
ಚೆನ್ನೈ (ಆ.31) ತಮಿಳುನಾಡು ಸಿಎಂ ಜೊಸೆಫ್ ವಿಜಯ್ಗೆ ಇದೀಗ ಸರ್ಕಾರ ಮುನ್ನಡೆಸುವ ಸಂಕಷ್ಟಗಳು ಹೆಚ್ಚಾಗುತ್ತಿದೆ. ಕಾಂಗೆಸ್ ಬೆಂಬಲದೊಂದಿಗೆ ಸರ್ಕಾರ ರಚಿಸಿರುವ ಟಿವಿಕೆಗೆ ಇದೀಗ ಕಸಿವಿಸಿ ಶುರುವಾಗಿದೆ. ಸಿಎಂ ವಿಜಯ್ಗೆ ನೇರ ಎಚ್ಚರಿಕೆ ನೀಡಲಾಗಿದೆ. ತಮಿಳುನಾಡು ಟಿವಿಕೆ ಸರ್ಕಾರದಲ್ಲಿರುವ ಕಾಂಗ್ರೆಸ್ನ ಎಲ್ಲಾ ಮಂತ್ರಿಗಳು ರಾಜೀನಾಮೆ ನೀಡುವ ಎಚ್ಚರಿಕೆಯನ್ನು ನೀಡಲಾಗಿದೆ. ಸಿಎಂ ಜೊಸೆಫ್ ವಿಜಯ್ ಹಾಗೂ ಟಿವಿಕೆ ಸರ್ಕಾರ ಇಕ್ಕಟ್ಟಿನಲ್ಲಿ ಸಿಲುಕಿದೆ. ಇದರ ಬೆನ್ನಲ್ಲೇ ಮೈತ್ರಿ ಪಕ್ಷಗಳ ನಡುವಿನ ಒಡಕು ಸರ್ಕಾರ ಪತನಕ್ಕೆ ಕಾರಣಾಗುತ್ತಾ ಅನ್ನೋ ಚರ್ಚೆಗಳು ಶುರುವಾಗಿದೆ.
ತಮಿಳುನಾಡು ಟಿವಿಕೆ ಸರ್ಕಾರದಲ್ಲಿ ಪ್ರವಾಸೋದ್ಯಮ ಸಚಿವರಾಗಿರುವ ಕಾಂಗ್ರೆಸ್ ನಾಯಕ ಎಸ್ ರಾಜೇಶ್ ಕುಮಾರ್ ನೇರವಾಗಿ ಸಿಎಂ ವಿಜಯ್ಗೆ ವಾರ್ನಿಂಗ್ ನೀಡಿದ್ದಾರೆ. 2029ರ ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ಮೈತ್ರಿ ಪಕ್ಷಗಳು ರಾಹುಲ್ ಗಾಂಧಿಯನ್ನು ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಲು ಆಸಕ್ತಿ ತೋರಿದೆ. ಆದರೆ ಟಿವಿಕೆ ಹಿಂದೇಟು ಹಾಕುತ್ತಿದೆ. ರಾಹುಲ್ ಗಾಂಧಿಯನ್ನು ಪ್ರಧಾನಿ ಅಭ್ಯರ್ಥಿ ಎಂದು ಒಪ್ಪಿಕೊಳ್ಳದಿದ್ದರೆ, ಟಿವಿಕೆ ಸರ್ಕಾರದಲ್ಲಿರುವ ಎಲ್ಲಾ ಕಾಂಗ್ರೆಸ್ ಸಚಿವರು ರಾಜೀನಾಮೆ ನೀಡುವುದಾಗಿ ಎಚ್ಚರಿಸಿದ್ದಾರೆ.
ಕನ್ಯಾಕುಮಾರಿಯಲ್ಲಿ ನಡೆದ ಕಾಂಗ್ರೆಸ್ ಸಮಿತಿಯಲ್ಲಿ ಪಾಲ್ಗೊಂಡು ಪ್ರವಾಸೋದ್ಯಮ ಸಚಿವ ಎಸ್ ರಾಜೇಶ್ ಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. 2029ರ ಲೋಕಸಭಾ ಚುನಾವಣೆಗೆ ಟಿವಿಕೆ ಕಾರ್ಯಕರ್ತರು, ನಾಯಕರು ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಟಿವಿಕೆ ನಾಯಕರು ಹಾಗೂ ಕಾರ್ಯಕರ್ತರು 2029ರ ಚುನಾವಣೆಗೆ ಜೊಸೆಫ್ ವಿಜಯ್ ಪ್ರಧಾನಿ ಅಭ್ಯರ್ಥಿ ಎಂದು ಹೇಳಿಕೆ ನೀಡುತ್ತಿದ್ದಾರೆ. ಆದರೆ ಇಂಡಿಯಾ ಒಕ್ಕೂಟದ ಬಹುತೇಕ ಪಕ್ಷಗಳು ರಾಹುಲ್ ಗಾಂಧಿಯನ್ನು ಪ್ರಧಾನಿ ಅಭ್ಯರ್ಥಿ ಎಂದು ಒಪ್ಪಿಕೊಂಡಿದೆ. ಟಿವಿಕೆ ಒಪ್ಪಿಕೊಳ್ಳದಿದ್ದರೆ ರಾಜೀನಾಮೆ ನೀಡಿ ಸರ್ಕಾರದಿಂದ ಹೊರಬರುತ್ತೇವೆ ಎಂದಿದ್ದಾರೆ. ಈ ಮೂಲಕ ಪರೋಕ್ಷವಾಗಿ ಸರ್ಕಾರವನ್ನೇ ಉರುಳಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಟಿವಿಕೆ ನಾಯಕರು ಪದೇ ಪದೇ ಕೆಲ ಸರ್ವೆಗಳನ್ನು ಮುಂದಿಟ್ಟುಕೊಂಡು ಪ್ರಧಾನಿ ಅಭ್ಯರ್ಥಿ ಕುರಿತು ಗೊಂದಲ ಹೇಳಿಕೆ ನೀಡುತ್ತಿದ್ದಾರೆ. ಆದರೆ ರಾಹುಲ್ ಗಾಂಧಿ ಮುಂದಿನ ಪ್ರಧಾನಿ ಅಭ್ಯರ್ಥಿ, ಇದರಲ್ಲಿ ಅನುಮಾನ ಗೊಂದಲಗಳಿಲ್ಲ. ಟಿವಿಕೆ ಅಂಗೀಕರಿಸಬೇಕು. ರಾಹುಲ್ ಗಾಂಧಿಯನ್ನು ಪ್ರಧಾನಿ ಮಾಡಲು ಕೆಲಸ ಮಾಡಬೇಕು ಎಂದು ಸೂಚಿಸಿದ್ದಾರೆ.
ತಮಿಳುನಾಡಿನಲ್ಲಿ 108 ಸ್ಥಾನ ಗೆದ್ದು ಸರ್ಕಾರ ರಚಿಸಿರುವ ವಿಜಯ್ ಜೊಸೆಫ್ ಇದೀಗ ಮೈತ್ರಿ ಪಕ್ಷ ಅದರಲ್ಲೂ ಕಾಂಗ್ರೆಸ್ನಿಂದ ಮುಜುಗುರ ಸೃಷ್ಟಿಯಾಗುತ್ತಿದೆ. ಬಹಿರಂಗ ಹೇಳಿಕೆಗಳಿಂದ ಟಿವಿಕೆ ಸರ್ಕಾರಕ್ಕೂ ಹಿನ್ನಡೆಯಾಗುತ್ತಿದೆ ಅನ್ನೋ ಮಾತುಗಳು ಕೇಳಿಬರುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ