
ಕಡಕ್ಕಲ್ (ಜು.2): ಕೊಲ್ಲಂನ ಕಡಕ್ಕಲ್ನಲ್ಲಿ ಗಾಂಜಾ ಸಹಿತ ಕಾಂಗ್ರೆಸ್ ಮುಖಂಡನನ್ನು ಬಂಧಿಸಲಾಗಿದೆ. ಅಬಕಾರಿ ತಂಡ ಗಾಂಜಾ ಸಹಿತ ಮಾಂಗಡ ಮೂಲದ ಸಚಿನ್ ಎಂಬಾತನನ್ನು ಬಂಧಿಸಿದೆ.
ಬಂಧಿತ ಕಾಂಗ್ರೆಸ್ ಮುಖಂಡನಿಂದ ಒಂದೂವರೆ ಕೆಜಿ ಗಾಂಜಾ ಪತ್ತೆಯಾಗಿದ್ದು ವಶಕ್ಕೆ ಪಡೆಯಲಾಗಿದೆ.. ಸಚಿನ್ ಕಾಂಗ್ರೆಸ್ ಕುಮ್ಮಿಲ್ ಕಾರ್ಯಕಾರಿ ಸಮಿತಿಯ ಸದಸ್ಯರಾಗಿದ್ದಾರೆ. ಚಡಯಮಂಗಲಂ ಅಬಕಾರಿ ರೇಂಜ್ ಇನ್ಸ್ಪೆಕ್ಟರ್ ರಾಜೇಶ್ ನೇತೃತ್ವದಲ್ಲಿ ಕಡಕ್ಕಲ್ ಮಾರುಕಟ್ಟೆ ಬಳಿ ನಡೆಸಿದ ಶೋಧದಲ್ಲಿ ಸಚಿನ್ನನ್ನು ಬಂಧಿಸಲಾಗಿದೆ.
ಇದನ್ನೂ ಓದಿ: ಗುಜರಾತ್ನಲ್ಲಿಂದು ಅಮಿತ್ ಶಾ ಸಮ್ಮುಖದಲ್ಲಿ 12,000 ಕೆ.ಜಿ.ಗೂ ಅಧಿಕ Drugs ನಾಶ
ಕಡಕ್ಕಲ್ ಮಾರುಕಟ್ಟೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಜೆ ವೇಳೆ ಮಾದಕ ದ್ರವ್ಯಗಳ ವಿನಿಮಯ ಮತ್ತು ಮಾರಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ನಡೆಸಿದ ದಾಳಿಯಲ್ಲಿ ಕಾಂಗ್ರೆಸ್ ನಾಯಕನನ್ನು ಬಂಧಿಸಲಾಯಿತು. ಸ್ಥಳೀಯ ಕಾಂಗ್ರೆಸ್ ನಾಯಕರಾದ ಸಚಿನ್, ಮಾದಕ ದ್ರವ್ಯಗಳ ವಿರುದ್ಧ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಸಕ್ರಿಯರಾಗಿದ್ದರು.
ಸಚಿನ್ ಬೇರೆ ರಾಜ್ಯಗಳಿಂದ ಗಾಂಜಾ ಆಮದು ಮಾಡಿಕೊಂಡು ಸಣ್ಣ ಪ್ಯಾಕೆಟ್ ಗಳಲ್ಲಿ ಮಾರಾಟ ಮಾಡುತ್ತಿದ್ದ ಎಂದು ಅಬಕಾರಿ ಇಲಾಖೆ ತಿಳಿಸಿದೆ. ಆತನ ಗ್ಯಾಂಗ್ ನ ಸದಸ್ಯರನ್ನು ಗುರುತಿಸಲಾಗಿದ್ದು, ಗಾಂಜಾ ತಲುಪಿಸುವವರ ಮೇಲೆ ನಿಗಾ ಇಡಲಾಗಿದೆ ಎಂದು ಅಬಕಾರಿ ಇಲಾಖೆ ತಿಳಿಸಿದೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ