
ನವದೆಹಲಿ(ಡಿ. 21): ಕೊರೋನಾ ಲಸಿಕೆ ಅಭಿಯಾನದ ವೇಳೆ ಲಸಿಕೆ ತಯಾರಿಕಾ ಸಂಸ್ಥೆಗಳ ವಿರುದ್ಧ ದಾಖಲಾಗುವ ಕೇಸ್ಗಳ ವಿರುದ್ಧ ಸರ್ಕಾರ ರಕ್ಷಣೆ ಒದಗಿಸಬೇಕು. ಈ ಕುರಿತಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಸೀರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಸಿಇಒ ಅದರ್ ಪೂನಾವಾಲ ಹೇಳಿದ್ದಾರೆ.
ಇಂಡಿಯಾಸ್ ಗ್ಲೋಬಲ್ ಟೆಕ್ನಾಲಜಿ ಶೃಂಗವನ್ನು ಉದ್ದೇಶಿಸಿ ಮಾತನಾಡಿದ ಅವರು, ಔಷಧ ತಯಾರಿಕಾ ಸಂಸ್ಥೆಗಳು, ಅದರಲ್ಲೂ ಲಸಿಕೆ ತಯಾರಿಕಾ ಕಂಪನಿಗಳಿಗೆ ಕಾನೂನಿನ ರಕ್ಷಣೆಯ ಅಗತ್ಯವಿದೆ. ಲಸಿಕೆ ವಿತರಣೆ ಆರಂಭವಾದ ಬಳಿಕ ವಿವಿಧ ರೀತಿಯ ಸಮಸ್ಯೆಗಳು ಗೋಚರಿಸಬಹುದು. ಅಂತಹ ಸಂದರ್ಭದಲ್ಲಿ ಸರ್ಕಾರ ಔಷಧ ಕಂಪನಿಗಳ ನೆರವಿಗೆ ಧಾವಿಸಬೇಕಿದೆ.
ಹಲವು ದೇಶಗಳಲ್ಲಿ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ. ಉದಾಹರಣೆ ಅಮೆರಿಕದಲ್ಲಿ ಲಸಿಕೆಯ ವಿರುದ್ಧ ದಾಖಲಾಗುವ ಪ್ರಕರಣಗಳಿಂದ ರಕ್ಷಣೆ ನೀಡಲಾಗುತ್ತದೆ ಎಂದು ಪೂನವಾಲ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ