
ಭೋಪಾಲ್(ಜ.03): ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಹಾಗೂ ಮಹಾತ್ಮಾ ಗಾಂಧಿ ಹಂತಕ ನಾಥೂರಾಮ್ ಗೋಡ್ಸೆ ಮಧ್ಯೆ ದೈಹಿಕ ಸಂಬಂಧ ಇತ್ತೆಂಬ ಕಾಂಗ್ರೆಸ್ ಕೈಪಿಡಿ ಇದೀಗ ತೀವ್ರ ವಿವಾದ ಸೃಷ್ಟಿಸಿದೆ.
ಈ ಕುರಿತು ಮಧ್ಯಪ್ರದೇಶ ಕಾಂಗ್ರೆಸ್ ‘ಹೌ ಬ್ರೇವ್ ವಾಸ್ ವೀರ್ ಸಾವರ್ಕರ್’ ಎಂಬ ಕೈಪಿಡಿಯೊಂದನ್ನು ಹೊರತಂದಿದ್ದು, ಸಾವರ್ಕರ್ ಹಾಗೂ ಗೋಡ್ಸೆ ಮಧ್ಯೆ ದೈಹಿಕ ಸಂಬಂಧ ಇತ್ತೆಂದು ಹೇಳಲಾಗಿದೆ.
ಸಾವರ್ಕರ್ ‘ಕ್ರಾಂತಿಕಾರಿ’ ಪಟ್ಟತೆಗೆದು ಹೇಡಿ ಪಟ್ಟ!
ಈ ಕೈಪಿಡಿಯನ್ನು ಅಖಿಲ ಭಾರತ ಕಾಂಗ್ರೆಸ್ ಸೇವಾದಳ ತರಬೇತಿ ಶಿಬಿರದಲ್ಲಿ ಹಂಚಲಾಗಿದ್ದು, ಪುಸ್ತಕದಲ್ಲಿ ಸಾವರ್ಕರ್ ಹಾಗೂ ಗೋಡ್ಸೆ ಬಗ್ಗೆ ಅಶ್ಲೀಲವಾಗಿ ಉಲ್ಲೇಖ ಮಾಡಲಾಗಿದೆ.
‘ಫ್ರೀಡಂ ಆ್ಯಟ್ ಮಿಡ್ ನೈಟ್’ ಎಂಬ ಪುಸ್ತಕದಲ್ಲಿ ಉಲ್ಲೇಖಿಸಿರುವ ಘಟನೆಯೊಂದನ್ನು ಆಧರಿಸಿ ಕೈಪಿಡಿಯನ್ನು ಹೊರತರಲಾಗಿದೆ ಎಂದು ಕಾಂಗ್ರೆಸ್ ಸಮರ್ಥನೆ ನೀಡಿದೆ.
ತಿವಾರಿ ಟು ಒವೈಸಿ: ಸಾವರ್ಕರ್ ‘ಭಾರತ’ ವಿರೋಧಿಸುವ ‘ರತ್ನ’ಗಳು!
ಬ್ರಹ್ಮಚರ್ಯೆಯನ್ನು ಸ್ವೀಕರಿಸುವುದಕ್ಕೂ ಮುನ್ನ ಗೋಡ್ಸೆ ದೈಹಿಕ ಸಂಬಂಧದ ಬಗ್ಗೆ ಈ ಪುಸ್ತಕದಲ್ಲಿ ಉಲ್ಲೇಖವಿದೆ ಎನ್ನಲಾಗಿದೆ. ಅಲ್ಲದೇ ಅಲ್ಪಸಂಖ್ಯಾತ ಮಹಿಳೆಯನ್ನು ಅತ್ಯಾಚಾರ ಮಾಡುವಂತೆ ಸಾವರ್ಕರ್ ಪ್ರೇರೇಪಿಸುತ್ತಿದ್ದರು ಎಂದೂ ಕೈಪಿಡಿಯಲ್ಲಿ ಗಂಭೀರ ಆರೋಪ ಮಾಡಲಾಗಿದೆ.
ಕಾಂಗ್ರೆಸ್ ಕೈಪಿಡಿಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಹಿಂದೂ ಮಹಾಸಭಾ, ಇದು ಸಾವರ್ಕರ್ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಹುನ್ನಾರ ಎಂದು ಹರಿಹಾಯ್ದಿದೆ.
ಜನವರಿ 3ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ