
ಅಯೋಧ್ಯೆ(ಅ.05): ರಾಮ ಮಂದಿರ ನಿರ್ಮಾಣಕ್ಕಾಗಿ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಇದುವರೆಗೆ 100 ಕೋಟಿ ರು. ದೇಣಿಗೆಯನ್ನು ಸ್ವೀಕರಿಸಿದ್ದು, ನವರಾತ್ರಿಯ ಮೊದಲ ದಿನವಾದ ಅ.17ರಂದು ಮಂದಿರ ನಿರ್ಮಾಣ ಕಾರ್ಯ ಆರಂಭವಾಗಲಿದೆ. ಅಂದು ದೇವಾಲಯ ಆಧಾರ ಸ್ತಂಭಗಳನ್ನು ನಿರ್ಮಿಸಲಾಗುವುದು ಎಂದು ವರದಿಗಳು ತಿಳಿಸಿವೆ.
ಆ.5ರಂದು ಪ್ರಧಾನಿ ನರೇಂದ್ರ ಮೋದಿ ರಾಮಮಂದಿರಕ್ಕೆ ಭೂಮಿ ಪೂಜೆಯನ್ನು ನೆರವೇರಿಸಿದ್ದರು. ಎಲ್ ಆ್ಯಂಡ್ ಟಿ ಕಂಪನಿ ದೇವಾಲಯ ನಿರ್ಮಾಣ ಕಾರ್ಯವನ್ನು ಕೈಗೆತ್ತಿಕೊಂಡಿದೆ. ಮಂದಿರ ನಿರ್ಮಾಣಕ್ಕೆ ದೇಶದೆಲ್ಲೆಡೆಯಿಂದ ದೇಣಿಗೆ ಹರಿದು ಬರುತ್ತಿದೆ.
ಇದೇ ವೇಳೆ, ಕೇಂದ್ರ ಸರ್ಕಾರ ರಾಮ ಜನ್ಮಭೂಮಿ ಟ್ರಸ್ಟ್ ಅನ್ನು ಆದಾಯ ತೆರಿಗೆ ಕಾಯ್ದೆ ಸೆಕ್ಷನ್ 80 ಜಿ ಅಡಿಯಲ್ಲಿ ತಂದಿದೆ. ಹೀಗಾಗಿ ದೇವಾಲಯಕ್ಕೆ ನೀಡುವ ದೇಣಿಗೆಗಳಿಗೆ 2020-21ನೇ ಸಾಲಿನಲ್ಲಿ ತೆರಿಗೆ ವಿನಾಯಿತಿಗಳು ಸಿಗಲಿವೆ. ಅಯೋಧ್ಯೆಯಲ್ಲಿ ನಿರ್ಮಾಣ ಆಗಲಿರುವ ರಾಮ ಮಂದಿರದ ಐತಿಹಾಸಿಕ ಮಹತ್ವ ಹಾಗೂ ಅದೊಂದು ಸಾರ್ವಜನಿಕ ಪೂಜಾ ಸ್ಥಳವಾದ ಕಾರಣ ಕೇಂದ್ರೀಯ ನೇರ ತೆರಿಗೆ ಮಂಡಳಿ ಟ್ರಸ್ಟ್ ಸ್ವೀಕರಿಸುವ ಹಣಕ್ಕೆ ತೆರಿಗೆ ವಿನಾಯಿತಿ ನೀಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ