
ನವದೆಹಲಿ(ಡಿ.22): ಭಾರದತಲ್ಲಿ ಬಾಂಗ್ಲಾದೇಶ ಅಕ್ರಮ ವಲಸಿಗರ ಬಂಧನ ಶಿಬಿರಗಳಿಲ್ಲ ಎಂದ ಪ್ರಧಾನಿ ಮೋದಿಗೆ, ಗೂಗಲ್ ಸರ್ಚ್ ಮಾಡುವಂತೆ ಕಾಂಗ್ರೆಸ್ ತಿರುಗೇಟು ನೀಡಿದೆ.
ಇಂದು ನವದೆಹಲಿಯಲ್ಲಿ ನಡೆದ ಬಿಜೆಪಿ ಬೃಹತ್ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ, ಭಾರತದಲ್ಲಿ ಬಂಧನ ಶಿಬಿರಗಳಿಲ್ಲ ಎಂದು ಸ್ಪಷ್ಟಪಡಿಸಿದರು.
ಮೋದಿ ಪ್ರತಿಕೃತಿ ಸುಡಿ, ಸಾರ್ವಜನಿಕ ಆಸ್ತಿಯನ್ನಲ್ಲ: ಪ್ರಧಾನಿ!
ಅಲ್ಲದೇ ಭಾರತದಲ್ಲಿ ಬಂಧನ ಶಿಬಿರಗಳಿವೆ ಎಂದು ಕಾಂಗ್ರೆಸ್ ಸುಳ್ಳು ಹೇಳುತ್ತಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಮಾನ ಹರಾಜು ಹಾಕುತ್ತಿದೆ ಎಂದು ಆರೋಪಿಸಿದ್ದರು.
ಇದಕ್ಕೆ ಸೂಕ್ತ ತಿರುಗೇಟು ನೀಡಿರುವ ಕಾಂಗ್ರೆಸ್, ಅಸ್ಸಾಂನಲ್ಲಿ ಎಲ್ಲೆಲ್ಲಿ ಬಂಧನ ಶಿಬಿರಗಳಿವೆ ಎಂಬುದನ್ನು ಗೂಗಲ್ ಮಾಡಿದರೆ ಪ್ರಧಾನಿಗೆ ತಿಳಿಯಲಿದೆ ಎಂದು ವ್ಯಂಗ್ಯವಾಡಿದೆ.
ಅಲ್ಲದೇ ಅಸ್ಸಾಂನ ಬಂಧನ ಶಿಬಿರಗಳಲ್ಲಿ ಇದುವರೆಗೆ 28 ಅಕ್ರಮ ವಲಸಿಗರು ಮೃತಪಟ್ಟಿದ್ದಾರೆ ಎಂಬ ಕೇಂದ್ರ ಸಚಿವ ನಿತ್ಯಾನಂದ್ ರಾಯ್ ಅವರ ಹೇಳಿಕೆಯನ್ನೂ ಕಾಂಗ್ರೆಸ್ ಉಲ್ಲೇಖಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ