
ತಿರುವನಂತಪುರಂ: ‘ಕಾಕ್ರೋಚ್ ಜನತಾ ಪಾರ್ಟಿಯು ಗಡಿಯಾಚೆಗಿನ ಪ್ರಭಾವಿ ಕಾರ್ಯಾಚರಣೆಯ ಒಂದು ಭಾಗ. ಇದು ಭಾರತವನ್ನು ಅಸ್ಥಿರಗೊಳಿಸುವ ಉದ್ದೇಶ ಹೊಂದಿದೆ. ಪ್ರಧಾನಿ ಮೋದಿಯವರನ್ನು ಗುರಿಯಾಗಿಸಿಕೊಂಡು ಇದನ್ನು ನಡೆಸಲಾಗುತ್ತಿದೆ’ ಎಂದು ಕೇರಳ ಬಿಜೆಪಿ ಅಧ್ಯಕ್ಷ, ಶಾಸಕ ರಾಜೀವ್ ಚಂದ್ರಶೇಖರ್ ಶನಿವಾರ ಆರೋಪಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ಕಾಕ್ರೋಚ್ ಪಾರ್ಟಿಯು ಗಡಿಯಾಚೆಗಿನ ಕಾರ್ಯಾಚರಣೆಯ ಒಂದು ಭಾಗ. ವಿಪಕ್ಷಗಳ ಕೆಲವು ಭಾಗಗಳಿಂದ ಇದಕ್ಕೆ ಸಹಾಯ ದೊರೆಯುತ್ತಿದೆ. ಸಾಮಾಜಿಕ ಮಾಧ್ಯಮ, ಬಾಟ್ಗಳು, ಎಐ ಮತ್ತು ಅದರ ಶಸ್ತ್ರಾಸ್ತ್ರೀಕರಣದ ಯುಗದಲ್ಲಿ, ಇಂಥ ಕಾರ್ಯತಂತ್ರಗಳು ದೇಶವನ್ನು ಅಸ್ಥಿರಗೊಳಿಸುವ ಅಪಾಯಕಾರಿ ಮಾರ್ಗಗಳಾಗಿವೆ. ಯಾವುದೇ ಜಿರಳೆ, ವಿಪಕ್ಷದ ರಾಜಕಾರಣಿ, ಮೋದಿ ದ್ವೇಷಿ ಜೋಕರ್ ಅಥವಾ ವಿದೇಶಿ ಹಿತಾಸಕ್ತಿ ದೇಶವನ್ನು ‘ವಿಕಸಿತ ಭಾರತ’ವನ್ನಾಗಿಸುವ ಸಂಕಲ್ಪವನ್ನು ಹಳಿತಪ್ಪಿಸಲು ಸಾಧ್ಯವಿಲ್ಲ’ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ