
ಚೆನ್ನೈ: ತಮಿಳುನಾಡು ಸರ್ಕಾರ ಹಾಗೂ ರಾಜ್ಯಪಾಲರು ನಡುವಿನ ಶೀತಲ ಸಮರ ಈಗ ವಿಕೋಪಕ್ಕೆ ತಿರುಗಿದೆ. ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು ಓದದೇ ತಮಿಳುನಾಡು ರಾಜ್ಯಪಾಲರು ವಿಧಾನಸಭೆ ಕಲಾಪದಿಂದ ಹೊರ ನಡೆದಿದ್ದಾರೆ. ಈ ಹಿಂದೆ ಕೇರಳ ಗವರ್ನರ್ ಆರೀಫ್ ಅಹ್ಮದ್ ಕೂಡ ಇದೇ ರೀತಿ ಮಾಡಿದ್ದರು. ತಮಿಳುನಾಡು ವಿಧಾನಸಭೆಯ ಈ ವರ್ಷದ ಮೊದಲ ಕಲಾಪ ಇಂದು ಆರಂಭವಾಗಿದ್ದು, ಕಲಾಪಕ್ಕೆ ಬಂದ ತಮಿಳುನಾಡು ಗವರ್ನರ್ ಎಂ. ಎನ್. ರವಿ ಅವರು ರಾಜ್ಯದ ಗವರ್ನರ್ ಆಗಿ ಮಾಡಬೇಕಿದ್ದ ಸಂಪ್ರದಾಯಿಕ ಭಾಷಣವನ್ನು ಮಾಡದೇ ಸದನದಿಂದ ಹೊರ ನಡೆದಿದ್ದಾರೆ.
ಮುಖ್ಯಮಂತ್ರಿ ಸ್ಟಾಲಿನ್ ನೇತೃತ್ವದ ತಮಿಳುನಾಡು ಸರ್ಕಾರ ಹಾಗೂ ತಮಿಳುನಾಡು ರಾಜ್ಯಪಾಲ ಎಂ. ಎನ್. ರವಿ ಅವರ ಮಧ್ಯೆ ಈ ಹಿಂದಿನಿಂದಲೂ ನಿರಂತರ ಮುಸುಕಿನ ಗುದ್ದಾಟ ನಡೆಯುತ್ತಿತ್ತು. ನಂತರದಲ್ಲಿ ತಮಿಳುನಾಡು ರಾಜ್ಯಪಾಲರು ತಮಿಳುನಾಡು ಸರ್ಕಾರದ ವಿರುದ್ಧ ಬಹಿರಂಗವಾಗಿಯೇ ವಾಗ್ದಾಳಿ ನಡೆಸಿದ್ದರು. ಹಾಗೆಯೇ ತಮಿಳುನಾಡು ಸರ್ಕಾರವೂ ಕೂಡ ರಾಜ್ಯಪಾಲರ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿತ್ತು. ಆದರೆ ಈಗ ರಾಜ್ಯಪಾಲರು ಭಾಷಣ ಓದದೇ ಸದನದಿಂದ ತೆರಳುವುದರೊಂದಿಗೆ ಈ ಸಮರ ಇನ್ನೊಂದು ಹಂತ ತಲುಪಿದೆ.
ರಾಜ್ಯಪಾಲ ರವಿ ರಾಜ್ಯದ ಶಾಂತಿಗೆ ಅಪಾಯಕಾರಿ: ರಾಷ್ಟ್ರಪತಿಗೆ ತಮಿಳುನಾಡು ಸಿಎಂ ಸ್ಟಾಲಿನ್ ಪತ್ರ
ರಾಜ್ಯಪಾಲರ ಭಾಷಣ ವಾಡಿಕೆಯಂತೆ ರಾಜ್ಯ ಸರ್ಕಾರದ ಕೆಲ ಯೋಜನೆಗಳು ಹಾಗೂ ಕಾರ್ಯವೈಖರಿ ಹಾಗೂ ಕಲಾಪದ ಆಜೆಂಡಾನ್ನು ಹೊಂದಿತ್ತು. ಸಂಪ್ರದಾಯದಂತೆ ತಮಿಳುನಾಡು ಸರ್ಕಾರ ಸಿದ್ಧಪಡಿಸಿದ ಈ ಭಾಷಣದ ಭಾಷಾಂತರವನ್ನು ರಾಜ್ಯಪಾಲರು ಓದಬೇಕಿತ್ತು. ನಂತರ ರಾಜ್ಯ ಸರ್ಕಾರವು ತನ್ನ ಕಾರ್ಯವನ್ನು ಪರಿಶೀಲಿಸಿದ ಮತ್ತು ಅಧಿವೇಶನದ ಕಾರ್ಯಸೂಚಿಯನ್ನು ರೂಪಿಸಿದ ಈ ಭಾಷಣದ ಅನುವಾದವನ್ನು ತಮಿಳುನಾಡು ಸ್ಪೀಕರ್ ಎಂ.ಅಪ್ಪಾವು ಅವರು ಓದಿದರು. ಆದರೆ ರಾಜ್ಯಪಾಲರು ಭಾಷಣದ ಕೊನೆಯಲ್ಲಿ ರಾಷ್ಟ್ರಗೀತೆಗೂ ಕಾಯದೆ ಗದ್ದಲದಿಂದ ಕೂಡಿದ ಸದನದಿಂದ ಸೀದಾ ಹೊರ ನಡೆದರು.
ರಾಜ್ಯಪಾಲರು ರಾಜಕೀಯ ಮಾತನಾಡಬಾರದು: ತಮಿಳುನಾಡು ಗವರ್ನರ್ ವಿರುದ್ಧ ಅಣ್ಣಾಮಲೈ ಕಿಡಿ
ಡಿಎಂಕೆಯ ಹಿರಿಯ ಸಚಿವ ದುರೈ ಮುರುಗನ್ ಅವರು ಸರ್ಕಾರದ ಬಗ್ಗೆ ರಾಜ್ಯಪಾಲರ ಟೀಕೆಗಳನ್ನು ದಾಖಲಿಸಬಾರದು ಎಂಬ ನಿರ್ಣಯವನ್ನು ಸದನದಲ್ಲಿ ಮಂಡಿಸಿದಾಗ ರಾಜ್ಯಪಾಲರು ಸದನದಿಂದ ಹೊರನಡೆದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ