4 ದಿನದಲ್ಲಿ 13 ಲಕ್ಷ ಕೇಸ್‌, 10,000 ಸಾವು

Kannadaprabha News   | Asianet News
Published : Apr 26, 2021, 10:59 AM ISTUpdated : Apr 26, 2021, 03:59 PM IST
4 ದಿನದಲ್ಲಿ 13 ಲಕ್ಷ ಕೇಸ್‌, 10,000 ಸಾವು

ಸಾರಾಂಶ

ದೇಶದಲ್ಲಿ ಕೊರೋನಾ ಮಹಾಮಾರಿ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಕೊರೋನಾದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆಯೂ ಕೂಡ ಅತ್ಯಧಿಕವಾಗಿದೆ. 

ನವದೆಹಲಿ (ಏ.26): ಕೊರೋನಾ ವೈರಸ್‌ನ 2ನೇ ಅಲೆಗೆ ತತ್ತರಿಸಿರುವ ಭಾರತದಲ್ಲಿ ಭಾನುವಾರ ದಾಖಲೆಯ 3,49,691 ಮಂದಿಯಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ. ಅಲ್ಲದೆ ನಿನ್ನೆ ಒಂದೇ ದಿನ 2767 ಮಂದಿಗೆ ವೈರಸ್‌ಗೆ ಬಲಿಯಾಗಿದ್ದಾರೆ. ಇದು ದಿನವೊಂದರಲ್ಲಿ ದಾಖಲಾದ ಸಾವು ಮತ್ತು ಕೇಸ್‌ ಎರಡರಲ್ಲೂ ಈವರೆಗಿನ ಗರಿಷ್ಠವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ವರದಿ ತಿಳಿಸಿದೆ.

ಇದರೊಂದಿಗೆ ದೇಶದಲ್ಲಿ ಸತತ 4ನೇ ದಿನವೂ 3 ಲಕ್ಷಕ್ಕಿಂತ ಹೆಚ್ಚು ಪ್ರಕರಣಗಳು ದೃಢಪಟ್ಟಂತೆ ಆಗಿದೆ. ಕೇವಲ 4 ದಿನಗಳ ಅವಧಿಯಲ್ಲಿ ದೇಶದಲ್ಲಿ 13.44 ಲಕ್ಷ ಜನರು ಸೋಂಕಿಗೆ ತುತ್ತಾಗಿದ್ದರೆ, 9758 ಜನರು ಸೋಂಕಿಗೆ ಬಲಿಯಾಗಿದ್ದಾರೆ.

ಗಾಳಿಯಲ್ಲಿ ಹರಡುತ್ತೆ ಕೊರೊನಾ ವೈರಸ್, ವಿಜ್ಞಾನಿಗಳು ಕೊಟ್ರು 10 ಸಾಕ್ಷಿ! ...

ಇನ್ನು ಒಟ್ಟು ಸೋಂಕಿತರ ಸಂಖ್ಯೆ 1.69 ಕೋಟಿಯಾಗಿದ್ದು, ಈ ಪೈಕಿ 26.82 ಲಕ್ಷ ಮಂದಿ ಸಕ್ರಿಯ ಸೋಂಕಿತರಾಗಿದ್ದಾರೆ. ಅಂದರೆ ಒಟ್ಟಾರೆ ಸೋಂಕಿತರ ಪೈಕಿ ಶೇ.15.82ರಷ್ಟುಮಂದಿಯಲ್ಲಿ ವೈರಸ್‌ ಸಕ್ರಿಯವಾಗಿದೆ.

14 ದಿನ ಕರ್ನಾಟಕ ಲಾಕ್‌ಡೌನ್: ಏನಿರುತ್ತೆ? ಏನಿರಲ್ಲ? ಇಲ್ಲಿದೆ ಮಾಹಿತಿ ...

 ಇನ್ನು ಶನಿವಾರವಷ್ಟೇ ಶೇ.84.4 ಇದ್ದ ಕೊರೋನಾದಿಂದ ಗುಣಮುಖರಾದವರ ರಾಷ್ಟ್ರೀಯ ಪ್ರಮಾಣ ಭಾನುವಾರ ಶೇ.83.05ಕ್ಕೆ ಕುಸಿದಿದೆ. ಅಲ್ಲದೆ ದೇಶದಲ್ಲಿ ಕೊರೋನಾದಿಂದ ಸಾವಿಗೀಡಾದ ಶೇ.70ಕ್ಕಿಂತ ಹೆಚ್ಚು ಮಂದಿಯಲ್ಲಿ ಒಂದಕ್ಕಿಂತ ಹೆಚ್ಚು ಕಾಯಿಲೆಗಳಿದ್ದವು ಎಂದು ಆರೋಗ್ಯ ಇಲಾಖೆ ತಿಳಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಿಪೇರಿಗೆ 5 ಗಂಟೆ ಬೇಕೆಂದ ರೈಲ್ವೆ ಅಧಿಕಾರಿಗಳು; ಸುತ್ತಿಗೆಯಿಂದ 10 ನಿಮಿಷದಲ್ಲಿ ಸರಿ ಮಾಡಿದ ಅಂಕಲ್
India Latest News Live: ರಿಪೇರಿಗೆ 5 ಗಂಟೆ ಬೇಕೆಂದ ರೈಲ್ವೆ ಅಧಿಕಾರಿಗಳು; ಸುತ್ತಿಗೆಯಿಂದ 10 ನಿಮಿಷದಲ್ಲಿ ಸರಿ ಮಾಡಿದ ಅಂಕಲ್