ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ತೀರ್ಪು ರದ್ದತಿಗೆ ರಾಹುಲ್‌ ಚಿಂತನೆ: ಮಾಜಿ ಕಾಂಗ್ರೆಸ್ಸಿಗ ಆಚಾರ್ಯ

Published : May 07, 2024, 09:10 AM ISTUpdated : May 07, 2024, 09:11 AM IST
ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ತೀರ್ಪು ರದ್ದತಿಗೆ ರಾಹುಲ್‌ ಚಿಂತನೆ: ಮಾಜಿ ಕಾಂಗ್ರೆಸ್ಸಿಗ ಆಚಾರ್ಯ

ಸಾರಾಂಶ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಕುರಿತ ಸುಪ್ರೀಂ ಕೋರ್ಟ್‌ ತೀರ್ಪು ರದ್ದುಗೊಳಿಸುವ ಯೋಚನೆಯನ್ನು ಪಕ್ಷದ ನಾಯಕ ರಾಹುಲ್‌ ಗಾಂಧಿ ಹೊಂದಿದ್ದಾರೆ ಎಂದು ಪಕ್ಷದ ಮಾಜಿ ನಾಯಕ ಆಚಾರ್ಯ ಪ್ರಮೋದ್ ಕೃಷ್ಣಂ ಬಾಂಬ್‌ ಸಿಡಿಸಿದ್ದಾರೆ.

ಸಂಬಲ್ (ಉ.ಪ್ರ.): ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಕುರಿತ ಸುಪ್ರೀಂ ಕೋರ್ಟ್‌ ತೀರ್ಪು ರದ್ದುಗೊಳಿಸುವ ಯೋಚನೆಯನ್ನು ಪಕ್ಷದ ನಾಯಕ ರಾಹುಲ್‌ ಗಾಂಧಿ ಹೊಂದಿದ್ದಾರೆ ಎಂದು ಪಕ್ಷದ ಮಾಜಿ ನಾಯಕ ಆಚಾರ್ಯ ಪ್ರಮೋದ್ ಕೃಷ್ಣಂ ಬಾಂಬ್‌ ಸಿಡಿಸಿದ್ದಾರೆ.

ಇತ್ತೀಚೆಗೆ ಕಾಂಗ್ರೆಸ್‌ ನಾಯಕರು ರಾಮಮಂದಿರ ಉದ್ಘಾಟನೆಗೆ ಬಹಿಷ್ಕಾರ ಹಾಕಿದ್ದನ್ನು ಖಂಡಿಸಿ ಪಕ್ಷ ತೊರೆದಿದ್ದ ಆಚಾರ್ಯರು ಸುದ್ದಿಗಾರರ ಜತೆ ಸೋಮವಾರ ಮಾತನಾಡಿ, ‘ನಾನು ಕಾಂಗ್ರೆಸ್‌ನಲ್ಲಿ 32 ವರ್ಷಗಳಿಗಿಂತ ಹೆಚ್ಚು ಕಾಲ ಕಳೆದಿದ್ದೇನೆ ಮತ್ತು ರಾಮಮಂದಿರ ಸುಪ್ರೀಂ ಕೋರ್ಟ್‌ ತೀರ್ಪು ಬಂದಾಗ ರಾಹುಲ್‌ ಗಾಂಧಿ ತಮ್ಮ ಆಪ್ತರ ಜತೆ ಸಭೆ ನಡೆಸಿದ್ದರು. ಈ ವೇಳೆ ರಾಹುಲ್‌ ಅವರು ‘ಕಾಂಗ್ರೆಸ್ ಸರ್ಕಾರ ರಚನೆಯಾದ ನಂತರ ಒಂದು ಉನ್ನತ ಆಯೋಗ ರಚಿಸೋಣ. ರಾಜೀವ್ ಗಾಂಧಿ ಶಾ ಬಾನೋ ನಿರ್ಧಾರವನ್ನು ರದ್ದುಗೊಳಿಸಿದಂತೆಯೇ, ಆಯೋಗದ ಶಿಫಾರಸು ಅನುಸರಿಸಿ ನಾವು ರಾಮಮಂದಿರ ಕುರಿತ ಸುಪ್ರೀಂ ಕೋರ್ಟ್‌ ತೀರ್ಪನ್ನು ರದ್ದುಗೊಳಿಸೋಣ’ ಎಂದು ಹೇಳಿದ್ದರು’ ಎಂದು ಆರೋಪಿಸಿದರು.

ಅಹ್ಮದಾಬಾದ್‌ನಲ್ಲಿ ಬೆಳ್ಳಂಬೆಳಗ್ಗೆಯೇ ಹಕ್ಕು ಚಲಾಯಿಸಿದ ಮೋದಿ: ಪ್ರಧಾನಿ ನೋಡಲು ದಾರಿಯುದ್ಧಕ್ಕೂ ಜನ

ಏನಿದು ಶಾ ಬಾನೋ ಕೇಸು?:

1985ರಲ್ಲಿನ ಪ್ರಕರಣವಿದು. ಶಾ ಬಾನೋ ಎಂಬ ಮುಸ್ಲಿಂ ಮಹಿಳೆ ತನ್ನ ಗಂಡನಿಂದ ವಿಚ್ಛೇದನ ಪಡೆದು ಜೀವನಾಂಶಕ್ಕೆ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. ಆಕೆಗೆ ಜೀವನಾಂಶ ನೀಡಬೇಕು ಎಂದು ಸುಪ್ರೀಂ ಕೋರ್ಟ್‌ ಗಂಡನಿಗೆ ಆದೇಶಿಸಿತ್ತು. ಈ ಆದೇಶ ಮುಸ್ಲಿಮರಲ್ಲಿ ಆಕ್ಷೇಪಕ್ಕೆ ಕಾರಣವಾಗಿತ್ತು. ಹೀಗಾಗಿ 1986ರಲ್ಲಿ ಮುಸ್ಲಿಂ ಮಹಿಳಾ (ವಿಚ್ಛೇದನ) ಕಾಯ್ದೆ ಜಾರಿಗೆ ತಂದಿದ್ದ ಕಾಂಗ್ರೆಸ್‌ ಸರ್ಕಾರ, ವಿಚ್ಛೇದಿತ ಪತ್ನಿಗೆ ಪತಿ ಜೀವನಾಂಶ ಕೊಡಬೇಕು ಎಂಬ ಆದೇಶಕ್ಕೆ ಅಂಕುಶ ಹಾಕಿತ್ತು.

ಜಾರ್ಖಂಡ್‌ನ ಮನೆ ಕೆಲಸದ ಆಳಿನ ಬಳಿ 30 ಕೋಟಿ ರು.ನಗದು ಪತ್ತೆ..!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮತ್ತೆ ಫ್ರಾನ್ಸ್‌ನಿಂದ 114 ರಫೇಲ್ ಯುದ್ಧ ಖರೀದಿಗೆ ಭಾರತ ಸಜ್ಜು, ಭಾರತದಲ್ಲೇ 90 ವಿಮಾನ ನಿರ್ಮಾಣ
West Asia conflict : ಭಾರತದ ಎಕಾನಮಿ ಉಳಿಸಲು 3F ಪ್ಲ್ಯಾನ್? ನಿರ್ಮಲಾ ಸೀತಾರಾಮನ್ ಹೇಳಿದ ಮಾತು ವೈರಲ್