
ನವದೆಹಲಿ(ಜ.16): ವಿವಾದಾತ್ಮಕ ಕೃಷಿ ಕಾಯ್ದೆ ಹಿಂಪಡೆಯುವವರೆಗೂ ಪ್ರತಿಭಟನೆಯಿಂದ ಹಿಂದೆ ಸರಿಯಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುಡುಗಿದ್ದಾರೆ.
ಕಾಯ್ದೆ ವಿರೋಧಿಸಿ ಶುಕ್ರವಾರ ದೆಹಲಿಯಲ್ಲಿ ನಡೆದ ಪ್ರತಿಭಟನಾ ರಾರಯಲಿಯಲ್ಲಿ ಮಾತನಾಡಿದ ರಾಹುಲ್, ಈ ಹಿಂದೆ ಭೂ ಸ್ವಾಧೀನತೆ ಕಾಯ್ದೆ ಮೂಲಕ ರೈತರ ಜಮೀನನ್ನು ಕಸಿದುಕೊಳ್ಳುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಯತ್ನವನ್ನು ಕಾಂಗ್ರೆಸ್ ವಿಫಲಗೊಳಿಸಿತ್ತು. ಇದೀಗ ಬಿಜೆಪಿ ಮತ್ತು ಅವರ ಇಬ್ಬರಿಂದ ಮೂವರು ಸ್ನೇಹಿತರು ಈ ಕಾಯ್ದೆಗಳ ಮೂಲಕ ರೈತರ ಮೇಲೆ ದಬ್ಬಾಳಿಕೆಗೆ ಯತ್ನಿಸುತ್ತಿದ್ದಾರೆ ಎಂದು ದೂರಿದ್ದಾರೆ.
ಅಲ್ಲದೇ ಪ್ರತಿಭಟನಾ ರಾರಯಲಿಯಲ್ಲಿ 100 ರೈತರು ಸತ್ತರೂ ಮೋದಿ ಮನಸು ಕರಗಲ್ಲ. ಅವರಿಗೆ ರೈತರ ಬಗ್ಗೆ ಸ್ವಲ್ಪವೂ ಗೌರವವೂ ಇಲ್ಲ. ಜೊತೆಗೆ ಅವರ ಸಾಮರ್ಥ್ಯದ ಬಗ್ಗೆ ತಿಳುವಳಿಕೆಯೂ ಇಲ್ಲ. ಅದು ಇದ್ದಿದ್ದರೆ ಇಷ್ಟೊತ್ತಿಗಾಗಲೇ ವಿವಾದಾತ್ಮಕ ಕಾಯ್ದೆಗಳನ್ನು ಹಿಂಪಡೆಯಬೇಕಿತ್ತು ಎಂದು ಕಿಡಿಕಾರಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ