
ಧೆಕಿಯಾಜುಲಿ(ಫೆ.08): ಭಾರತದ ಚಹಾ ಬಗ್ಗೆ ಅಪಪ್ರಚಾರ ಮಾಡಲು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಂಚು ರೂಪಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಕಿಡಿಕಾರಿದ್ದಾರೆ.
ರಾಜ್ಯ ಹೆದ್ದಾರಿಗಳನ್ನು ಮೇಲ್ದರ್ಜೆಗೆ ಏರಿಸುವ ಅಸ್ಸಾಂ ಮಾಲಾ ಯೋಜನೆ ಉದ್ಘಾಟಿಸಿ ಮಾತನಾಡಿದ ಮೋದಿ, ‘ಅಸ್ಸಾಂ ಅಭಿವೃದ್ಧಿಗಾಗಿ ಟೀ ತೋಟಗಳಲ್ಲಿ ಕಾರ್ಯನಿರ್ವಹಿಸುವ ಕೆಲಸಗಾರರ ಸ್ಥಿತಿಗಳ ಬಗ್ಗೆ ನಾನು ಸದಾ ಸಂಪರ್ಕದಲ್ಲಿದ್ದೇನೆ. ಆದರೆ, ಅಸ್ಸಾಂ ಟೀ ತೋಟಗಳ ಬಗ್ಗೆ ಅಪಪ್ರಚಾರ ಮಾಡಲು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಂಚು ಹೆಣೆಯಲಾಗಿದೆ. ಚಹಾ ತೋಟದಲ್ಲಿ ಕೆಲಸ ಮಾಡುವ ಯಾವುದೇ ಕಾರ್ಮಿಕನೂ ಈ ಅಪಪ್ರಚಾರವನ್ನು ಸಹಿಸಲಾರ. ಸಂಚಿನ ವಿರುದ್ಧದ ಹೋರಾಟದಲ್ಲಿ ಅವರು ಗೆಲುವು ಸಾಧಿಸಲಿದ್ದಾರೆ ಎಂಬ ವಿಶ್ವಾಸವಿದೆ’ ಎಂದರು.
‘ಭಾರತದ ಚಹಾ ಉದ್ಯಮದಲ್ಲಿ ಭಾರೀ ಪ್ರಮಾಣದ ಕೀಟನಾಶಕಗಳನ್ನು ಬಳಕೆ ಮಾಡಲಾಗುತ್ತದೆ’ ಎಂದು ಎನ್ಜಿಒ ಗ್ರೀನ್ಪೀಸ್ನ ವರದಿಯಲ್ಲಿ ಆರೋಪಿಸಿದ ಬೆನ್ನಲ್ಲೇ, ಮೋದಿ ಅವರಿಂದ ಈ ಹೇಳಿಕೆ ಹೊರಬಿದ್ದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ