
ನವದೆಹಲಿ: ಯಾವುದೇ ಅಜೆಂಡಾ ಸೂಚಿಸದೆ ಸೆ.18ರಿಂದ ಐದು ದಿನಗಳ ಕಾಲ ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿದೆ ಎಂದು ಟೀಕಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಬುಧವಾರ ಪತ್ರ ಬರೆದಿದ್ದಾರೆ. ಇದೇ ವೇಳೆ, ಈ ವಿಶೇಷ ಅಧಿವೇಶನದಲ್ಲಿ ಮಣಿಪುರ (Manipur) ಸೇರಿ 9 ವಿಷಯಗಳ ಕುರಿತು ಚರ್ಚೆ ನಡೆಸುವಂತೆ ಪತ್ರದಲ್ಲಿ ಆಗ್ರಹಿಸಿದ್ದಾರೆ.
ಯಾವುದೇ ರಾಜಕೀಯ ಪಕ್ಷಗಳ ಜತೆ ಚರ್ಚಿಸದೆ ವಿಶೇಷ ಅಧಿವೇಶನವನ್ನು ಕರೆಯಲಾಗಿದೆ. ಆ ಅಧಿವೇಶನದಲ್ಲಿನ ಅಜೆಂಡಾ ಕುರಿತು ನಮಗ್ಯಾರಿಗೂ (ಪ್ರತಿಪಕ್ಷಗಳು) ಮಾಹಿತಿಯೇ ಇಲ್ಲ. ಸರ್ಕಾರಕ್ಕೆ ಸಂಬಂಧಿಸಿದ ಕಲಾಪ ವ್ಯವಹಾರವನ್ನು ನಡೆಸಲು ವಿಶೇಷ ಅಧಿವೇಶನವನ್ನು ಆಯೋಜಿಸಲಾಗುತ್ತಿದೆ ಎಂದಷ್ಟೇ ಗೊತ್ತಾಗಿದೆ. ಈ ಅಧಿವೇಶನದಲ್ಲಿ ನಾವು ಖಂಡಿತವಾಗಿಯೂ ಭಾಗವಹಿಸುತ್ತೇವೆ. ಸಾರ್ವಜನಿಕವಾಗಿ ಮಹತ್ವವಾದ ವಿಷಯಗಳನ್ನು ಪ್ರಸ್ತಾಪಿಸಲು ನಮಗೆ ಈ ಅಧಿವೇಶನ ಮೂಲಕ ಸಮಯಾವಕಾಶ ಸಿಗುತ್ತದೆ. ಹೀಗಾಗಿ 9 ವಿಷಯಗಳ ಕುರಿತು ಚರ್ಚೆಗೆ ಅವಕಾಶ ಕಲ್ಪಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಆಸ್ಪತ್ರೆಯಿಂದ ಬಿಡುಗಡೆಯಾದ ಬೆನ್ನಲ್ಲೇ ತುರ್ತು ಕಾಂಗ್ರೆಸ್ ಸಭೆ ಕರೆದ ಸೋನಿಯಾ ಗಾಂಧಿ!
ಮಣಿಪುರ ಹಿಂಸಾಚಾರ, ಬೆಲೆ ಏರಿಕೆ, ಕೇಂದ್ರ- ರಾಜ್ಯಗಳ ಸಂಬಂಧ, ಕೋಮು ದಳ್ಳುರಿ, ಚೀನಾದ ಗಡಿ ಅತಿಕ್ರಮಣ, ಅದಾನಿ ಉದ್ದಿಮೆ ವ್ಯವಹಾರದ ವಹಿವಾಟು ಕುರಿತು ತನಿಖೆಗೆ ಜಂಟಿ ಸಂಸದೀಯ ಸಮಿತಿ ರಚನೆ, ಕನಿಷ್ಠ ಬೆಂಬಲ ಬೆಲೆ, ನಿರುದ್ಯೋಗ, ಎಂಎಸ್ಎಂಇ ಬಿಕ್ಕಟ್ಟು ಬಗ್ಗೆ ಸಂಸತ್ತಿನಲ್ಲಿ ಚರ್ಚೆಗೆ ಅವಕಾಶ ನೀಡಬೇಕು ಎಂದು ಸೋನಿಯಾ ಒತ್ತಾಯಿಸಿದ್ದಾರೆ.
ಕಾಂಗ್ರೆಸ್ ಸೇರ್ಪಡೆ ಗುಸುಗುಸು ಬೆನ್ನಲ್ಲೇ ಸೋನಿಯಾ ಜತೆ ಶರ್ಮಿಳಾ ಭೇಟಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ