ಬೆಲೆ ಏರಿಕೆಯನ್ನು ನಿಯಂತ್ರಿಸಿ, ರೈತರಿಗೆ ನೆರವಾಗಿ: ಮೋದಿ ಸರ್ಕಾರಕ್ಕೆ ಹೊಸಬಾಳೆ ಸಲಹೆ

Published : Jul 25, 2022, 05:45 AM IST
ಬೆಲೆ ಏರಿಕೆಯನ್ನು ನಿಯಂತ್ರಿಸಿ, ರೈತರಿಗೆ ನೆರವಾಗಿ: ಮೋದಿ ಸರ್ಕಾರಕ್ಕೆ ಹೊಸಬಾಳೆ ಸಲಹೆ

ಸಾರಾಂಶ

ಆಹಾರ, ಬಟ್ಟೆ ಮತ್ತು ಮನೆ ಜನರ ಅತ್ಯಂತ ಮೂಲಭೂತ ಅಗತ್ಯಗಳು. ಇದು ಸದಾ ಜನರಿಗೆ ಕೈಗೆಟಕುವ ರೀತಿಯಲ್ಲಿ ಇರಬೇಕು: ಹೊಸಬಾಳೆ

ನವದೆಹಲಿ(ಜು.25):  ಅಗತ್ಯ ವಸ್ತುಗಳ ಬೆಲೆ ಏರಿಕೆ ಮತ್ತು ಹಣದುಬ್ಬರ ಹೆಚ್ಚಳ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಆರ್‌ಎಸ್‌ಎಸ್‌ನ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ, ಸರ್ಕಾರ ಈ ವಿಷಯಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಸಲಹೆ ನೀಡಿದ್ದಾರೆ. ಆದರೆ ಇಂಥ ಕ್ರಮಗಳು ಪರೋಕ್ಷವಾಗಿ ರೈತರನ್ನು ಘಾಸಿಗೊಳಿಸಬಾರದು ಎಂದು ಹೇಳಿದ್ದಾರೆ.

ಆರ್‌ಎಸ್‌ಎಸ್‌ನ ಸಹ ಸಂಘಟನೆಯಾದ ಭಾರತೀಯ ಕಿಸಾನ್‌ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ದತ್ತಾತ್ರೇಯ ಹೊಸಬಾಳೆ, ‘ಆಹಾರ, ಬಟ್ಟೆ ಮತ್ತು ಮನೆ ಜನರ ಅತ್ಯಂತ ಮೂಲಭೂತ ಅಗತ್ಯಗಳು. ಇದು ಸದಾ ಜನರಿಗೆ ಕೈಗೆಟಕುವ ರೀತಿಯಲ್ಲಿ ಇರಬೇಕು. ಆದರೆ ಇತ್ತೀಚಿನ ದಿನಗಳಲ್ಲಿ ಅಗತ್ಯ ವಸ್ತುಗಳ ಬೆಲೆ ಮತ್ತು ಹಣದುಬ್ಬರ ಏರಿಕೆಯಾಗುತ್ತಿದೆ. ಹೀಗಾಗಿ ಆಹಾರ ಬೆಲೆಗಳು ಹಾಗೂ ಹಣದುಬ್ಬರದ ನಡುವಿನ ಕೊಂಡಿಯ ಬಗ್ಗೆ ಸರ್ಕಾರ ಆಳವಾದ ಅಧ್ಯಯನ ಮಾಡಬೇಕು. ಕೈಗಾರಿಕೋತ್ಪನ್ನದ ಬೆಲೆಗಳು ಏರುತ್ತಿವೆ. ಈ ಬಗ್ಗೆ ಜನರು ಹೆಚ್ಚು ಯೋಚಿಸಲ್ಲ. ಆದರೆ ಜನರು ಆಹಾರ ಉತ್ಪನ್ನ ಹಾಗೂ ಬಟ್ಟೆಗಳು ಕಡಿಮೆ ಬೆಲೆಯಲ್ಲಿ ಸಿಗಬೇಕು ಎಂದು ಜನರು ಬಯಸುತ್ತಾರೆ. ಏಕೆಂದರೆ ಆಹಾರ ಮೂಲಭೂತ ವಸ್ತು. ಅದು ಕೈಗೆಟಕುವ ದರದಲ್ಲಿ ಸಿಗಬೇಕು’ ಎಂದರು.

ಜಿಎಸ್‌ಟಿ ಬೆಲೆ ಏರಿಕೆ ಬೆನ್ನಲ್ಲೇ ಮತ್ತೊಂದು ಶಾಕ್, ವಾಹನ ಮಾಲೀಕರ ಜೇಬಿಗೆ ಕತ್ತರಿ!

‘ಆಹಾರ ಬೆಲೆಗಳು ಕಡಿಮೆ ಆದರೆ ರೈತರು ನಷ್ಟಅನುಭವಿಸುವಂತೆ ಆಗಬಾರದು. ಸರ್ಕಾರದ ಬೆಲೆ ನಿಯಂತ್ರಣ ಕ್ರಮಗಳು ರೈತರನ್ನು ಘಾಸಿಗೊಳಿಸಬಾರದು’ ಎಂದೂ ಅವರು ಆಗ್ರಹಿಸಿದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

15 ವರ್ಷಗಳಿಂದ ನಾಪತ್ತೆ: ವಿಡಿಯೋ ವೈರಲ್ ಬಳಿಕ ಮರಳಿ ಕುಟುಂಬ ಸೇರಿದ ಮಾಜಿ ಯೋಧ
ಪೌರತ್ವ ಸಿಗುವ ಮುನ್ನವೇ ವೋಟರ್‌ ಲಿಸ್ಟ್‌ನಲ್ಲಿ ಹೆಸರು, ಸೋನಿಯಾ ಗಾಂಧಿಗೆ ನೋಟಿಸ್‌ ಕೊಟ್ಟ ದೆಹಲಿ ಕೋರ್ಟ್!