ಕೋವಿಡ್‌ನಿಂದ ಆತ್ಮಹತ್ಯೆ ಮಾಡಿಕೊಂಡವರಿಗೂ ಪರಿಹಾರ: ಸುಪ್ರೀಂ ಸಲಹೆ!

Published : Sep 14, 2021, 09:13 AM IST
ಕೋವಿಡ್‌ನಿಂದ ಆತ್ಮಹತ್ಯೆ ಮಾಡಿಕೊಂಡವರಿಗೂ ಪರಿಹಾರ: ಸುಪ್ರೀಂ ಸಲಹೆ!

ಸಾರಾಂಶ

* ಕೋವಿಡ್‌-19ನಿಂದ ಸಾವೀಗೀಡಾದ ಸಂತ್ರಸ್ತರ ಕುಟುಂಬಗಳಿಗೆ ಪರಿಹಾರ  * ಕೋವಿಡ್‌ ಪರೀಕ್ಷೆಯ ನಂತರ ಆತ್ಮಹತ್ಯೆ ಮಾಡಿಕೊಂಡವರ ಸಾವನ್ನು ಸೇರಿಸಲಾಗಿಲ್ಲ * ಈ ಕುರಿತು ತನ್ನ ಮಾರ್ಗಸೂಚಿಯನ್ನು ಮರುಪರಿಶೀಲಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಸಲಹೆ

ನವದೆಹಲಿ(ಸೆ.14): ಕೋವಿಡ್‌-19ನಿಂದ ಸಾವೀಗೀಡಾದ ಸಂತ್ರಸ್ತರ ಕುಟುಂಬಗಳಿಗೆ ಪರಿಹಾರ ನೀಡುವ ಉದ್ದೇಶದಿಂದ ನೀಡಲಾಗುವ ಮರಣ ಪ್ರಮಾಣ ಪತ್ರಗಳಲ್ಲಿ ಕೋವಿಡ್‌ ಪರೀಕ್ಷೆಯ ನಂತರ ಆತ್ಮಹತ್ಯೆ ಮಾಡಿಕೊಂಡವರ ಸಾವನ್ನು ಸೇರಿಸಲಾಗಿಲ್ಲ. ಈ ಕುರಿತು ತನ್ನ ಮಾರ್ಗಸೂಚಿಯನ್ನು ಮರುಪರಿಶೀಲಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೋಮವಾರ ಸಲಹೆ ನೀಡಿದೆ. ನ್ಯಾ

ಎಂ.ಆರ್‌. ಶಾ ಮತ್ತು ನ್ಯಾ| ಎ.ಎಸ್‌.ಬೋಪಣ್ಣ ಅವರನ್ನು ಒಳಗೊಂಡ ಪೀಠವು ‘ಕೋವಿಡ್‌ ಸೋಂಕಿತ ಆತ್ಮಹತ್ಯೆ ಮಾಡಿಕೊಂಡರೆ ಮರಣ ಪ್ರಮಾಣ ಪತ್ರ ನೀಡುವುದಿಲ್ಲ ಎಂದು ಹೇಳಿದ್ದೀರಿ. ಆದರೆ ಇದನ್ನು ಮರುಪರಿಶೀಲಿಸುವ ಅಗತ್ಯವಿದೆ. ಕೋವಿಡ್‌ನಿಂದ ಆತ್ಮಹತ್ಯೆ ಮಾಡಿಕೊಂಡವರಿಗೆ ಪರಿಹಾರ ನೀಡಬೇಕು. ಆತ್ಮಹತ್ಯೆ ಎನ್ನುವ ಕಾರಣಕ್ಕೆ ಪರಿಹಾರ ನೀಡದಿರುವುದು ಅಸಮಂಜಸ’ ಎಂದು ಕೋರ್ಟ್‌ ಹೇಳಿದೆ.

ಕೋವಿಡ್‌ನಿಂದ ಆತ್ಮಹತ್ಯೆ ಮಾಡಿಕೊಂಡವರಿಗೆ ಪರಿಹಾರ ನೀಡಬೇಕು ಆದರೆ ಕೇಂದ್ರ ಸರ್ಕಾರ ತಾರತಮು ಧೋರಣೆ ಅನುಸರಿಸುತ್ತಿದೆ ಎಂದು ವಕೀಲರಾದ ದೀಪಕ್‌ ಕನ್ಸಲ್‌ ಮತ್ತು ಗೌರವ್‌ ಕುಮಾರ್‌ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಣವೀರ್ ನಟನೆಯ ಧುರಂಧರ್ ಸಿನಿಮಾದ ಕತೆ ಭಾರತೀಯ ಸೇನೆಯ ಹೀರೋ ಮೇಜರ್ ಮೋಹಿತ್ ಶರ್ಮಾ ಅವರದ್ದಾ?
Dhurandhar Review: ಹಿಂದೂಗಳಿಗೆ ಪ್ರಥಮ ಶತ್ರು ಹಿಂದೂ-ಮೊಬೈಲ್‌ ಕೂಡ ನೋಡದಂತೆ ಮಾಡೋ Ranveer Singh ಸಿನಿಮಾ!