ಮಾಜಿ ಕೇಂದ್ರ ಸಚಿವ ದಿಲೀಪ್‌ ರಾಯ್‌ಗೆ 3 ವರ್ಷ ಜೈಲು!

Published : Oct 27, 2020, 07:43 AM IST
ಮಾಜಿ ಕೇಂದ್ರ ಸಚಿವ ದಿಲೀಪ್‌ ರಾಯ್‌ಗೆ 3 ವರ್ಷ ಜೈಲು!

ಸಾರಾಂಶ

ಮಾಜಿ ಕೇಂದ್ರ ಸಚಿವ ದಿಲೀಪ್‌ ರಾಯ್‌ಗೆ 3 ವರ್ಷ ಜೈಲು| ಕಲ್ಲಿದ್ದಲು ಹಗರಣ ಮೇಲ್ಮನವಿ ಸಲ್ಲಿಕೆಗಾಗಿ ಜಾಮೀನು

ನವದೆಹಲಿ(ಅ.27): ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ದಿಲೀಪ್‌ ರಾಯ್‌ಗೆ ಸಿಬಿಐ ನ್ಯಾಯಾಲಯ ಸೋಮವಾರ 3 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಬೆನ್ನಲ್ಲೇ ಅವರಿಗೆ ಜಾಮೀನು ನೀಡಿ, ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು 1 ತಿಂಗಳ ಕಾಲಾವಕಾಶ ನೀಡಿದೆ. ರಾಯ್‌ ಅವರು ಅಟಲ್‌ ಬಿಹಾರಿ ವಾಜಪೇಯಿ ಮಂತ್ರಿಮಂಡಲದಲ್ಲಿ ಕಲ್ಲಿದ್ದಲು ಖಾತೆ ರಾಜ್ಯ ಸಚಿವರಾಗಿದ್ದರು. ಈ ವೇಳೆ ಜಾರ್ಖಂಡ್‌ನ ಗಿರಿಧ್‌ ಜಿಲ್ಲೆಯ ಕಲ್ಲಿದ್ದಲು ಗಣಿ ಹಂಚಿಕೆಗೆ ಸಂಬಂಧಿಸಿದಂತೆ ಅಕ್ರಮ ನಡೆಸಿದ ಆರೋಪ ಅವರ ಮೇಲೆ ಕೇಳಿಬಂದಿತ್ತು.

ಈ ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ಸಿಬಿಐ ನ್ಯಾಯಾಧೀಶ ಭರತ್‌ ಪರಾಶರ್‌ ಅವರು, ಮಾಜಿ ಸಚಿವ ರಾಯ್‌ ಅವರಿಗೆ 3 ವರ್ಷ ಸಜೆ, 10 ಲಕ್ಷ ದಂಡ ವಿಧಿಸಿದರು. ಜೊತೆಗೆ ರಾಯ್‌ ಹಾಗೂ ಅವರ ಅವಧಿಯಲ್ಲಿ ಕಲ್ಲಿದ್ದಲು ಸಚಿವಾಲಯದಲ್ಲಿ ಹಿರಿಯ ಅಧಿಕಾರಿಗಳಾಗಿದ್ದ ಪ್ರದೀಪ್‌ ಕುಮಾರ್‌ ಬ್ಯಾನರ್ಜಿ , ನಿತ್ಯಾನಂದ ಗೌತಮ್‌ ಅವರಿಗೆ ತಲಾ 3 ವರ್ಷ ಜೈಲು ಶಿಕ್ಷೆ ಮತ್ತು ತಲಾ 2 ಲಕ್ಷ ದಂಡ ಹಾಗೂ ಕ್ಯಾಸ್ಟ್ರಾನ್‌ ಟೆಕ್ನಾಲಜಿ ಕಂಪನಿ ನಿರ್ದೇಶಕ ಮಹೇಂದ್ರ ಕುಮಾರ್‌ ಅಗರ್‌ವಾಲ್‌ ಅವರಿಗೆ ತಲಾ 3 ವರ್ಷ ಜೈಲು ಶಿಕ್ಷೆ ಹಾಗೂ 60 ಲಕ್ಷ ರು. ದಂಡ ವಿಧಿಸಿದರು.

ಇದೇ ವೇಳೆ ಕ್ಯಾಸ್ಟ್ರಾನ್‌ ಟೆಕ್ನಾಲಜಿಗೆ 60 ಲಕ್ಷ ರು. ಹಾಗೂ ಕ್ಯಾಸ್ಟ್ರಾನ್‌ ಮೈನಿಂಗ್‌ ಲಿಮಿಟೆಡ್‌ಗೆ 10 ಲಕ್ಷ ರು. ದಂಡ ವಿಧಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಕ್ಷಿಸಲು ಹೋದವನನ್ನೇ ಕೆಳಗೆ ತಳ್ಳಿದ ಮಾನಸಿಕ ಅಸ್ವಸ್ಥ: ಜೀವ ಉಳಿಸಲು ಹೋಗಿ ಕೈಕಾಲು ಮುರಿದುಕೊಂಡ ಯುವಕ
ಉದ್ಯಮಿಗೆ ಲವ್‌ ಟ್ರ್ಯಾಪ್‌, ವೈರಲ್‌ ಆದ ಡಿಎಸ್‌ಪಿ ಕಲ್ಪನಾ ವರ್ಮಾ ಚಾಟ್‌..!