ಕಾಂಗ್ರೆಸ್‌ಗೆ ಗುಡ್‌ಬೈ ಎಂದ ಸುಶ್ಮಿತಾ ದೇವ್: ಟಿಎಂಸಿಗೆ ಸೇರ್ಪಡೆ?

Published : Aug 16, 2021, 01:39 PM IST
ಕಾಂಗ್ರೆಸ್‌ಗೆ ಗುಡ್‌ಬೈ ಎಂದ ಸುಶ್ಮಿತಾ ದೇವ್: ಟಿಎಂಸಿಗೆ ಸೇರ್ಪಡೆ?

ಸಾರಾಂಶ

* ಕಾಂಗ್ರೆಸ್‌ಗೆ ಸುಶ್ಮಿತಾ ದೇವ್ ಗುಡ್‌ಬೈ * ಟಿಎಂಸಿಗೆ ಸೇರ್ಪಡೆಯಾಗ್ತಾರಾ ಸುಶ್ಮಿತಾ * ದೀದೀ ಭೇಟಿಯಾಗಲು ಪಶ್ಚಿಮ ಬಂಗಾಳಕ್ಕೆ ತೆರಳಿದ ಸುಶ್ಮಿತಾ

ಕೋಲ್ಕತ್ತಾ(ಆ.16): ಸೋಮವಾರ ಕಾಂಗ್ರೆಸ್ ಪಕ್ಷ ತೊರೆದಿರುವ ಸುಶ್ಮಿತಾ ದೇವ್ ತೃಣಮೂಲ ಕಾಂಗ್ರೆಸ್ ಸೇರಲಿದ್ದ, ಅಸ್ಸಾಂನಲ್ಲಿ ಪಕ್ಷದ ನಾಯಕಿಯಾಗಿ ಗುರುತಿಸಿಕೊಳ್ಳಲಿದ್ದಾರೆ. ಸುಶ್ಮಿತಾ ಇಂದು, ಸೋನವಾರ ಟಿಎಂಸಿಗೆ ಸೇರುತ್ತಾರೆನ್ನಲಾಗಿದ್ದು, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಮತ್ತು ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಅವರನ್ನು ಭೇಟಿ ಮಾಡಲು ಕೋಲ್ಕತ್ತಾಗೆ ತೆರಳಿದ್ದಾರೆ. ಟಿಎಂಸಿ ಮೂಲಗಳಿಂದ ಲಭ್ಯವಾದ ಮಾಹಿತಿ ಅನ್ವಯ 'ಸುಶ್ಮಿತಾರವರು ಪಕ್ಷಕ್ಕೆ ಸೇರ್ಪಡೆಯಾದರೆ, ಅಸ್ಸಾಂನಲ್ಲಿ ತೃಣಮೂಲ ಕಾಂಗ್ರೆಸ್ ಪ್ರಮುಖ ನಾಯಕಿಯಾಗಿ ಗುರುತಿಸಿಕೊಳ್ಳಲಿದ್ದಾರೆ' ಎನ್ನಲಾಗಿದೆ. ಸುಶ್ಮಿತಾ ಅವರು ಅಸ್ಸಾಂನ ಸಿಲ್ಚಾರ್‌ನಿಂದ ಕಾಂಗ್ರೆಸ್ ಸಂಸದೆ ಆಗಿದ್ದರು, ಅವರ ತಂದೆಯೂ ಈ ಹಿಂದೆ ಈ ಕ್ಷೇತ್ರದಲ್ಲಿ ಭಾರೀ ಪ್ರಾಬಲ್ಯ ಹೊಂದಿದ್ದರು ಎಂಬುವುದು ಉಲ್ಲೇಖನೀಯ.

ಕಾಂಗ್ರೆಸ್ ನ ಮಾಜಿ ಸಂಸದೆ ಸುಶ್ಮಿತಾ ದೇವ್, ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದು ಪಕ್ಷ ತೊರೆಯುವ ಬಗ್ಗೆ ಮಾಹಿತಿ ನೀಡಿದ್ದಾರೆ. ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ, ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ಮಹಾ ಮೈತ್ರಿಕೂಟವನ್ನು ರಚಿಸುವ ಮೂಲಕ ಚುನಾವಣೆಗಳಲ್ಲಿ ಸೆಣಸಾಡಿತ್ತು. ಹೀಗಿದ್ದರೂ ಪಕ್ಷಕ್ಕೆ ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಡೆಯಲು ಸಾಧ್ಯವಾಗಲಿಲ್ಲ. ಇನ್ನು ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆಯಾಗಿದ್ದ ಸುಶ್ಮಿತಾ ದೇವ್, ಪಕ್ಷಕ್ಕೆ ಸಂಬಂಧಿಸಿದ ವಾಟ್ಸಾಪ್ ಗುಂಪನ್ನು ತೊರೆದಿದ್ದಾರೆ.

ಕಾಂಗ್ರೆಸ್ ನ ಮಾಜಿ ಸಂಸದೆ ಸುಶ್ಮಿತಾ ದೇವ್ ಅವರು ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದು ಪಕ್ಷ ತೊರೆಯುವ ಬಗ್ಗೆ ಮಾಹಿತಿ ನೀಡಿದ್ದರು. ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ, ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ಮಹಾ ಮೈತ್ರಿಕೂಟವನ್ನು ರಚಿಸುವ ಮೂಲಕ ಚುನಾವಣೆಗಳಲ್ಲಿ ಹೋರಾಡಿತು, ಆದರೆ ಪಕ್ಷವು ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಡೆಯಲು ಸಾಧ್ಯವಾಗಲಿಲ್ಲ. ಸುಷ್ಮಿತಾ ದೇವ್ ಅವರು ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆಯಾಗಿದ್ದರು. ಅವರು ಪಕ್ಷಕ್ಕೆ ಸಂಬಂಧಿಸಿದ ವಾಟ್ಸಾಪ್ ಗುಂಪನ್ನು ತೊರೆದಿದ್ದಾರೆ.

ಇನ್ನು ದೆಹಲಿಯಲ್ಲಿ ಅತ್ಯಾಚಾರಕ್ಕೊಳಗಾದ ಮತ್ತು ಕೊಲೆಗೀಡಾದ 9 ವರ್ಷದ ಬಾಲಕಿಯ ಪೋಷಕರ ಫೋಟೋಗಳನ್ನು ಶೇರ್ ಮಾಡಿದ ನಾಯಕರಲ್ಲಿ ಸುಶ್ಮಿತಾ ಕೂಡಾಲ್ಲಿ ಒಬ್ಬರಾಗಿದ್ದರು. ಹುಡುಗಿಯ ಕುಟುಂಬವನ್ನು ಭೇಟಿ ಮಾಡಿದ ನಂತರ ಈ ಚಿತ್ರವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಂಚಿಕೊಂಡಿದ್ದರು. ಬಳಿಕ ಅನೇಕ ಮಂದಿ ಈ ಫೋಟೋವನ್ನು ಟ್ವೀಟ್ ಮಾಡಿದ್ದರು. ಆದರೆ ರಾಹುಲ್ ಗಾಂಧಿಯವರ ಖಾತೆಯನ್ನು ಲಾಕ್ ಮಾಡಿದ ತಕ್ಷಣ, ಸುಶ್ಮಿತಾ ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ತಮ್ಮ ಪ್ರೊಫೈಲ್ ಫೋಟೋ ಬದಲಾಯಿಸಿ ಮಾಜಿ ಕಾಂಗ್ರೆಸ್ ಅಧ್ಯಕ್ಷರ (ರಾಹುಲ್ ಗಾಂಧಿ) ಫೋಟೋವನ್ನು ಒಗ್ಗಟ್ಟನ್ನು ಪ್ರದರ್ಶಿಸಿದ್ದರು. ಕಳೆದ ವಾರ ಖಾತೆಯನ್ನು ಮತ್ತೆ ಸಕ್ರಿಯಗೊಳಿಸಲಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

India Latest News Live: ಬಿಜೆಪಿ ಮಹಾತ್ಮ ಗಾಂಧಿ ಹಂತಕ ನಾಥೂರಾಮ್‌ ಗೋಡ್ಸೆಗೂ ಭಾರತ ರತ್ನ ನೀಡುತ್ತೆ: ಒವೈಸಿ ಕಿಡಿ
ಮೋದಿಗೆ ಏನು ಮಾಡ್ಬೋದು ನೋಡೋಣ ವಿಪಕ್ಷ ಸಂಚು - ಪ್ರಧಾನಿ ಮೇಲೆ ಹಲ್ಲೆ ಪ್ರಶ್ನೆಯೇ ಇಲ್ಲ: ಪ್ರಿಯಾಂಕಾ