ಉತ್ತರ ಪ್ರದೇಶ ತಲುಪಿತು ಆಕ್ಸಿಜನ್ ಟ್ಯಾಂಕರ್ ಹೊತ್ತ ವಿಶೇಷ ರೈಲು; ಅರ್ಧ ಸಮಸ್ಯೆ ನಿವಾರಣೆ!

Published : Apr 24, 2021, 06:32 PM IST
ಉತ್ತರ ಪ್ರದೇಶ ತಲುಪಿತು ಆಕ್ಸಿಜನ್ ಟ್ಯಾಂಕರ್ ಹೊತ್ತ ವಿಶೇಷ ರೈಲು;  ಅರ್ಧ ಸಮಸ್ಯೆ ನಿವಾರಣೆ!

ಸಾರಾಂಶ

ಆಕ್ಸಿಜನ್ ಕೊರತೆ ನೀಗಿಸಲು ವಿಶೇಷ ರೈಲು ಆಕ್ಸಿಜನ್ ತುಂಬಿದ ಟ್ಯಾಂಕರ್ ಹೊತ್ತು ಉತ್ತರ ಪ್ರದೇಶದ ತಲುಪಿದೆ. ಇದೀಗ ಉತ್ತರ ಪ್ರದೇಶದಲ್ಲಿ  ಎದುರಾದ ಆಕ್ಸಿಜನ್ ಸಮಸ್ಯೆಗೆ ತಾತ್ಕಾಲಿಕ ಪರಿಹಾರ ಸಿಕ್ಕಿದೆ.  ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ.

ಲಕ್ನೌ(ಏ.24): ಕೊರೋನಾ ಹೆಚ್ಚಳ ಕಾರಣ ಭಾರತದಲ್ಲಿ ಸೋಂಕಿತರ ಚಿಕಿತ್ಸೆಗೆ ಆಕ್ಸಿಜನ್ ಕೊರತೆ ಎದುರಾಗಿದೆ. ಹಲವು ಆಸ್ಪತ್ರೆಗಳಲ್ಲಿ ಆಕ್ಸಿಜನ್ ಸಿಗದೆ ರೋಗಿಗಳು ಸಾವನ್ನಪ್ಪಿದ್ದಾರೆ. ಇನ್ನು ಹಲವು ಸೋಂಕಿತರಿಗೆ ಆಕ್ಸಿಜನ್ ಕೊರತೆ ಕಾರಣ ಬೆಡ್ ಸಿಕ್ಕಿಲ್ಲ. ಭಾರತದಲ್ಲಿ ತಲೆದೋರಿರುವ ಆಕ್ಸಿಜನ್ ಸಮಸ್ಯೆ ಪರಿಹರಿಸಲು ರೈಲ್ವೇ ಇಲಾಖೆ, ರಕ್ಷಣಾ ಇಲಾಖೆ ಸಹಯೋಗದಲ್ಲಿ ಆಕ್ಸಿಜನ್ ಪೂರೈಕೆ ಮಾಡಲಾಗುತ್ತಿದೆ. ಇದೀಗ ಆಕ್ಸಿಜನ್ ಟ್ಯಾಂಕರ್ ಹೊತ್ತ ವಿಶೇಷ ರೈಲು  ಉತ್ತರ ಪ್ರದೇಶ ತಲುಪಿದ್ದು, ಆಕ್ಸಿಜನ್ ಕೊರತೆ ಬಹುತೇಕ ನಿವಾರಣೆಗೊಂಡಿದೆ.

ಸಿಂಗಾಪುರದಿದ ಆಕ್ಸಿಜನ್ ಟ್ಯಾಂಕ್ ಏರ್‌ಲಿಫ್ಟ್ ಮಾಡಿದ IAF ಏರ್‌ಕ್ರಾಫ್ಟ್!

3 ಆಕ್ಸಿಜನ್ ಟ್ಯಾಂಕರ್ ಹೊತ್ತ ವಿಶೇಷ ಆಕ್ಸಿಜನ್ ಎಕ್ಸ್‌ಪ್ರೆಸ್ ಇಂದು ಬೆಳಗ್ಗೆ ಉತ್ತರ ಪ್ರದೇಶ ತಲುಪಿದೆ. ಪ್ರತಿ ಟ್ಯಾಂಕರ್‌ನಲ್ಲಿ 15,000 ಲೀಟರ್ ಮೆಡಿಕಲ್ ಲಿಕ್ವಿಡ್ ಆಕ್ಸಿಜನ್ ತುಂಬಲಾಗಿದೆ. ಈ ರೀತಿಯ 3 ಆಕ್ಸಿಜನ್ ಟ್ಯಾಂಕರ್ ಉತ್ತರ ಪ್ರದೇಶದ ಆಕ್ಸಿಜನ್ ಸಮಸ್ಯೆಗೆ ತಾತ್ಕಾಲಿಕ ಪರಿಹಾರ ನೀಡಿದೆ.

 

ಭಾರತೀಯ ರೈಲ್ವೆ ಮಹತ್ವದ ಹೆಜ್ಜೆ; ಲಿಕ್ವಿಡ್ ಆಕ್ಸಿನ್ ಹಾಗೂ ಸಿಲಿಂಡರ್ ಸರಬರಾಜು!

ಈ ವಿಶೇಷ ರೈಲು ಆಕ್ಸಿಜನ್ ಟ್ಯಾಂಕರ್ ಹೊತ್ತು ಜಾರ್ಖಂಡ್‌ನಿಂದ ಆಗಮಿಸಿದೆ. 2 ಆಕ್ಸಿಜನ್ ಸಿಲಿಂಡರ್ ಲಕ್ನೌದ ಅರ್ಧ ಆಕ್ಸಿಜನ್ ಸಮಸ್ಯೆ ನೀಗಿಸಲಿದೆ. ಶೀಘ್ರದಲ್ಲೇ ಮತ್ತೆ 3 ಆಕ್ಸಿಜನ್ ಟ್ಯಾಂಕರ್ ಉತ್ತರ ಪ್ರದೇಶಕ್ಕೆ ಆಗಮಿಸಲಿದೆ. ಈ ಮೂಲಕ ಆಕ್ಸಿಜನ್ ಸಮಸ್ಯೆಗೆ ಪೂರ್ಣವಾಗಿ ನಿವಾರಣೆಯಾಗಲಿದೆ ಎಂದು ಉತ್ತರ ಪ್ರದೇಶದ ಆರೋಗ್ಯ ಸಚಿವ ಜೈ ಪ್ರತಾಪ್ ಸಿಂಗ್ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
ಸಿಎಂ ಕುರ್ಚಿಗೆ 500 ಕೋಟಿ, ಸ್ಫೋಟಕ ಹೇಳಿಕೆ ಬೆನ್ನಲ್ಲೇ ಸಿಧು ಪತ್ನಿ ಕಾಂಗ್ರೆಸ್‌ನಿಂದ ಅಮಾನತು