
ನವದೆಹಲಿ(ಜು.09): ಕೊರೋನಾ ವೈರಸ್ ಕಾರಣ ಸಿಬಿಎಸ್ಇ ಪಠ್ಯಕ್ರಮದಿಂದ ಶೇ.30ರಷ್ಟುಪಠ್ಯ ಕಡಿತಗೊಳಿಸುವ ನಿರ್ಧಾರ ಹೊರಬಿದ್ದ ಬೆನ್ನಲ್ಲೇ ಹಲವು ಮಹತ್ವದ ಪಾಠಗಳಿಗೆ ಕತ್ತರಿ ಪ್ರಯೋಗ ಮಾಡಲಾಗಿದೆ.
ರಾಷ್ಟ್ರೀಯತೆ, ಜಾತ್ಯತೀತತೆ, ಪೌರತ್ವ, ನೋಟು ರದ್ದತಿ ಹಾಗೂ ಸಾಂವಿಧಾನಿಕ ಹಕ್ಕುಗಳು ಎಂಬ ಅಧ್ಯಾಯಗಳನ್ನು ಸಿಬಿಎಸ್ಇ ಕೈಬಿಟ್ಟಿದೆ. ಇದಕ್ಕೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
1 ತಿಂಗಳೊಳಗೆ ಗುತ್ತಿಗೆ ವೈದ್ಯರು ಕಾಯಂ, ಮುಷ್ಕರ ನಿಲ್ಲಿಸಿ ವೈದ್ಯರು ಇಂದು ಕೆಲಸಕ್ಕೆ ಹಾಜರ್
ಶೇ.30ರಷ್ಟುಪಠ್ಯ ಕಡಿತಗೊಳಿಸುವ ತೀರ್ಮಾನದ ಅಧಿಸೂಚನೆಯನ್ನು ಬುಧವಾರ ಹೊರಡಿಸಲಾಗಿದೆ. 10ನೇ ತರಗತಿ ಪಠ್ಯದಿಂದ ಪ್ರಜಾಸತ್ತೆ, ವೈವಿಧ್ಯತೆ, ಲಿಂಗ, ಧರ್ಮ, ಪ್ರಜಾಸತ್ತೆಯ ಸವಾಲುಗಳು ಎಂಬ ಪಾಠಗಳನ್ನು ತೆಗೆದುಹಾಕಲಾಗಿದೆ. 11ನೇ ತರಗತಿ ಪಠ್ಯದಲ್ಲಿ ಒಕ್ಕೂಟ ವ್ಯವಸ್ಥೆ (ಫೆಡರಲಿಸಂ), ಪೌರತ್ವ, ರಾಷ್ಟ್ರೀಯತೆ, ಜಾತ್ಯತೀತತೆ ಹಾಗೂ ಭಾರತದಲ್ಲಿನ ಸ್ಥಳೀಯ ಆಂದೋಲನ ಎಂಬ ಅಧ್ಯಾಯಗಳನ್ನು ಕೈಬಿಡಲಾಗಿದೆ. 12ನೇ ತರಗತಿ ಪಠ್ಯದಲ್ಲಿ ಪಾಕಿಸ್ತಾನ, ಮ್ಯಾನ್ಮಾರ್, ಬಾಂಗ್ಲಾದೇಶ, ಶ್ರೀಲಂಕಾ ಹಾಗೂ ನೇಪಾಳ ಜತೆಗಿನ ಭಾರತದ ಸಂಬಂಧ, ಭಾರತದ ಆರ್ಥಿಕ ಅಭಿವೃದ್ಧಿಯ ಬದಲಾಗುವ ಗತಿ, ಭಾರತದಲ್ಲಿನ ಸಾಮಾಜಿಕ ಆಂದೋಲನಗಳು ಹಾಗೂ ನೋಟು ರದ್ದತಿ ಎಂಬ ಪಾಠಗಳನ್ನು ಅಳಿಸಲಾಗಿದೆ.
ಧೋವಲ್ ಮಿಂಚಿನ ಮಾತುಕತೆ: ಗಡಿಯಿಂದ 2 ಕಿ.ಮೀ. ಹಿಂದೆ ಸರಿದ ಚೀನಾ ಸೇನೆ
ವಿದ್ಯಾರ್ಥಿಗಳ ಮೇಲೆ ಭಾರವಾಗಬಾರದು ಎಂಬ ಕಾರಣಕ್ಕೆ ಪಠ್ಯಕ್ರಮ ಕಡಿತಗೊಳಿಸಲಾಗಿದೆ. ಆದರೆ ಪಠ್ಯಗಳಲ್ಲಿನ ಮೂಲ ಮೌಲ್ಯಗಳನ್ನು ಉಳಿಸಿಕೊಳ್ಳಲಾಗಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಸ್ಪಷ್ಟಪಡಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ