G-23: ಆಜಾದ್ ಮನೆಯಲ್ಲಿ 2ನೇ ಸಾರಿ ಸಭೆ ಸೇರಿದ ನಾಯಕರು, ಕೈ ಪಟ್ಟ ಬದಲು?

Published : Mar 18, 2022, 03:31 AM ISTUpdated : Mar 18, 2022, 04:16 AM IST
G-23: ಆಜಾದ್ ಮನೆಯಲ್ಲಿ 2ನೇ ಸಾರಿ ಸಭೆ ಸೇರಿದ ನಾಯಕರು, ಕೈ ಪಟ್ಟ ಬದಲು?

ಸಾರಾಂಶ

* ಮತ್ತೆ ಜಿ-23 ನಾಯಕರ ಸಭೆ: ನಾಯಕತ್ವ ಬದಲಾವಣೆಗೆ ಪಟ್ಟು * ಪಕ್ಷ ವಿಭಜಿಸುವ ಉದ್ದೇಶ ಇಲ್ಲ, ಬಲವರ್ಧನೆ ಉದ್ದೇಶವಷ್ಟೇ * ಸೋನಿಯಾ ಮನವರಿಕೆಗೆ ಇಂದು ಪ್ರಯತ್ನ* ಸೋನಿಯಾ ಭೇಟಿ ಮಾಡಲಿರುವ ಗುಲಾಂ ನಬಿ

ನವದೆಹಲಿ(ಮಾ. 18) ಪಂಚರಾಜ್ಯ ಚುನಾವಣೆಯ (5 State Result) ಹೀನಾಯ ಸೋಲಿನ ಬಳಿಕ ಕಾಂಗ್ರೆಸ್‌ (Congress) ಪಕ್ಷದಲ್ಲಿ ನಾಯಕತ್ವ ಬದಲಾವಣೆಗೆ ಪಟ್ಟು ಹಿಡಿದಿರುವ ಜಿ-23 ಬಂಡಾಯ ನಾಯಕರು ಗುರುವಾರ ಮತ್ತೊಮ್ಮೆ ಹಿರಿಯ ನಾಯಕ ಗುಲಾಂ ನಬಿ ಆಜಾದ್‌ ಅವರ ನಿವಾಸದಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ಪಕ್ಷ ಸಂಘಟನೆ ಮತ್ತು ಬಲವರ್ಧನೆಗೆ ನಾಯಕತ್ವ ಬದಲಾವಣೆ ಅತ್ಯಗತ್ಯ ಎಂಬ ಅಭಿಪ್ರಾಯಕ್ಕೆ ಬರಲಾಗಿದೆ. ಈ ಬಗ್ಗೆ ಮಾಹಿತಿ ನೀಡಲು ಶುಕ್ರವಾರ ಸೋನಿಯಾ ಗಾಂಧಿ (Sonia Gandhi)ಅವರನ್ನು ಜಿ-23 ನಾಯಕ ಗುಲಾಂ ನಬಿ ಆಜಾದ್‌ ಭೇಟಿ ಮಾಡಲಿದ್ದಾರೆ.

ಅಲ್ಲದೆ ಪಕ್ಷ ಸಂಘಟನೆಯಷ್ಟೇ ಜಿ-23 ಬಣದ ಉದ್ದೇಶ, ಪಕ್ಷ ವಿಭಜನೆಯಲ್ಲ ಎಂದು ಮನವರಿಕೆ ಮಾಡಲು ನಿರ್ಧರಿಸಲಾಯಿತು. ನಾಯಕತ್ವದ ಮೇಲೆ ಒತ್ತಡ ಹೇರಲು ಇನ್ನು ಮುಂದೆ ನಿರಂತರವಾಗಿ ಸಭೆ ನಡೆಸಲೂ ತೀರ್ಮಾನಿಸಲಾಯಿತು ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಗುಲಾಂ ನಬಿ ಅವರು ಶುಕ್ರವಾರ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಭೇಟಿಯಾಗಿ ಜಿ-23 ಬಣದ ನಿಲುವಿನ ಬಗ್ಗೆ ಮನವರಿಕೆ ಮಾಡಲಿದ್ದಾರೆ.

Karnataka Politics: ರಾಜ್ಯಕ್ಕೆ ಬರಲಿದ್ದಾರೆ ಅಮಿತ್ ಶಾ...ಅವರ ಮುಂದೆಯೇ ಸಂಪುಟ ಫೈನಲ್

ಈ ಮಧ್ಯೆ ಜಿ-23 ನಾಯಕರ ಸಭೆಗೂ ಮುನ್ನ ಬಂಡಾಯ ನಾಯಕರಲ್ಲಿ ಒಬ್ಬರಾದ ಭೂಪಿಂದರ್‌ ಸಿಂಗ್‌ ಹೂಡಾ ಜೊತೆ ರಾಹುಲ್‌ ಗಾಂಧಿ ಗುರುವಾರ ಮಾತುಕತೆ ನಡೆಸಿದರು. ಈ ವೇಳೆ ಭೂಪಿಂದರ್‌ ಸಿಂಗ್‌ ಸಹ, ಜಿ-23 ಬಣ ಪಕ್ಷವನ್ನು ವಿಭಜಿಸುವ ಉದ್ದೇಶ ಹೊಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ ಹಾಗೂ ಸಮಗ್ರ ನಾಯಕತ್ವ ಪಕ್ಷಕ್ಕೆ ಬೇಕು ಎಂದು ತಿಳಿಸಿದ್ದಾರೆ. ಕಾಂಗ್ರೆಸ್‌ 5 ರಾಜ್ಯಗಳಲ್ಲಿ ಸೋತ ಕಾರಣ ಮರುಸಂಘಟನೆ ಬಗ್ಗೆಯೂ ಚರ್ಚೆ ನಡೆಯಿತು ಎಂದು ಮೂಲಗಳು ತಿಳಿಸಿವೆ.

ಈ ನಡುವೆ ‘ರಾಹುಲ್‌ ಮೇಲೆ ನಂಬಿಕೆ ಇಲ್ಲ. ಗಾಂಧಿಗಳ ನಾಯಕತ್ವ ಬದಲಾವಣೆ ಆಗಲೇಬೇಕು’ ಎಂದು ಜಿ-23 ನಾಯಕ ಶಂಕರಸಿಂಗ್‌ ವಘೇಲಾ ಹಾಗೂ ಪಟ್ಟು ಹಿಡಿದು ಆಗ್ರಹಿಸಿದ್ದಾರೆ.

ಪಂಚರಾಜ್ಯ ಚುನಾವಣೆಯಲ್ಲಿ ಸೋಲಿನ ನಂತರ ಜಿ-23 ಬಂಡಾಯ ನಾಯಕರು ಸರಣಿ ಸಭೆ ನಡೆಸುತ್ತಿದ್ದು, ಬುಧವಾರ ಸಹ ಕಾಂಗ್ರೆಸ್‌ ಹಿರಿಯ ನಾಯಕ ಗುಲಾಂ ನಬಿ ಆಜಾದ್‌ ಅವರ ನಿವಾಸದಲ್ಲಿ ಸಭೆ ಸೇರಲಾಗಿತ್ತು. ಈ ವೇಳೆ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನದಿಂದ ಗಾಂಧಿ ಕುಟುಂಬ ದೂರ ಇರಬೇಕು, ರಾಹುಲ್‌ ಗಾಂಧಿ ನಾಯಕತ್ವದಲ್ಲಿ ನಂಬಿಕೆ ಇಲ್ಲ. ಕಾಂಗ್ರೆಸ್‌ ಉನ್ನತಿ ಕಾಣಬೇಕೆಂದರೆ, ಬಿಜೆಪಿ ವಿರುದ್ಧ ಹೋರಾಡುವ ಶಕ್ತಿ ಪಡೆಯಬೇಕೆಂದರೆ ಸಮರ್ಥ ನಾಯಕತ್ವದ ಅಗತ್ಯವಿದೆ ಎನ್ನುವ ಅಭಿಪ್ರಾಯಗಳು ವ್ಯಕ್ತವಾಗಿದ್ದವು.

 ಈ ಹಿಂದೆ ಸಹ ನಾಯಕರು ನಾಯಕತ್ವ ಬದಲಾವಣೆಗೆ ಪತ್ರ ಬರೆದಿದ್ದರು ಎಂಬುದು ದೊಡ್ಡ ಚರ್ಚೆಗೆ ಕಾರಣವಾಗಿತ್ತು. ಕಾಂಗ್ರೆಸ್ ಆಂತರಿಕ ವಲಯದಲ್ಲಿ ಸಮೀಕ್ಷೆಯನ್ನು ನಡೆಸಿತ್ತು.   ಎರಡು ಅವಧಿಯಲ್ಲಿ ಸಚಿರಾದವರನ್ನು ಪಕ್ಷ ಸಂಘಟನೆಗೆ ಬಳಸಿಕೊಂಡು ಹೊಸ ಮುಖಗಳಿಗೆ ಅವಕಾಶ ಮಾಡಿಕೊಡಲಾಗುತ್ತದೆ ಎಂಬ ಮಾತುಗಳು ಕೇಳಿ  ಬಂದಿದ್ದವು. 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಇಂದು ರಾತ್ರಿ 8ರ ಒಳಗೆ ಟಿಕೆಟ್ ಮೊತ್ತ ಮರುಪಾವತಿಸಿ : ಇಂಡಿಗೋಗೆ ಕೇಂದ್ರ ಗಡುವು
India Latest News Live: ಆಯೋಧ್ಯೆಯ ಬಾಬ್ರಿ ಮಸೀದಿಯನ್ನೇ ಹೋಲುವಂತಹ ಮಸೀದಿಗೆ ಶಂಕು ಸ್ಥಾಪನೆ