
ನವದೆಹಲಿ(ಜು.12): ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಛತ್ತೀಸ್ಗಢ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಅವರು ತಮ್ಮ ಸಿಎಂ ಹುದ್ದೆಗೆ ರಾಜೀನಾಮೆ ಸಲ್ಲಿಸುವ ಸಾಧ್ಯತೆ ದಟ್ಟವಾಗಿದೆ ಎಂದು ತಿಳಿದುಬಂದಿದೆ.
ಎರಡೂವರೆ ವರ್ಷಗಳಿಗಾಗಿ ಮಾತ್ರವೇ ಭೂಪೇಶ್ ಬಾಘೇಲ್ ಅವರನ್ನು ಮುಖ್ಯಮಂತ್ರಿ ಮಾಡಲಾಗಿತ್ತು ಎಂಬ ಊಹಾಪೋಹಗಳ ಬೆನ್ನಲ್ಲೇ, ಭಾನುವಾರ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ನಿವಾಸದಲ್ಲಿ ಪ್ರಿಯಾಂಗಾ ಗಾಂಧಿ ಅವರನ್ನು ಭೇಟಿ ಬಳಿಕ ಮಾತನಾಡಿದ ಬಾಘೇಲ್ ಅವರು, ‘ಕಾಂಗ್ರೆಸ್ ಹೈಕಮಾಂಡ್ ಸೂಚಿಸಿದರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ಹೊಸಬರಿಗೆ ಮುಖ್ಯಮಂತ್ರಿ ಆಗಲು ಅವಕಾಶ ಮಾಡಿಕೊಡಲು ಸಿದ್ಧ’ ಎಂದು ಹೇಳಿದರು. ಅಲ್ಲದೆ ಹೈಕಮಾಂಡ್ ಹೇಳಿದರೆ ಮುಂದಿನ ವರ್ಷದ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಜವಾಬ್ದಾರಿ ವಹಿಸಿಕೊಳ್ಳಲು ಸಹ ಸಿದ್ಧ ಎಂದರು.
ಬಾಘೇಲ್ ಅವರಿಗೆ ಎರಡೂವರೆ ವರ್ಷ ಸಿಎಂ ಹುದ್ದೆ ನೀಡಿ, ನಂತರ ಸಚಿವ ಟಿ.ಎಸ್. ಸಿಂಗದೇವ್ ಅವರಿಗೆ ಸಿಎಂ ಹುದ್ದೆ ನೀಡಲಾಗುವುದು ಎಂದು ಈ ಹಿಂದೆ ಗುಲ್ಲು ಹರಡಿತ್ತು. ಆದರೆ ಈ ಬಗ್ಗೆ ಪ್ರತಿಕ್ರಿಯಿಸಿರುವ ಬಾಘೇಲ್ ಬಣ, ‘ಇಂಥ ಯಾವುದೇ ಸಾಧ್ಯತೆ ಇಲ್ಲ’ ಎಂದು ಹೇಳಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ