ರಾಹುಲ್ ಗಾಂಧಿ ಆಪ್ತನಿಗೆ ಶಾಕ್; ವಿ.ಡಿ.ಸತೀಶನ್‌ಗೆ ಕೇರಳಂ ರಾಜ್ಯದ ಸಿಎಂ ಪಟ್ಟ

Published : May 14, 2026, 12:13 PM ISTUpdated : May 14, 2026, 12:23 PM IST
kerala next chief minister vd satheesan congress announcement rahul gandhi venugopal candidate leadership

ಸಾರಾಂಶ

ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಅಧಿಕೃತವಾಗಿ ಘೋಷಣೆ ಮಾಡಿದೆ. ಸಿ. ವೇಣುಗೋಪಾಲ್ ಮತ್ತು ರಮೇಶ್ ಚೆನ್ನಿತ್ತಲ ಅವರ ಹೆಸರುಗಳು ಸಿಎಂ ರೇಸ್‌ನಲ್ಲಿದ್ದವು.

ತಿರುವನಂತರಪುರ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಅಧಿಕೃತವಾಗಿ ಘೋಷಣೆ ಮಾಡಿದೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಕೆ.ಸಿ.ವೇಣುಗೋಪಾಲ್ ಅವರ ಹೆಸರು ಸಿಎಂ ಸ್ಥಾನಕ್ಕೆ ಕೇಳಿ ಬಂದಿತ್ತು. ಅಂತಿಮವಾಗಿ ಈ ಹಿಂದೆ ವಿರೋಧ ಪಕ್ಷದ ನಾಯಕರಾಗಿ ಕೆಲಸ ಮಾಡಿದ್ದ ವಿ.ಡಿ.ಸತೀಶನ್‌ ಅವರಿಗೆ ಮುಖ್ಯಮಂತ್ರಿ ಸ್ಥಾನ ಒಲಿದು ಬಂದಿದೆ. 

ಕಾಂಗ್ರೆಸ್ ಘಟಕದ ಪ್ರಧಾನ ಕಾರ್ಯದರ್ಶಿಯಾಗಿರುವ ಕೆ.ಸಿ.ವೇಣುಗೋಪಾಲ್ ಪಕ್ಷದ ಪ್ರಭಾವಿ ನಾಯಕರಾಗಿದ್ದರು. ಹಾಗಾಗಿಯೇ ಆಯ್ಕೆಯಾದ ಕೇರಳ ಕಾಂಗ್ರೆಸ್ ಶಾಸಕರು, ಕೆ.ಸಿ.ವೇಣುಗೋಪಾಲ್ ಅವರಿಗೆ ಬೆಂಬಲ ಸೂಚಿಸಿದ್ದರು. ಆದ್ರೆ ವಿ.ಡಿ.ಸತೀಶನ್ ಕೇರಳದ ಜನಪ್ರಿಯ ನಾಯಕರಾಗಿದ್ದು, ಸ್ಥಳೀಯವಾಗಿ ಪ್ರಭಾವಿ ನಾಯಕರಾಗಿದ್ದಾರೆ.

 

 

ಚುನಾವಣಾ ಫಲಿತಾಂಶದ ನಂತರ, 'ಮುಖ್ಯಮಂತ್ರಿ ಯಾರು?' ಎಂಬ ಪ್ರಶ್ನೆ ಕೇರಳ ರಾಜಕೀಯದಲ್ಲಿ ಪ್ರಮುಖ ಚರ್ಚೆಯಾಗಿತ್ತು. 11 ದಿನಗಳ ಅನಿಶ್ಚಿತತೆಯ ನಂತರ, ಹೈಕಮಾಂಡ್ ಚರ್ಚೆಗಳಿಗೆ ಅಂತ್ಯ ಹಾಡಿದೆ. ಅಂತಿಮ ಹಂತದ ಚರ್ಚೆಗಳಲ್ಲಿ ಕೆ.ಸಿ. ವೇಣುಗೋಪಾಲ್ ಮತ್ತು ರಮೇಶ್ ಚೆನ್ನಿತ್ತಲ ಅವರ ಹೆಸರುಗಳು ಸಹ ಸಕ್ರಿಯವಾಗಿದ್ದರೂ, ಚುನಾವಣೆಯಲ್ಲಿ ಸತೀಶನ್ ಅವರು ಯುಡಿಎಫ್‌ನ ಮುಖವಾಗಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Daresh Ahmed: ವೈದ್ಯ ವೃತ್ತಿ ಬಿಟ್ಟು IAS ಆಗಿದ್ದ, ಈಗ ತಮಿಳುನಾಡಿನ ಆರೋಗ್ಯ ಇಲಾಖೆ ಕಾರ್ಯದರ್ಶಿಯಾದ ಈ ವ್ಯಕ್ತಿ ಯಾರು?
ಪುಷ್ಪಾ ಸರ್ಕಾರ ಎಂಬ ಉದಯನಿಧಿ ಸ್ಟಾಲಿನ್ ವ್ಯಂಗ್ಯಕ್ಕೆ ಸಿಎಂ ವಿಜಯ್ ಮೊದಲ ತಿರುಗೇಟು