
ನವದೆಹಲಿ: ಯುಪಿಎ ಅವಧಿಯ ಮನರೇಗಾ ಯೋಜನೆಯ ಬದಲಿಗೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ಜಿ ರಾಮ್ ಜಿ’ ಕಾಯ್ದೆ ಹಿಂಪಡೆದುಕೊಳ್ಳಲು ಆಗ್ರಹಿಸಿ ಕಾಂಗ್ರೆಸ್ ದೇಶಾದ್ಯಂತ 45 ದಿನಗಳ ಹೋರಾಟಕ್ಕೆ ಶನಿವಾರ ಚಾಲನೆ ನೀಡಿದೆ. ಇದರ ಭಾಗವಾಗಿ ಶನಿವಾರ ದೇಶಾದ್ಯಂತ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಕಾಂಗ್ರೆಸ್ ಪತ್ರಿಕಾಗೋಷ್ಠಿಯನ್ನು ನಡೆಸಿದೆ.
ಈ ಕುರಿತು ಎಕ್ಸ್ನಲ್ಲಿ ಹೋರಾಟದ ಬಗ್ಗೆ ಮಾಹಿತಿ ನೀಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್, ಮೋದಿ ಸರ್ಕಾರವು ಮನರೇಗ ಯೋಜನೆಯನ್ನು ಕೆಡವಿ ಕಸಿದುಕೊಂಡಿರುವ ಕೆಲಸ ಮಾಡುವ ಹಕ್ಕು, ಜೀವನೋಪಾಯ ಮ ತ್ತು ಹೊಣೆಗಾರಿಕೆಯನ್ನು ಪುನಃಸ್ಥಾಪಿಸುವವರೆಗೆ ಈ ಹೋರಾಟವನ್ನು ಮುಂದುವರಿಸಲು ಕಾಂಗ್ರೆಸ್ ಬದ್ಧವಾಗಿದೆ’ ಎಂದು ಉದ್ಘೋಷಿಸಿದ್ದಾರೆ.
ಹೋರಾಟದ ಹಾದಿಯು ಜ.12ರಿಂದ ಆರಂಭವಾಗಲಿದೆ. ಜ.12ರಿಂದ ಜ.29ರವರೆಗೆ ಪ್ರತಿ ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಸಣ್ಣ ಸಣ್ಣ ಸಭೆ, ಸಮಾವೇಶಗಳನ್ನು ನಡೆಸಲಾಗುತ್ತದೆ. ಜ.30ರಂದು ವಾರ್ಡ್ ಮಟ್ಟದಲ್ಲಿ ಶಾಂತಿಯುತ ಸಭೆ ನಡೆಯಲಿದೆ. ಇದಾದ ನಂತರ ಫೆ.7ರಿಂದ 15ರವರೆಗೆ ರಾಜ್ಯ ಮಟ್ಟದಲ್ಲಿ ವಿಧಾನಸಭಾ ಘೇರಾವ್ಗಳನ್ನು ಪಕ್ಷ ಆಯೋಜಿಸಲಿದೆ. ಫೆ.16ರಿಂದ ಫೆ.25ರವರೆಗೆ ದೇಶಾದ್ಯಂತ 4 ದೊಡ್ಡ ರ್ಯಾಲಿ ನಡೆದು ಪ್ರತಿಭಟನೆ ಸಮಾರೋಪ ನಡೆಯಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ