
ವಾರಾಣಸಿ (ಏ.13): ಪವಿತ್ರ ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಭದ್ರತೆಗೆ ನಿಯೋಜನೆ ಆಗಿರುವ ಪೊಲೀಸರು ಅರ್ಚಕರ ರೀತಿ ಕೇಸರಿ ಉಡುಪು ಧರಿಸಿ ಕರ್ತವ್ಯ ನಿರ್ವಹಿಸುತ್ತಿರುವುದು ಬೆಳಕಿಗೆ ಬಂದಿದೆ. ಸದ್ಯ ಪೊಲೀಸರ ನಡೆ ಭಾರೀ ವಿವಾದ ಸೃಷ್ಟಿಸಿದೆ.
ಪೊಲೀಸರು ಕೇಸರಿಧಾರಿ ಆಗಿರುವ ವಿಡಿಯೋಗಳು ಈಗ ವೈರಲ್ ಆಗಿವೆ. ಅದರಲ್ಲಿ ಪೊಲೀಸರು ಸಾಂಪ್ರದಾಯಿಕ ಉಡುಪುಗಳು ಧರಿಸಿದ್ದಾರೆ. ಪುರುಷ ಪೊಲೀಸ್ ಅಧಿಕಾರಿಗಳು ಧೋತಿ, ಕುರ್ತಾವನ್ನು ಧರಿಸಿದ್ದರೆ ಮಹಿಳಾ ಅಧಿಕಾರಿಗಳು ಸಲ್ವಾರ್ ಕುರ್ತಾ ಧರಿಸಿದ್ದಾರೆ. ಅಲ್ಲದೇ ಹಣೆಯಲ್ಲಿ ಅರ್ಚಕರಂತೆ ತಿಲಕವನ್ನಿಟ್ಟುಕೊಂಡಿದ್ದಾರೆ.
ಕಾಶಿ ವಿಶ್ವನಾಥ ಮಂದಿರದ ಫೇಸ್ಬುಕ್ ಹ್ಯಾಕ್, ಕಿಡಿಗೇಡಿಗಳಿಂದ ಅಶ್ಲೀಲ ಪೋಸ್ಟ್!
ಅಖಿಲೇಶ್ ಆಕ್ರೋಶ: ಪೊಲೀಸರ ಈ ನಡೆಯನ್ನು ಕಟುವಾಗಿ ಟೀಕಿಸಿರುವ ಸಮಾಜವಾದಿ ಪಾರ್ಟಿ ನೇತಾರ ಅಖಿಲೇಶ್ ಯಾದವ್ ,‘ಪೊಲೀಸರು ತಮ್ಮ ಸಮವಸ್ತ್ರವನ್ನು ಹೊರತುಪಡಿಸಿ , ಇನ್ಯಾವುದೋ ಉಡುಪುಗಳನ್ನು ಧರಿಸುವುದಕ್ಕೆ ಅನುಮತಿ ನೀಡುವುದು ಭದ್ರತೆಗೆ ಅಪಾಯ ತಂದೊಡ್ಡುತ್ತದೆ. ಪೊಲೀಸರು ಈ ರೀತಿಯ ಉಡುಪುಗಳನ್ನು ಧರಿಸುವುದು ಎಷ್ಟು ಸರಿ? ಇದು ಮುಂದೆ ವಂಚಕ ಕೃತ್ಯಗಳಿಗೆ ದಾರಿಯಾದರೆ ಹೊಣೆಯಾರು? ಇಂತಹ ಆದೇಶಗಳನ್ನು ನೀಡಿದವರನ್ನು ಕೂಡಲೇ ವಜಾಗೊಳಿಸಬೇಕು’ ಎಂದು ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ.
ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಾರಾಣಸಿ ಪೊಲೀಸ್ ಕಮಿಷನರ್ ಮೋಹಿತ್ ಅರ್ಗವಾಲ್ ,‘ ಪೊಲೀಸರು ಅರ್ಚಕರ ಉಡುಪನ್ನು ಧರಿಸಿದರೆ ಜನರು ಅದನ್ನು ಭದ್ರತೆಯ ದೃಷ್ಟಿಯಿಂದ ಸಕಾರಾತ್ಮಕವಾಗಿ ತೆಗೆದುಕೊಳ್ಳುತ್ತಾರೆ. ಈ ಕಾರಣಕ್ಕಾಗಿಯೇ ಈ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ’ ಎಂದು ಸಮರ್ಥಿಸಿಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ