ದಿಢೀರ್ ಬೆಳವಣಿಗೆ; ಅಧಿಕೃತ ಸರ್ಕಾರಿ ಬಂಗಲೆ ಖಾಲಿ ಮಾಡಿದ ಪ್ರಿಯಾಂಕಾ ಗಾಂಧಿ!

Published : Jul 30, 2020, 06:52 PM ISTUpdated : Jul 30, 2020, 07:05 PM IST
ದಿಢೀರ್ ಬೆಳವಣಿಗೆ; ಅಧಿಕೃತ ಸರ್ಕಾರಿ ಬಂಗಲೆ ಖಾಲಿ ಮಾಡಿದ ಪ್ರಿಯಾಂಕಾ ಗಾಂಧಿ!

ಸಾರಾಂಶ

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾಗೆ ಸರ್ಕಾರಿ ಬಂಗಲೆ ಖಾಲಿ ಮಾಡುವಂತೆ ನೀಡಿದ್ದ ನೊಟೀಸ್ ಬಾರಿ ಕೋಲಾಹಲ ಸೃಷ್ಟಿಸಿತ್ತು. ಬಿಜೆಪಿ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದ್ದೆ ಅನ್ನೋ ಆರೋಪವೂ ಕೇಳಿ ಬಂದಿತ್ತು. ಈ ಆರೋಪ-ಪ್ರತ್ಯಾರೋಪಗಳ ನಡುವೆ ದಿಢೀರ್ ಆಗಿ ಪ್ರಿಯಾಂಕಾ ವಾದ್ರಾ ಸರ್ಕಾರಿ ಬಂಗಲೆ ಖಾಲಿ ಮಾಡಿದ್ದಾರೆ.

ನವದೆಹಲಿ(ಜು.30): ಆಗಸ್ಟ್ 1ರ ಬಳಿಕ ಭದ್ರತಾ ಕಾರಣಕ್ಕೆ ನೀಡಿದ್ದ ಸರ್ಕಾರಿ ಬಂಗಲೆಯಲ್ಲಿ ಉಳಿದರೆ ದಂಡ ಹಾಗೂ ಬಾಡಿಗೆ ಕಟ್ಟಬೇಕು ಎಂಬ ಎಚ್ಚರಿಕೆ ಬೆನ್ನಲ್ಲೇ ಇದೀಗ  ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾ ಗಾಂಧಿ ತಮ್ಮ ಅಧಿಕೃತ ಸರ್ಕಾರಿ ಬಂಗಲೆ ತೆರವು ಮಾಡಿದ್ದಾರೆ.  ಲೋದಿ ಎಸ್ಟೇಟ್ 35 ಬಂಗಲೆಯಲ್ಲಿನ ವಸ್ತುಗಳನ್ನು ಖಾಲಿ ಮಾಡಿದ ಪ್ರಿಯಾಂಕಾ ಮನೆ ಕೀಯನ್ನು CPWD(ಸೆಂಟ್ರಲ್ ಪಬ್ಲಿಕ್ ವರ್ಕ್ಸ್ ಡಿಪಾರ್ಟ್ಮೆಂಟ್) ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ. 

ಕಾಮಿಡಿ ಸರ್ಕಸ್ ಬಿಡಿ: ಮೋದಿ ನಕ್ಕರಾ ಅಕ್ಕ-ತಮ್ಮಂದಿರ ವಾಗ್ದಾಳಿ ನೋಡಿ?.

ಲೋದಿ ಎಸ್ಟೇಟ್ 25 ಮನೆ ಖಾಲಿ ಮಾಡುವ ಮುನ್ನ ಬಾಕಿ ಉಳಿಸಿದ್ದ ನೀರಿನ ಬಿಲ್, ವಿದ್ಯುತ್ ಬಿಲ್ ಪಾವತಿಸಿದ್ದಾರೆ. ಬಳಿಕ ಮನೆ ಕೀಯನ್ನು ಹಸ್ತಾಂತರಿಸಿದ ಪ್ರಿಯಾಂಕಾ ವಾದ್ರಾ ಲೋದಿ ಎಸ್ಟೇಟ್ 25 ಸರ್ಕಾರಿ ಬಂಗಲೆಯಿಂದ ಹೊರನಡೆದಿದ್ದಾರೆ. ಈ ಮೂಲಕ ಸುದೀರ್ಘ ದಿನಗಳ ವಾಕ್ಸಮರಕ್ಕೆ ತಾತ್ಕಾಲಿಕ ಅಂತ್ಯ ಹಾಡಿದ್ದಾರೆ.

 

ಹಕ್ಕು ಕಸಿಯುವುದು ದೇಶದ್ರೋಹಿ ಕೃತ್ಯಕ್ಕಿಂತ ಹೀನ: ಪ್ರಿಯಾಂಕಾ!

ಪ್ರಿಯಾಂಕ ವಾದ್ರಾ ಗಾಂಧಿಗೆ ಭದ್ರತಾ ಕಾರಣಕ್ಕೆ ಸರ್ಕಾರಿ ಬಂಗಲೆ ನೀಡಲಾಗಿತ್ತು. ಜುಲೈ 1 ರಂದು ಕೇಂದ್ರ ಸರ್ಕಾರ ಸರ್ಕಾರ ಬಂಗಲೆ ತೆರವು ಮಾಡುವಂತೆ ನೊಟೀಸ್ ನೀಡಿತ್ತು. ಆಗಸ್ಟ್ 1 ರೊಳಗೆ ಬಂಗಲೆ ತೆರವು ಮಾಡಬೇಕು. ಇಲ್ಲವಾದಲ್ಲಿ ದಂಡ ಹಾಗೂ ಬಾಡಿಗೆ ನೀಡಬೇಕು ಎಂದು ನೊಟೀಸ್‌ನಲ್ಲಿ ಸೂಚಿಸಲಾಗಿತ್ತು.

ನೊಟೀಸ್ ಬೆನ್ನಲ್ಲೇ ಪ್ರಿಯಾಂಕ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರದ  ವಿರುದ್ಧ ಕಿಡಿ ಕಾರಿದ್ದರು. ಇದು ದ್ವೇಷದ ರಾಜಕಾರಣ. ಬಿಜೆಪಿ ಸರ್ಕಾರದಿಂದ ಇದಕ್ಕಿಂತ ಬೇರೇನು ನಿರೀಕ್ಷಿಸಲು ಸಾಧ್ಯವಿಲ್ಲ. ಕಾಂಗ್ರೆಸ್ ನಾಯಕರನ್ನು ಉದ್ದೇಶ ಪೂರ್ವಕವಾಗಿ ಟಾರ್ಗೆಟ್ ಮಾಡುತ್ದಿದೆ ಎಂದು ಆರೋಪಿಸಿತ್ತು. ಈ ಆರೋಪ-ಪತ್ಯಾರೋಪದ ನಡುವೆ ಇದೀಗ ದಿಢೀರ್ ಪ್ರಿಯಾಂಕ ವಾದ್ರಾ ಗಾಂಧಿ ಬಂಗಲೆ ಖಾಲಿ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ವಂದೇ ಮಾತರಂ ಚರ್ಚೆ ವೇಳೆ ಶಾ ವರ್ಸಸ್‌ ಖರ್ಗೆ
25 ಜನರು ಸಾವನ್ನಪ್ಪಿದ ಪಬ್‌ ಮಾಲೀಕರ ರೆಸಾರ್ಟ್‌ ಧ್ವಂಸ