ಏಪ್ರಿಲ್‌ನಲ್ಲಿ ಕಾಂಗ್ರೆಸ್‌ ಅಧ್ಯಕ್ಷ ಹುದ್ದೆಗೆ ಚುನಾವಣೆ: ರಾಹುಲ್‌ ಒಪ್ಪದಿದ್ದರೆ ಪ್ರಿಯಾಂಕಾ ಸ್ಪರ್ಧೆ?

Published : Dec 17, 2020, 12:57 PM IST
ಏಪ್ರಿಲ್‌ನಲ್ಲಿ ಕಾಂಗ್ರೆಸ್‌ ಅಧ್ಯಕ್ಷ ಹುದ್ದೆಗೆ ಚುನಾವಣೆ: ರಾಹುಲ್‌ ಒಪ್ಪದಿದ್ದರೆ ಪ್ರಿಯಾಂಕಾ ಸ್ಪರ್ಧೆ?

ಸಾರಾಂಶ

ಚುನಾವಣೆಗಳಲ್ಲಿ ಮೇಲಿಂದ ಮೇಲೆ ಸೋಲುಣ್ಣುತ್ತಿರುವ ಹಾಗೂ ಆಂತರಿಕ ಬಂಡಾಯದಿಂದ ನಲುಗುತ್ತಿರುವ ಕಾಂಗ್ರೆಸ್‌| ಏಪ್ರಿಲ್‌ನಲ್ಲಿ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷ ಹುದ್ದೆಗೆ ಚುನಾವಣೆ?| ರಾಹುಲ್‌ ಒಪ್ಪದಿದ್ದರೆ ಪ್ರಿಯಾಂಕಾ ಸ್ಪರ್ಧೆ?

ನವದೆಹಲಿ(ಡಿ.17): ಚುನಾವಣೆಗಳಲ್ಲಿ ಮೇಲಿಂದ ಮೇಲೆ ಸೋಲುಣ್ಣುತ್ತಿರುವ ಹಾಗೂ ಆಂತರಿಕ ಬಂಡಾಯದಿಂದ ನಲುಗುತ್ತಿರುವ ಕಾಂಗ್ರೆಸ್‌ ಪಕ್ಷಕ್ಕೆ ಹೊಸ ರಾಷ್ಟ್ರೀಯ ಅಧ್ಯಕ್ಷರನ್ನು ಆಯ್ಕೆ ಮಾಡಲು ಏಪ್ರಿಲ್‌ ತಿಂಗಳಲ್ಲಿ ಆಂತರಿಕ ಚುನಾವಣೆ ನಡೆಯುವ ಸಾಧ್ಯತೆಗಳಿವೆ. ಅನಾರೋಗ್ಯವಿದ್ದರೂ ಅನಿವಾರ್ಯ ಕಾರಣಗಳಿಂದ ಹಂಗಾಮಿ ಅಧ್ಯಕ್ಷೆಯಾಗಿ ಮುಂದುವರೆಯುತ್ತಿರುವ ಸೋನಿಯಾ ಗಾಂಧಿ ಜಾಗಕ್ಕೆ ಹೊಸ ಅಧ್ಯಕ್ಷರನ್ನು ಆಂತರಿಕ ಚುನಾವಣೆಯ ಮೂಲಕ ಆಯ್ಕೆ ಮಾಡಲು ಪಕ್ಷ ಒಲವು ವ್ಯಕ್ತಪಡಿಸಿದೆ ಎಂದು ಮೂಲಗಳು ಹೇಳಿವೆ.

ಈ ಚುನಾವಣೆಯಲ್ಲಿ ಮಾಜಿ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಸ್ಪರ್ಧಿಸಲು ಒಪ್ಪದಿದ್ದರೆ ಅವರ ಸೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧಿಸುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಆದರೆ, ಪಕ್ಷದ ಪರಮೋಚ್ಚ ನಿರ್ಣಾಯಕ ಸಮಿತಿಯಾಗಿರುವ ‘ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ’ (ಸಿಡಬ್ಲ್ಯುಸಿ)ಗೆ ಸದಸ್ಯರನ್ನು ಆಯ್ಕೆ ಮಾಡಲು ಆಂತರಿಕ ಚುನಾವಣೆ ನಡೆಸಬೇಕೋ ಬೇಡವೋ ಎಂಬ ಬಗ್ಗೆ ಇನ್ನೂ ಗೊಂದಲಗಳಿವೆ.

ಕಳೆದ ಆಗಸ್ಟ್‌ನಲ್ಲಷ್ಟೇ ಈ ಸಮಿತಿಯನ್ನು ಪುನಾರಚಿಸಲಾಗಿದ್ದರೂ, ಪಕ್ಷದ 23 ಹಿರಿಯ ನಾಯಕರು ಎಐಸಿಸಿಗೆ ಪೂರ್ಣಾವಧಿ ಅಧ್ಯಕ್ಷರನ್ನು ನೇಮಿಸಬೇಕು ಹಾಗೂ ಸಿಡಬ್ಲ್ಯುಸಿಗೆ ಚುನಾವಣೆ ಮೂಲಕ ಸದಸ್ಯರನ್ನು ಆಯ್ಕೆ ಮಾಡಬೇಕು ಎಂದು ಪತ್ರ ಬರೆದು ದೊಡ್ಡ ವಿವಾದ ಏರ್ಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಸಿಡಬ್ಲ್ಯುಸಿಗೆ ಆಂತರಿಕ ಚುನಾವಣೆ ನಡೆಸಲಾಗುತ್ತದೆಯೇ ಇಲ್ಲವೇ ಎಂಬುದು ಕುತೂಹಲ ಮೂಡಿಸಿದೆ. ಎಐಸಿಸಿ ಚುನಾವಣಾ ವಿಭಾಗದ ಮುಖ್ಯಸ್ಥರಾಗಿರುವ ಮಧುಸೂದನ್‌ ಮಿಸ್ತ್ರಿ ಅವರ ಸಮಿತಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ.

ಬಿಹಾರ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಹೀನಾಯವಾಗಿ ಸೋತ ನಂತರ ಪಕ್ಷಕ್ಕೆ ಆದಷ್ಟುಬೇಗ ಪೂರ್ಣಾವಧಿ ಹೊಸ ಅಧ್ಯಕ್ಷರು ಬೇಕೆಂಬ ಕೂಗು ಜೋರಾಗಿದೆ. ಮುಂಬರುವ ಪಶ್ಚಿಮ ಬಂಗಾಳ, ತಮಿಳುನಾಡು ಹಾಗೂ ಅಸ್ಸಾಂ ವಿಧಾನಸಭೆ ಚುನಾವಣೆ ನಂತರ ಅಧ್ಯಕ್ಷರ ಆಯ್ಕೆಗೆ ಆಂತರಿಕ ಚುನಾವಣೆ ನಡೆಸಬೇಕೆಂಬ ಚಿಂತನೆಯನ್ನು ಪಕ್ಷ ಹೊಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕರ್ನಾಟಕಕ್ಕೆ ಶೀತ ಅಲೆಯ ಕಂಟಕ: ರಾಯಚೂರಿನಲ್ಲಿ 9.4 ಡಿಗ್ರಿಗೆ ಕುಸಿದ ತಾಪಮಾನ! ಎಲ್ಲೆಲ್ಲಿ ಆರೆಂಜ್ ಅಲರ್ಟ್?
ಮುಕೇಶ್ ಅಂಬಾನಿ 68ರಲ್ಲೂ ಫಿಟ್ & ಎನರ್ಜಿಟಿಕ್‌ ಆಗಿರಲು ಬೆಳಗ್ಗಿನ ಈ ಅಭ್ಯಾಸ ಕಾರಣ!