ಇಂಟರ್‌ನೆಟ್ ಬಂದಾಗಿದೆ: ಮೋದಿಗೆ ಕಾಂಗ್ರೆಸ್ ತಿರುಗೇಟು!

Suvarna News   | Asianet News
Published : Dec 12, 2019, 02:28 PM IST
ಇಂಟರ್‌ನೆಟ್ ಬಂದಾಗಿದೆ: ಮೋದಿಗೆ ಕಾಂಗ್ರೆಸ್ ತಿರುಗೇಟು!

ಸಾರಾಂಶ

CAB ವಿರೋಧಿಸಿ ಈಶಾನ್ಯ ರಾಜ್ಯಗಳಲ್ಲಿ ಭಾರೀ ಪ್ರತಿಭಟನೆ| ಹಿಂಸಾತ್ಮಕ ಪ್ರತಿಭಟನೆಗೆ ಅಸ್ಸಾಂ ರಾಜ್ಯ ತತ್ತರ|ಪ್ರತಿಭಟನೆ ಕೈಬಿಟ್ಟು ಶಾಂತಿ ಕಾಪಾಡುವಂತೆ ಪ್ರಧಾನಿ ಮೋದಿ ಮನವಿ| ಮೋದಿ ಟ್ವಿಟ್’ಗೆ ಪ್ರತ್ಯುತ್ತರ ನೀಡಿದ ಕಾಂಗ್ರೆಸ್| ಅಸ್ಸಾಂನಲ್ಲಿ ಇಂಟರ್’ನೆಟ್ ಸ್ಥಗಿತಗೊಂಡಿದೆ ಎಂದು ನೆನಪಿಸಿದ ಕಾಂಗ್ರೆಸ್| ಪ್ರತಿಭನಾಕಾರರು ಮೋದಿ ಟ್ವಿಟ್ ಓದಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ ಕಾಂಗ್ರೆಸ್|

ನವದೆಹಲಿ(ಡಿ.12): ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಅಸ್ಸಾಂನಲ್ಲಿ ಭಾರೀ ಹಿಂಸಾತ್ಮಕ ಪ್ರತಿಭಟನೆ ನಡೆಯುತ್ತಿದೆ. 

ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈಶಾನ್ಯ ರಾಜ್ಯಗಳ ಜನರೊಂದಿಗಿದ್ದು, ಪ್ರತಿಭಟನೆಯನ್ನು ಕೈ ಬಿಡುವಂತೆ ಪ್ರಧಾನಿ ಮೋದಿ ಮನವಿ ಮಾಡಿ ಟ್ವಿಟ್ ಮಾಡಿದ್ದಾರೆ.

CAB: ಕೇಂದ್ರ ಸಚಿವರ ಮನೆ ಮೇಲೆ ದಾಳಿ ಮಾಡಿದ ಪ್ರತಿಭಟನಾಕಾರರು!

ಆದರೆ ಪ್ರಧಾನಿ ಮೋದಿ ಟ್ವಿಟ್’ಗೆ ತಿರುಗೇಟು ನೀಡಿರುವ ಕಾಂಗ್ರೆಸ್, ಇಂಟರ್’ನೆಟ್ ಸ್ಥಗಿತಗೊಂಡಿರುವ ಅಸ್ಸಾಂನಲ್ಲಿ ಮೋದಿ ಟ್ವಿಟ್ ಓದಲು ಸಾಧ್ಯವಿಲ್ಲ ಎಂದು ಕಿಚಾಯಿಸಿದೆ.

ಅಸ್ಸಾಂನಲ್ಲಿ ಸರ್ಕಾರ ಇಂಟರ್’ನೆಟ್ ಸ್ಥಗಿತಗೊಳಿಸಿದ್ದು, ಪ್ರತಿಭಟನಾಕಾರರು ಮೋದಿ ಮಾಡಿದ ಮನವಿಯ ಟ್ವಿಟ್ ಓದಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಕಾಲೆಳೆದಿದೆ.

ನೀವ್ಯಾರೂ ಹೆದರಬೇಕಿಲ್ಲ: ಈಶಾನ್ಯ ಜನತೆಗೆ ಮೋದಿ ಭರವಸೆ!

ಅಸ್ಸಾಂನ ನಮ್ಮ ಸಹೋದರ ಸಹೋದರಿಯರು ನಿಮ್ಮ ಟ್ವಿಟ್ ಓದಲು ಸಾಧ್ಯವಿಲ್ಲ. ಅಲ್ಲಿ ಇಂಟರ್’ನೆಟ್ ಕಾರ್ಯನಿರ್ವಹಿಸುತ್ತಿಲ್ಲ ಎಂಬುದನ್ನು ನಮ್ಮ ಪ್ರಧಾನಿ ಮರೆತಂತಿದೆ..’ಎಂದು ಕಾಂಗ್ರೆಸ್ ಟ್ವಟ್ ಮಾಡಿದೆ.

ಸರಣಿ ಟ್ವೀಟ್’ಗಳ ಮೂಲಕ ಈಶಾನ್ಯ ರಾಜ್ಯಗಳ ಜನತೆಯನ್ನು ಉದ್ದೇಶಿಸಿ ಮಾತನಾಡಿರುವ ಪ್ರಧಾನಿ ಮೋದಿ, ಪ್ರತಿಭಟನೆಯನ್ನು ಕೈಬಿಬಿಟ್ಟು ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.

ಪೌರತ್ವ ತಿದ್ದುಪಡಿ ಕಾಯ್ದೆ: ಈಶಾನ್ಯ ಧಗಧಗ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಸಿದ್ದೇಶ್ವರ್‌ ಎಕ್ಸ್‌ಪ್ರೆಸ್‌ನಲ್ಲಿ ನಿದ್ದೆಗೆ ಜಾರಿದ ಚಿನ್ನದ ವ್ಯಾಪಾರಿಗೆ ಆಘಾತ: 5.53 ಕೋಟಿ ಮೊತ್ತದ ಚಿನ್ನ ಮಾಯ
ಭೂರೂಪ ಬದಲಾಯಿಸಿದ ಪ್ರವಾಹ.. ವಿಶ್ವದ ಅತಿದೊಡ್ಡ ನದಿ ಮಜುಲಿ ದ್ವೀಪ ಬಗ್ಗೆ ನಿಮಗೆ ಗೊತ್ತೇ?