ಕೇಂದ್ರದ ನೀತಿ ವಿರೋಧಿಸಿ ಇಂದು ಭಾರತ್‌ ಬಚಾವೋ ಪ್ರತಿಭಟನೆ

Kannadaprabha News   | Asianet News
Published : Dec 14, 2019, 11:06 AM IST
ಕೇಂದ್ರದ ನೀತಿ ವಿರೋಧಿಸಿ  ಇಂದು ಭಾರತ್‌ ಬಚಾವೋ ಪ್ರತಿಭಟನೆ

ಸಾರಾಂಶ

ಕೇಂದ್ರ ಸರ್ಕಾರದ ನೀತಿಗಳನ್ನು ವಿರೋಧಿಸಿ ದೆಹಲಿ, ವಿಶ್ವದ ಇತರೆ 10ಕ್ಕೂ ಹೆಚ್ಚು ದೇಶಗಳಲ್ಲಿ ಕಾಂಗ್ರೆಸ್‌ನಿಂದ ಹೋರಾಟ | ಆರ್ಥಿಕತೆ ಕುಸಿತ, ಬೆಲೆ ಏರಿಕೆ, ನಿರುದ್ಯೋಗ ಪ್ರಮಾಣ ವಿರೋಧಿಸಿ ಪ್ರತಿಭಟನೆ

ನವದೆಹಲಿ (ಡಿ. 14): ಕೇಂದ್ರ ಸರ್ಕಾರದ ವಿವಿಧ ನೀತಿಗಳನ್ನು ವಿರೋಧಿಸಿ ಶನಿವಾರ ದೇಶ- ವಿದೇಶಗಳಲ್ಲಿ ಬೃಹತ್‌ ಪ್ರತಿಭಟನೆಗೆ ಕಾಂಗ್ರೆಸ್‌ ನಿರ್ಧರಿಸಿದೆ. ಈ ಹಿಂದೆ 3-4 ಬಾರಿ ದಿನಾಂಕ ನಿಗದಿ ಮಾಡಿ ಮುಂದೂಡಲ್ಪಟ್ಟಿದ್ದ ಪ್ರತಿಭಟನೆಯನ್ನು ಶನಿವಾರ ದೊಡ್ಡ ಮಟ್ಟದಲ್ಲಿ ನಡೆಸಲು ಪಕ್ಷ ಆಯೋಜಿಸಿದೆ.

ಅಕ್ರಮ ವಲಸಿಗರಿಗೆಲ್ಲ ಆಶ್ರಯ ನೀಡುತ್ತಾ ಹೋಗಲು ಭಾರತವೇನು ಧರ್ಮಛತ್ರವೇ?

ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ನಡೆಯುವ ಬೃಹತ್‌ ಭಾರತ್‌ ಬಚಾವೋ ಪ್ರತಿಭಟನೆಯಲ್ಲಿ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ, ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ಸೇರಿದಂತೆ ಪಕ್ಷದ ಬಹುತೇಕ ಎಲ್ಲಾ ನಾಯಕರು ಭಾಗಿಯಾಗುವ ನಿರೀಕ್ಷೆ ಇದೆ.

ಭಾರತಕ್ಕೆ ದಾಖಲೆ ವಿದೇಶೀ ಬಂಡವಾಳ; ಆರ್ಥಿಕ ಪ್ರಗತಿಯ ಸಂಕೇತವಿದು!

ಇನ್ನು ಅಮೆರಿಕ, ಬ್ರಿಟನ್‌, ಸೌದಿ ಅರೇಬಿಯಾ, ಆಸ್ಪ್ರೇಲಿಯಾ ಸೇರಿದಂತೆ ಹಲವು ದೇಶಗಳಲ್ಲಿನ ಭಾರತೀಯ ಕಚೇರಿ ಎದುರು ಬೃಹತ್‌ ಪ್ರತಿಭಟನೆ ನಡೆಸಲು ಕಾಂಗ್ರೆಸ್‌ನ ಸಾಗರೋತ್ತರ ವಿಭಾಗ ನಿರ್ಧರಿಸಿದೆ. ಈ ಪ್ರತಿಭಟನೆ ವೇಳೆ ರಾಯಭಾರ ಕಚೇರಿಗೆ ಮುತ್ತಿಗೆ ಹಾಕುವ ಯತ್ನವನ್ನೂ ಪಕ್ಷದ ನಾಯಕರು, ಕಾರ್ಯಕರ್ತರು ಮಾಡಲಿದ್ದಾರೆ.

ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳು, ಬೆಲೆ ಏರಿಕೆ, ರೈತರ ಸಂಕಷ್ಟ, ನಿರುದ್ಯೋಗ ಪ್ರಮಾಣ ಏರಿಕೆ, ಸರ್ಕಾರದ ವಿಭಜನಕಾರಿ ನೀತಿ ವಿರೋಧಿಸಿ ಈ ಪ್ರತಿಭಟನೆಗೆ ಪಕ್ಷ ನಿರ್ಧರಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

18 ದಿನದಲ್ಲಿ 10 ಲಕ್ಷ ಪ್ರಯಾಣಿಕರ ಇಂಡಿಗೋ ಟಿಕೆಟ್‌ ರದ್ದು
ಬೆಂಗ್ಳೂರಲ್ಲಿ ಸಿ-130 ವಿಮಾನ ವಿರ್ವಹಣಾ ಕೇಂದ್ರಕ್ಕೆ ಶಂಕು