ಹಿಂದೂಗಳನ್ನು ವಿಭಜಿಸಲು ಕಾಂಗ್ರೆಸ್‌ ಸಂಚು: ಪ್ರಧಾನಿ ಮೋದಿ

Published : Oct 10, 2024, 11:53 AM IST
ಹಿಂದೂಗಳನ್ನು ವಿಭಜಿಸಲು ಕಾಂಗ್ರೆಸ್‌ ಸಂಚು: ಪ್ರಧಾನಿ ಮೋದಿ

ಸಾರಾಂಶ

ಕಾಂಗ್ರೆಸ್‌ ಹಿಂದೂಗಳನ್ನು ವಿಭಜಿಸಲು ಬಯಸಿದ್ದು, ಸಮಾಜದಲ್ಲಿ ವಿಷ ತುಂಬುತ್ತಿದೆ. ಅದು ಮುಸ್ಲಿಮರನ್ನು ಮತ ಬ್ಯಾಂಕ್‌ನಂತೆ ನೋಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಪಕ್ಷದ ವಿರುದ್ಧ ಹರಿಹಾಯ್ದಿದ್ದಾರೆ. 

ಮುಂಬೈ (ಅ.10): ಕಾಂಗ್ರೆಸ್‌ ಹಿಂದೂಗಳನ್ನು ವಿಭಜಿಸಲು ಬಯಸಿದ್ದು, ಸಮಾಜದಲ್ಲಿ ವಿಷ ತುಂಬುತ್ತಿದೆ. ಅದು ಮುಸ್ಲಿಮರನ್ನು ಮತ ಬ್ಯಾಂಕ್‌ನಂತೆ ನೋಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಪಕ್ಷದ ವಿರುದ್ಧ ಹರಿಹಾಯ್ದಿದ್ದಾರೆ. ಮಹಾರಾಷ್ಟ್ರದಲ್ಲಿ 7,600 ಕೋಟಿ ಮೌಲ್ಯದ ಯೋಜನೆಗಳಿಗೆ ವೀಡಿಯೋ ಕಾನ್ಫರೆನ್ಸ್‌ ಮೂಲಕ ಚಾಲನೆ ನೀಡಿದ ಮೋದಿ, ಹರ್ಯಾಣದಲ್ಲಿ ಬಿಜೆಪಿಗೆ ಆದ ಗೆಲುವನ್ನು ಉಲ್ಲೇಖಿಸಿ ‘ಹಿಂದುಳಿದ ವರ್ಗದವರು ಹಾಗೂ ದಲಿತರು ಬಿಜೆಪಿಯೊಂದಿಗಿದ್ದಾರೆ. ಜನರ ದಾರಿ ತಪ್ಪಿಸಲು ನೋಡುತ್ತಿದ್ದ ಕಾಂಗ್ರೆಸ್‌ನ ಎಲ್ಲಾ ಕುತಂತ್ರಗಳು ಸೋತಿವೆ. ಇದು ದೇಶವಾಸಿಗಳ ಮನಸ್ಥಿತಿಯನ್ನು ತೋರಿಸುತ್ತದೆ’ ಎಂದರು.

‘ಕಾಂಗ್ರೆಸ್‌ ದಲಿತರ ಮೀಸಲಾತಿಯನ್ನು ತನ್ನ ವೋಟ್‌ಬ್ಯಾಂಕ್‌ಗೆ ಕೊಡುತ್ತದೆ ಎಂದು ಅವರು ಅರಿತಿದ್ದಾರೆ. ಅದು ರೈತರ ದಾರಿ ತಪ್ಪಿಸಲು ನೋಡಿತಾದರೂ, ಅವರಿಗೆ ಕನಿಷ್ಠ ಬೆಂಬಲ ಬೆಲೆ ನೀಡಿದ್ದು ಯಾರೆಂದು ತಿಳಿದಿದ್ದಾರೆ. ಈ ಮೂಲಕ ತಾವು ನಗರ ನಕ್ಸಲರ ಗುರಿಯಾಗುವುದಿಲ್ಲ ಎಂಬುದನ್ನು ತೋರಿಸಿದ್ದಾರೆ’ ಎಂದು ಮೋದಿ ಹೇಳಿದರು. ಕಾಂಗ್ರೆಸ್‌ ಬೇಜವಾಬ್ದಾರಿಯುತ ಪಕ್ಷ ಎಂದಿರುವ ಪ್ರಧಾನಿ, ‘ಅವರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ’ ಎನ್ನುತ್ತಾ, ಮುಂದಿನ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಮಹಾಯುತಿ ಸರ್ಕಾರವನ್ನೇ ಗೆಲ್ಲಿಸಲು ಕರೆ ನೀಡಿದರು.

ಈ ವೇಳೆ ಮಹಾರಾಷ್ಟ್ರದ ಅಭಿವೃದ್ಧಿಯ ಕುರಿತು ಮಾತನಾಡುತ್ತಾ, ‘ಇಂದು ರಾಜ್ಯಕ್ಕೆ 10 ವೈದ್ಯಕೀಯ ಕಾಲೇಜುಗಳು ಲಭಿಸಲಿವೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಉನ್ನತೀಕರಿಸಿ, ಮೆಟ್ರೋ ವಿಸ್ತರಿಸಲಾಗುತ್ತಿದೆ. ಅತಿದೊಡ್ಡ ಬಂದರಾದ ವಧವನ್‌ಗೆ ಅಡಿಪಾಯ ಹಾಕಲಾಗಿದೆ. ಮರಾಠಿಗೆ ಶಾಸ್ತ್ರೀಯ ಭಾಷೆಯ ಸ್ಥಾನ ದೊರೆತಿದೆ’ ಎಂದರು.

ಬೆಳಗ್ಗೆ 4 ಗಂಟೆಯಿಂದಲೇ ವೆಟ್ಟೈಯಾನ್‌ ಪ್ರದರ್ಶನ: ರಜನಿಕಾಂತ್‌ ಡ್ಯಾನ್ಸ್‌ಗೆ ಅಭಿಮಾನಿಗಳು ಫಿದಾ

ಕಾಂಗ್ರೆಸ್‌ ಕಿಡಿ: ಸರ್ಕಾರಿ ವೇದಿಕೆಯನ್ನು ರಾಜಕೀಯ ಭಾಷಣಕ್ಕೆ ಪ್ರಧಾನಿ ಬಳಸಿಕೊಂಡಿದ್ದಾರೆ ಎಂದು ಮೋದಿ ಮಾಡಿದ ಟೀಕೆಗೆ ಕಾಂಗ್ರೆಸ್ ವಕ್ತಾರ ಪವನ್‌ ಖೇರಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

3 ಅಡಿ ಜಾಗದಲ್ಲಿ ಎರಡು ಮಹಡಿ ಮನೆ: ಇರುವುದರಲ್ಲೇ ಅರಮನೆ ಕಾಣೋದು ಅಂದ್ರೆ ಇದೇನಾ?
ಮದುವೆ ದಿನ ಸಿಂದೂರವನ್ನೇ ಮರೆತು ಹೋದ ಮನೆ ಮಂದಿ: ನಿಮಿಷದಲ್ಲೇ ಡೆಲಿವರಿ ನೀಡಿ ಅನಾಹುತ ತಪ್ಪಿಸಿದ ಬ್ಲಿಂಕಿಟ್