ಕಾಂಗ್ರೆಸ್ ಕೂಡ ತಪ್ಪು ಮಾಡಿದೆ, ಬದಲಾವಣೆ ಅಗತ್ಯ: ರಾಹುಲ್ ಗಾಂಧಿ

Published : May 11, 2024, 09:33 AM IST
ಕಾಂಗ್ರೆಸ್ ಕೂಡ ತಪ್ಪು ಮಾಡಿದೆ, ಬದಲಾವಣೆ ಅಗತ್ಯ: ರಾಹುಲ್ ಗಾಂಧಿ

ಸಾರಾಂಶ

‘ಕಾಂಗ್ರೆಸ್ ಕೂಡ ತಪ್ಪು ಮಾಡಿದೆ. ಭವಿಷ್ಯದಲ್ಲಿ ನಾವು ಕೂಡ ನಮ್ಮ ರಾಜಕೀಯವನ್ನು ಬದಲಿಸಿಕೊಳ್ಳಬೇಕು’ ಎಂದು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಲಖನೌ (ಮೇ.11): ‘ಕಾಂಗ್ರೆಸ್ ಕೂಡ ತಪ್ಪು ಮಾಡಿದೆ. ಭವಿಷ್ಯದಲ್ಲಿ ನಾವು ಕೂಡ ನಮ್ಮ ರಾಜಕೀಯವನ್ನು ಬದಲಿಸಿಕೊಳ್ಳಬೇಕು’ ಎಂದು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಇಲ್ಲಿ ನಡೆದ ‘ಸಂವಿಧಾನ ಸಮ್ಮೇಳನ’ ಕಾರ್ಯಕ್ರಮದಲ್ಲಿ ಸಭಿಕರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ‘ಕಾಂಗ್ರೆಸ್ ಕೂಡ ತಪ್ಪು ಮಾಡಿದೆ ಎಂದು ಹೇಳುವುದಕ್ಕೆ ಬಯಸುತ್ತೇನೆ. ಪಕ್ಷದ ನಾಯಕನಾದರೂ ಕೂಡ ನಾನು ಈ ಮಾತನ್ನು ಹೇಳುತ್ತೇನೆ. ಮುಂದಿನ ದಿನಗಳಲ್ಲಿ ನಮ್ಮ ಪಕ್ಷ ಕೂಡ ಕೆಲ ಬದಲಾವಣೆಗಳನ್ನು ಮಾಡಿಕೊಳ್ಳಬೇಕಿದೆ’ ಎಂದರು. 

ಆದರೆ ಯಾವ ಬದಲಾವಣೆ ಎಂಬುದನ್ನು ಹೇಳಲಿಲ್ಲ. ಇದೇ ಸಂದರ್ಭದಲ್ಲಿ ಮೋದಿ ಒಬ್ಬ ರಾಜ, ಪ್ರಧಾನಿಯಲ್ಲ, ಮೋದಿ ಮತ್ತೆ ಪ್ರಧಾನಿಯಾಗುವುದಿಲ್ಲ ಎಂಬ ಮಾತನ್ನು ಪುನರುಚ್ಚರಿಸಿದರು. ‘ ನರೇಂದ್ರ ಮೋದಿ ಅವರನ್ನು ಚರ್ಚೆಯಲ್ಲಿ ಎದುರಿಸಲು ಶೇ.100ರಷ್ಟು ಸಿದ್ಧ. ಆದರೆ ಪ್ರಧಾನಿ ಇದಕ್ಕೆ ಒಪ್ಪಿಕೊಳ್ಳುವುದಿಲ್ಲ’ ಎಂದರು.

ಸ್ವಂತ ಅನುಭವ ಹೇಳುತ್ತಿದ್ದಾರೆ: ಪ್ರಧಾನಿ ನರೇಂದ್ರ ಮೋದಿ ಅವರು ‘ಅಂಬಾನಿ- ಅದಾನಿ ಬಗ್ಗೆ ರಾಹುಲ್‌ ಏಕೆ ಮಾತು ನಿಲ್ಲಿಸಿದ್ದಾರೆ? ಟೆಂಪೋದಲ್ಲಿ ಅವರಿಗೆ ಎಷ್ಟು ಹಣ ಬಂದಿದೆ?’ ಎಂದು ಪ್ರಶ್ನಿಸಿದ್ದಕ್ಕೆ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ತಿರುಗೇಟು ನೀಡಿದ್ದಾರೆ. ‘ಮೋದಿ ಬಹುಶಃ ತಮ್ಮ ಸ್ವಂತ ಅನುಭವ ಹೇಳುತ್ತಿರಬೇಕು’ ಎಂದು ಟಾಂಗ್‌ ನೀಡಿದ್ದಾರೆ. ಇದೇ ವೇಳೆ, ‘ನಮಗೆ ಅಂಬಾನಿ, ಅದಾನಿ ಹಣ ಕಳಿಸಿದ್ದಾರೆ ಎಂದರೆ ಏಕೆ ಅಂಜುತ್ತೀರಿ? ಇ.ಡಿ., ಸಿಬಿಐ ದಾಳಿ ನಡೆಸಿ’ ಎಂದೂ ಸವಾಲು ಹಾಕಿದ್ದಾರೆ. 

ಸರ್ವಾಧಿಕಾರದಿಂದ ದೇಶ ರಕ್ಷಿಸುವೆ: ಬಂಧಮುಕ್ತ ಕೇಜ್ರಿವಾಲ್‌ ಘೋಷಣೆ

ಮೋದಿ ಹೇಳಿಕೆ ಬಗ್ಗೆ ವಿಡಿಯೋ ಸಂದೇಶ ನೀಡಿರುವ ರಾಹುಲ್‌, ‘ನಮಸ್ಕಾರ್ ಮೋದಿಜಿ, ನಿಮಗೆ ಭಯವಾಗಿದೆಯೇ? ಸಾಮಾನ್ಯವಾಗಿ ನೀವು ಮುಚ್ಚಿದ ಬಾಗಿಲಿನ ಹಿಂದೆ ಅಂಬಾನಿ, ಅದಾನಿ ಬಗ್ಗೆ ಮಾತನಾಡುತ್ತೀರಿ.  ನೀವು ಮೊದಲ ಬಾರಿಗೆ ಸಾರ್ವಜನಿಕವಾಗಿ ‘ಅಂಬಾನಿ, ಅದಾನಿ’ ಎಂದು ಹೇಳಿದ್ದೀರಿ. ಇದು ನಿಮಗೆ ಭಯವಾಗಿರುವ ಸಂಕೇತ. ಅಲ್ಲದೆ ಟೆಂಪೋದಲ್ಲಿ ಕಾಂಗ್ರೆಸ್‌ಗೆ ಹಣ ಬಂದಿರಬಹುದು ಎಂಬ ನಿಮ್ಮ ಹೇಳಿಕೆ ಸ್ವಂತ ಅನುಭವದಂತಿದೆ’ ಎಂದು ಕಿಚಾಯಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!