
ನವದೆಹಲಿ(ಜ.18): ವಿವಿಧ ರಾಜ್ಯಗಳಲ್ಲಿ ಹಬ್ಬಿರುವ ಹಕ್ಕಿಜ್ವರದ ಕಾರಣದಿಂದಾಗಿ ಕುಕ್ಕುಟೋದ್ಯಮಕ್ಕೆ ಭಾರೀ ಆರ್ಥಿಕ ಹೊಡೆತ ಬಿದ್ದಿರುವ ಬೆನ್ನಲ್ಲೇ, ಚಿಕನ್ ಮತ್ತು ಮೊಟ್ಟೆಗಳು ಸುರಕ್ಷಿತವಾಗಿವೆ. ಈ ಹಿನ್ನೆಲೆಯಲ್ಲಿ ಮೊಟ್ಟೆಮತ್ತು ಕೋಳಿಗಳ ಮಾರಾಟದ ಮೇಲೆ ಹೇರಲಾದ ನಿಷೇಧದ ಹಿಂಪಡೆತದ ಬಗ್ಗೆ ಮರು ಪರಿಶೀಲನೆ ನಡೆಸುವಂತೆ ರಾಜ್ಯಗಳಿಗೆ ಕೇಂದ್ರ ಸರ್ಕಾರ ಕೋರಿಕೊಂಡಿದೆ.
ಜೊತೆಗೆ ಹಕ್ಕಿಜ್ವರ ಹರಡದ ರಾಜ್ಯಗಳು ಮತ್ತು ಪ್ರದೇಶಗಳಿಂದ ಕೋಳಿ ಮತ್ತು ಮೊಟ್ಟೆಗಳ ಮಾರಾಟಕ್ಕೆ ಅನುಮತಿ ಕಲ್ಪಿಸುವಂತೆ ರಾಜ್ಯಗಳಿಗೆ ಒತ್ತಾಯಿಸಿದೆ. ಅರ್ಧಗಂಟೆ ಕಾಲ 70 ಡಿಗ್ರಿ ಸೆಲ್ಸಿಯಸ್ನಲ್ಲಿ ಬೇಯಿಸುವುದರಿಂದ ಚಿಕನ್ನಲ್ಲಿ ಇರಬಹುದಾದ ಹಕ್ಕಿಜ್ವರ ನಾಶವಾಗಲಿದೆ.
ಜೊತೆಗೆ ಸರಿಯಾಗಿ ಬೇಯಿಸಿದ ಮೊಟ್ಟೆಮತ್ತು ಚಿಕನ್ನಿಂದ ಮಾನವನ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರದು. ಜೊತೆಗೆ ಹಕ್ಕಿಜ್ವರದ ಕುರಿತಾಗಿ ಹಬ್ಬುವ ಗಾಳಿಸುದ್ದಿಗಳಿಂದ ಜನರನ್ನು ಜಾಗರೂಕರನ್ನಾಗಿಸಬೇಕು ಎಂದು ಕೇಂದ್ರ ಸರ್ಕಾರ ಪ್ರತಿಪಾದಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ