
ನವದೆಹಲಿ(ಡಿ.13): ಮಹತ್ವದ ಬೆಳವಣಿಗೆಯೊಂದರಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆ ಸಿಂಧುತ್ವದ ವಿರುದ್ಧ ಕಾಂಗ್ರೆಸ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಕಾಯ್ದೆ ಸಂವಿಧಾನದ 14ನೇ ವಿಧಿ ಉಲ್ಲಂಘಿಸುತ್ತದೆ ಎಂದು ಆಪಾದಿಸಿ ಕಾಂಗ್ರೆಸ್ ದಾವೆ ಹೂಡಿದೆ.
ಪೌರತ್ವ ಮಸೂದೆಗೆ ರಾಷ್ಟ್ರಪತಿ ಅಂಕಿತ: ಇಂದಿನಿಂದಲೇ ಕಾನೂನು ಜಾರಿ!
ಕಾನೂನಿನ ಮುಂದೆ ಯಾವುದೇ ವ್ಯಕ್ತಿಗೆ ಸಮಾನತೆಯನ್ನು ರಾಜ್ಯವು ನಿರಾಕರಿಸುವಂತಿಲ್ಲ ಅಥವಾ ದೇಶದೊಳಗೆ ಕಾನೂನಿನಡಿ ಸಮಾನ ರಕ್ಷಣೆ ನೀಡಬೇಕೆಂದು ಭಾರತ ಸಂವಿಧಾನದ 14ನೇ ವಿಧಿಯಲ್ಲಿ ಹೇಳಲಾಗಿದೆ.
ಈ ಹಿನ್ನೆಲೆಯಲ್ಲಿ ಕಾಯ್ದೆ ಪ್ರಶ್ನಾರ್ಹವಾಗಿದ್ದು, ಈ ಕುರಿತು ಸುಪ್ರೀಂಕೋರ್ಟ್ ಮಧ್ಯಪ್ರವೇಶಿಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.
ಪೌರತ್ವ ಮಸೂದೆ: ಈಶಾನ್ಯ ರಾಜ್ಯಗಳ ಭಯ ಅನಗತ್ಯ
ಪೌರತ್ವ ಕಾಯ್ದೆಯಿಂದ ಸಂವಿಧಾನದ ಮೂಲಭೂತ ವಿಚಾರಗಳ ಮೇಲೆ ಹಲ್ಲೆಯಾಗಲಿದ್ದು, ಸುಪ್ರೀಂಕೋರ್ಟ್’ನಲ್ಲಿ ಕಾಯ್ದೆಯ ಭವಿಷ್ಯ ನಿರ್ಧಾರವಾಗಲಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ ಹೇಳಿದ್ದಾರೆ.
ನೀವ್ಯಾರೂ ಹೆದರಬೇಕಿಲ್ಲ: ಈಶಾನ್ಯ ಜನತೆಗೆ ಮೋದಿ ಭರವಸೆ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ