮಾತೇ ಅಂತಿಮ’ ಎಂಬಂತೆ ನಡೆದುಕೊಳ್ಳುವಂತಿಲ್ಲ. ಕೇವಲ ಮುಖ್ಯಮಂತ್ರಿ ಪದವಿಯಲ್ಲಿದ್ದೇನೆ ಎಂಬ ಮಾತ್ರಕ್ಕೆ ಮನಬಂದಂತೆ ನಡೆದುಕೊಳ್ಳಬಹುದೆ? ಹೀಗೆಯೇ ನಡೆದುಕೊಂಡು ಇತರರ ಆಕ್ಷೇಪ ನಿರ್ಲಕ್ಷಿಸಿದ್ದಾರೆ. ಇದು ಊಳಿಗಮಾನ್ಯ ಪದ್ಧತಿಯ ಯುಗವಲ್ಲ’ ಎಂದು ಚಾಟಿ ಬೀಸಿತು.

ರಾಹುಲ್‌ ಎತ್ತಂಗಡಿ:

ಈ ನಡುವೆ ಸುಪ್ರೀಂ ಕೋರ್ಟ್‌ ತಪರಾಕಿ ಹಾಕುತ್ತಿದ್ದಂತೆಯೇ ರಾಜಾಜಿ ಹುಲಿ ರಕ್ಷಿತಾರಣ್ಯ ನಿದೇಶಕ ಹುದ್ದೆಯಿಂದ ರಾಹುಲ್‌ರನ್ನು ಮುಖ್ಯವಲ್ಲದ ಬೇರೆ ಹುದ್ದೆಗೆ ಎತ್ತಂಗಡಿ ಮಾಡಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ನನ್ನ ತಂಗಿಯರಿಗಾಗಿ ಅವರನ್ನು ಬಿಟ್ಟುಬಿಡಿ: ತನ್ನ ಕೊಲ್ಲಲೆತ್ನಿಸಿದ ತಂದೆಯ ಬಿಡುಗಡೆಗೆ ಬೇಡಿದ ಬಾಲಕಿ
25 ಜನರ ಬಲಿ ಪಡೆದ ಗೋವಾ ಕ್ಲಬ್ ಬೆಂಕಿ ದುರಂತ ಸಂಭವಿಸಿದ ಕೆಲ ಗಂಟೆಗಳಲ್ಲೇ ಥೈಲ್ಯಾಂಡ್‌ಗೆ ಹಾರಿದ ಕ್ಲಬ್ ಮಾಲೀಕ