ಸಿಎಂ ಜತೆ ಸಭೆ ಬೆನ್ನಲ್ಲೇ ಕಾಂಗ್ರೆಸ್ ಶಾಸಕಗೆ ಸೋಂಕು| ಹೆಚ್ಚಿದ ಆತಂಕ| ಶಾಸಕ ಆಸ್ಪತ್ರೆಗೆ ದಾಖಲು
ಅಹಮದಾಬಾದ್(ಏ.15): ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರು ನಡೆಸಿದ ಸಭೆಯಲ್ಲಿ ಬಾಗಿಯಾದ ಬೆನ್ನಲ್ಲೇ, ಕಾಂಗ್ರೆಸ್ ಶಾಸಕರೊಬ್ಬರು ಕೊರೋನಾಕ್ಕೆ ತುತ್ತಾದ ಘಟನೆ ಮಂಗಳವಾರ ನಡೆದಿದೆ.
ಕೊರೋನಾಕ್ಕೆ ತುತ್ತಾಗಿರುವ ಕಾಂಗ್ರೆಸ್ ಶಾಸಕ ಇಮ್ರಾನ್ ಖೇಡಾವಾಲ ಅವರು ಶೀಘ್ರವೇ ಕೊರೋನಾ ವ್ಯಾಧಿಗೆ ಚಿಕಿತ್ಸೆ ನೀಡುವ ನಿರ್ದಿಷ್ಟ ಆಸ್ಪತ್ರೆಗೆ ದಾಖಲಾಗಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಂಧಿನಗರದಲ್ಲಿರುವ ಸಿಎಂ ಅಧಿಕೃತ ನಿವಾಸದಲ್ಲಿ ಮಂಗಳವಾರ ನಡೆದ ಮುಖ್ಯಮಂತ್ರಿ ರೂಪಾನಿ ನಡೆಸಿದ ಸಭೆಯಲ್ಲಿ ಕೆಲ ಕಾಂಗ್ರೆಸ್ ಶಾಸಕರ ಜೊತೆ ಖೇಡಾವಾಲ ಅವರು ಸಹ ಭಾಗಿಯಾಗಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ