ಮೋದಿ ಸರ್ಕಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಏಳು ಪ್ರಶ್ನೆ

Published : Jun 18, 2024, 04:34 PM IST
ಮೋದಿ ಸರ್ಕಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಏಳು ಪ್ರಶ್ನೆ

ಸಾರಾಂಶ

ಬಾಲಸೋರ್‌ನಲ್ಲಿ ಭೀಕರ ರೈಲು ದುರಂತ ಸಂಭವಿಸಿದರೂ, ಅಂದಿನಿಂದ ಇಂದಿನವರೆಗೆ ರೈಲುಗಳಿಗೆ ಕವಚ ನಿರೋಧಕ ವ್ಯವಸ್ಥೆಯನ್ನು ಯಾಕೆ ಅಳವಡಿಸಿಲ್ಲ?

ನವದೆಹಲಿ: ರಾಜ್ಯಸಭಾ ವಿಪಕ್ಷ ನಾಯಕ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ (Congress President Mallikarjun Kharge), ಪ್ರಧಾನಿ ಮೋದಿ ಸರ್ಕಾರಕ್ಕೆ ಏಳು ಪ್ರಶ್ನೆಗಳನ್ನು ಕೇಳಿದ್ದಾರೆ. ಹೊಣೆಗಾರಿಕೆಯಿಂದ ತಪ್ಪಿಸುಕೊಳ್ಳುವ ಉದ್ದೇಶದಿಂದ ಮೋದಿ ಸರ್ಕಾರ (Modi Government), ಸಾಮಾನ್ಯ ಬಜೆಟ್‌ನೊಂದಿಗೆ ರೈಲ್ವೆ ಬಜೆಟ್ ವಿಲೀನಗೊಳಿಸಿದೆ ಎಂದು ಆರೋಪಿಸಿದ್ದಾರೆ. ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ (West Bengal's Darjeeling district) ರೈಲು ಅಪಘಾತದಲ್ಲಿ (Railway Accident) 10 ಜನರು ಸಾವನ್ನಪ್ಪಿದ್ದು, 12ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ. ರೈಲುಗಳ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದ ಹಿನ್ನೆಲೆ ಈ ದುರಂತ ಸಂಭವಿಸಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಆರೋಪ ಮಾಡಿದ್ದಾರೆ. 

ಮೋದಿ ಸರ್ಕಾರಕ್ಕೆ ಏಳು ಪ್ರಶ್ನೆ

ಬಾಲಸೋರ್‌ನಲ್ಲಿ ಭೀಕರ ರೈಲು ದುರಂತ ಸಂಭವಿಸಿದರೂ, ಅಂದಿನಿಂದ ಇಂದಿನವರೆಗೆ ರೈಲುಗಳಿಗೆ ಕವಚ ನಿರೋಧಕ ವ್ಯವಸ್ಥೆಯನ್ನು ಯಾಕೆ ಅಳವಡಿಸಿಲ್ಲ? ಕಳೆದ ಒಂದು ದಶಕದಿಂದ ಭರ್ತಿಯಾಗದೆ ಉಳಿದಿರುವ ರೈಲ್ವೇಯಲ್ಲಿನ ಸುಮಾರು 3,00,000 ಖಾಲಿ ಹುದ್ದೆಗಳನ್ನು ಭರ್ತಿ ಮಾಡುತ್ತಿಲ್ಲ ಯಾಕೆ?

ಎನ್‌ಸಿಆರ್‌ಬಿ ವರದಿ ಪ್ರಕಾರ, 2017 ಮತ್ತು 2021 ರ ನಡುವೆ ಸಂಭವಿಸಿದ ರೈಲು ಅಪಘಾತಗಳಲ್ಲಿ 1,00,000 ಜನರು ಸಾವನ್ನಪ್ಪಿದ್ದಾರೆ. ಈ ಎಲ್ಲಾ ಸಾವುಗಳಿಗೆ ಯಾರು ಹೊಣೆ? ಉದ್ಯೋಗಿಗಳ ಕೊರತೆಯಿಂದ ಲೋಕೋ ಪೈಲಟ್‌ಗಳ ಕೆಲಸದ ಅವಧಿ ಹೆಚ್ಚುತ್ತಿರುವ ಅಪಘಾತ ಸಂಭವಿಸುತ್ತಿವೆ ಎಂದು ರೈಲ್ವೆ ಇಲಾಖೆಯೇ ಒಪ್ಪಿಕೊಂಡಿದೆ. ಇಷ್ಟಾದರೂ ನೇಮಕಾತಿ ಯಾಕೆ ನಡೆಯುತ್ತಿಲ್ಲ? ರೈಲ್ವೆ ಸುರಕ್ಷತಾ ಆಯೋಗವನ್ನು ಏಕೆ ಬಲಪಡಿಸಿಲ್ಲ?

ರಾಷ್ಟ್ರೀಯ ರೈಲು ಸುರಕ್ಷಾ ಕೋಶದ ನಿಧಿಯನ್ನು ಶೇ.75ರಷ್ಟು ಕಡಿಗೊಳಿಸಿರೋದು ಯಾಕೆ? ಈ ಹಣವನ್ನು ತಪ್ಪಾಗಿ ಹಂಚಿಕೆ ಮಾಡಲಾಗಿದೆ ಎಂದು  ಖರ್ಗೆ ಆರೋಪಿಸಿದ್ದಾರೆ. ಈ ಹಣವನ್ನು ರೈಲ್ವೆ ಅಧಿಕಾರಿಗಳು ಅನಗತ್ಯ ವೆಚ್ಚಗಳು ಮತ್ತು ಸೌಕರ್ಯಗಳಿಗೆ ಏಕೆ ಬಳಸುತ್ತಿದ್ದಾರೆ?

ಪುನರ್ಜನ್ಮ ನೀಡಿದ್ದ ವಯನಾಡು ಕ್ಷೇತ್ರ ತ್ಯಜಿಸಿದ ಸಂಸದ ರಾಹುಲ್ ಗಾಂಧಿ!

2.7 ಕೋಟಿ ಪ್ರಯಾಣಿಕರಿಂದ ಟಿಕೆಟ್ ಕ್ಯಾನ್ಸಲ್

ಪ್ರಯಾಣದ ವೆಚ್ಚ ಹೆಚ್ಚಾಗುತ್ತಿದೆ ಎಂದು  ಸ್ಲೀಪರ್ ಕೋಚ್‌ಗಳನ್ನು ಕಡಿಮೆ ಮಾಡಿರುವ ಕಾರಣ ಪ್ರಯಾಣಿಕರ ಸಂಖ್ಯೆ ಇಳಿಮುವಾಗಿರೋದಕ್ಕೆ ಮಲ್ಲಿಕಾರ್ಜುನ ಖರ್ಗೆ ವಿಷಾದ ವ್ಯಕ್ತಪಡಿಸಿದರು. ಹೆಚ್ಚು ಜನಸಂದಣಿ ಇರೋ ರೈಲುಗಳಲ್ಲಿ ಪೊಲೀಸರ ಸಂಖ್ಯೆಯನ್ನು ಹೆಚ್ಚಿಸಬೇಕಿದೆ. ಕಳೆದ ವರ್ಷ ಸೀಟ್‌ಗಳ ಕೊರತೆಯಿಂದ 2.7 ಕೋಟಿ ಪ್ರಯಾಣಿಕರು ತಮ್ಮ ಟಿಕೆಟ್ ಕ್ಯಾನ್ಸಲ್ ಮಾಡಿಕೊಂಡಿದ್ದಾರೆ. ಇದೆಲ್ಲವೂ ಮೋದಿ ಸರ್ಕಾರ ಕೋಚ್ ಸಂಖ್ಯೆ ಕಡಿತಗೊಳಿಸುತ್ತಿರುವ ಪರಿಣಾಮವಾಗಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ರೈಲು ಅಪಘಾತಗಳು ಸಂಭವಿಸಿದಾಗ ರೈಲ್ವೆ ಸಚಿವರು ಮಾಧ್ಯಮಗಳ ಕ್ಯಾಮೆರಾ ಬಂದು ಏನು ಆಗಿಲ್ಲ ಎಂದು ಸಮರ್ಥಿಕೊಳ್ಳುತ್ತಾರೆ. ಇಂತಹ ದರುಂತಗಳು ಸಂಭವಿಸಿದಾಗ ಮೋದಿಜೀಯವರೇ, ನಿಮ್ಮನ್ನಾ ಅಥವಾ ರೈಲು ಸಚಿವರನನ್ನ ಹೊಣೆಗಾರರನ್ನಾಗಿ ಮಾಡಬೇಕು ಎಂದು ಖರ್ಗೆ ಕೇಳಿದ್ದಾರೆ.

ರಾಜಕೀಯ ಅಖಾಡಕ್ಕೆ ಪ್ರಿಯಾಂಕಾ, ಚುನಾವಣೇಲಿ ಸ್ಪರ್ಧಿಸುತ್ತಿರೋ ಗಾಂಧಿ ಕುಟುಂಬದ ಹತ್ತನೇ ಸದಸ್ಯೆ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
Viral Video: ಮಾಜಿ ಸಿಜೆಐ ಬಿಆರ್‌ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್‌ ಕಿಶೋರ್‌ಗೆ ಕೋರ್ಟ್‌ನಲ್ಲೇ ಚಪ್ಪಲಿಯಿಂದ ಹಲ್ಲೆ!