
ನವದೆಹಲಿ(ಸೆ.12): ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಕೊರೋನಾ ನಿಯಮಂತ್ರಿಸಲು ಸರ್ಕಾರ ಕೈಗೊಂಡ ಕ್ರಮಗಳನ್ನು ಉಲ್ಲೇಖಿಸಿ ಮೋದ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನಿತ್ಯವೂ ಹೆಚ್ಚುತ್ತಿರುವ ಕೊರೋನಾ ಪ್ರಕರಣ, ಆರ್ಥಿಕ ಸ್ಥಿತಿಯ ಕುಸಿತ ಹಾಗೂ ನಿರುದ್ಯೋಗ ಸಮಸ್ಯೆಗೆ ಸಂಬಂಧಿಸಿದಂತೆ ಕೇಂದ್ರಕ್ಕೆ ಛಾಟಿ ಬೀಸಿದ್ದಾರೆ. ಮೋದಿ ಸರ್ಕಾರದ ಕೊರೋನಾ ವಿರುದ್ಧದ 'ಯೋಜಿತ ಯುದ್ಧ' ಭಾರತವನ್ನು ಪ್ರಪಾತಕ್ಕೆ ತಳ್ಳಿದೆ ಎಂದು ರಾಹುಲ್ ಗುಡುಗಿದ್ದಾರೆ.
ಈ ಸಂಬಂಧ ಶನಿವಾರ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ ಕೊರೋನಾ ವಿರುದ್ಧದ ಮೋದಿಯ 'ಯೋಜಿತ ಯುದ್ಧ' ಭಾರತವನ್ನು ಪ್ರಪಾತಕ್ಕೆ ತಳ್ಳಿದೆ. ಜಿಡಿಪಿಯಲ್ಲಿ ಐತಿಹಾಸಿಕ ಶೇ. 24 ರಷ್ಟು ಕುಸಿತ, ಹನ್ನೆರಡು ಕೋಟಿ ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ. 15.5 ಲಕ್ಷ ಕೋಟಿ ರೂ ಹೆಚ್ಚುವರಿ ಸಾಲ, ವಿಶ್ವದಲ್ಲೇ ಅತೀ ಹೆಚ್ಚು ಕೊರೋನಾ ಪ್ರಕರಣ ಹಾಗೂ ಸಾವು. ಆದರೆ ಭಾರತ ಸರ್ಕಾರ ಹಾಗೂ ಮಾಧ್ಯಮಗಳಿಗೆ 'ಸಬ್ ಚಂಗಾ ಸೀ(ಎಲ್ಲವೂ ಚೆನ್ನಾಗಿದೆ)' ಎಂದು ಟ್ವೀಟ್ ಮಾಡಿದ್ದಾರೆ.
ಇದಕ್ಕೂ ಮುನ್ನ ಶುಕ್ರವಾರ ಕಾಂಗ್ರಸ್ ನಾಯಕ ರಾಹುಲ್ ಗಾಂಧೀ ಚೀನಾ ವಿವಾದ ಸಂಬಂಧ ಸರ್ಕಾರದ ವಿರುದ್ಧ ಕಿಡಿ ಕಾರಿದ್ದರು. ಪ್ರಧಾನಿ ನರೇಂದ್ರ ಮೋದಿ ಹಾಗೂ ಸರ್ಕಾರ ಚೀನಾವನ್ನು ನಮ್ಮ ಭೂ ಪ್ರದೇಶದಿಂದ ಹೊರ ಹಾಕುವ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದ್ದಾರೆ ಎಂದು ಅವರು ಆರೋಪಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ