ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ನುಸುಳುಕೋರರಿಗೆ ವರ!

Published : Jan 25, 2021, 01:27 PM ISTUpdated : Jan 25, 2021, 01:49 PM IST
ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ನುಸುಳುಕೋರರಿಗೆ ವರ!

ಸಾರಾಂಶ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ನುಸುಳುಕೋರರಿಗೆ ವರ| ಅಸ್ಸಾಂ ಚುನಾವಣೆ ರಾರ‍ಯಲಿಯಲ್ಲಿ ಶಾ ಆರೋಪ

ನಲ್‌ಬಾರಿ (ಅಸ್ಸಾಂ): ಅಸ್ಸಾಂ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ‘ಬಿಜೆಪಿ ಚುನಾವಣಾ ಚಾಣಕ್ಯ’ ಖ್ಯಾತಿಯ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಚುನಾವಣಾ ರಣಕಹಳೆ ಮೊಳಗಿಸಿದ್ದಾರೆ.

ಭಾನುವಾರ ಬಿಜೆಪಿಯ ಮೊದಲ ಚುನಾವಣಾ ರಾರ‍ಯಲಿಯನ್ನುದ್ದೇಶಿಸಿ ಮಾತನಾಡಿದ ಶಾ ಅವರು, ‘ಈ ಬಾರಿಯ ಚುನಾವಣೆ ವೇಳೆ ಕಾಂಗ್ರೆಸ್‌-ಎಐಯುಡಿಎಫ್‌ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದಲ್ಲಿ ಭಾರತದ ನುಸುಳುಕೋರರಿಗೆ ಈಗಾಗಲೇ ಬಂದ್‌ ಆಗಿರುವ ಎಲ್ಲಾ ಬಾಗಿಲುಗಳು ಪುನಃ ತೆರೆಯಲಿವೆ’ ಎಂದರು.

‘ಈ ಹಿಂದಿನ ಕಾಂಗ್ರೆಸ್‌ ಅಧಿಕಾರಾವಧಿಯಲ್ಲಿ ರಾಜ್ಯದಲ್ಲಿ ಕೇವಲ ರಕ್ತಪಾತಗಳೇ ಆಗಿದ್ದು, ಈ ಘಟನೆಗಳಲ್ಲಿ ಸಾವಿರಾರು ಯುವಕರು ಪ್ರಾಣ ತೆತ್ತಿದ್ದಾರೆ. ನೆರೆಯ ರಾಷ್ಟ್ರದ ನುಸುಳುಕೋರರು ಕಾಂಗ್ರೆಸ್‌ನ ಮತಬ್ಯಾಂಕ್‌ ಆಗಿರುವುದರಿಂದ, ಕಾಂಗ್ರೆಸ್‌ ಮತ್ತು ಮುಸ್ಲಿಂ ಮುಖಂಡ ಬದ್ರುದ್ದೀನ್‌ ಅಜ್ಮಲ್‌ ಅವರು ನುಸುಳುಕೋರರಿಂದ ಅಸ್ಸಾಂ ಅನ್ನು ರಕ್ಷಿಸಬಲ್ಲರೇ?’ ಎಂದು ಪ್ರಶ್ನಿಸಿದರು.

‘ಪ್ರಧಾನಿ ನರೇಂದ್ರ ಮೋದಿ ಅವರು ಮಾತ್ರವೇ ಒಳ ನುಸುಳುಕೋರರಿಂದ ರಾಜ್ಯವನ್ನು ರಕ್ಷಿಸುವ ಸಮರ್ಥ ನಾಯಕ’ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!