
ಮುಂಬೈ(ಜೂ.06): ಕೊರೋನಾ ವೈರಸ್ 2ನೇ ಅಲೆ ನಿಯಂತ್ರಿಸುವಲ್ಲಿ ಮಹರಾಷ್ಟ್ರ ಸರ್ಕಾರ ಯಶಸ್ವಿಯಾಗಿದೆ. ಮುಂಬೈ ಮಹಾನಗರದಲ್ಲೂ ಕೊರೋನಾ ಪ್ರಕರಣ ಇಳಿಕೆಯಾಗಿದೆ. ಹೀಗಾಗಿ 5 ಹಂತದಲ್ಲಿ ಅನ್ಲಾಕ್ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಇದರ ಪರಿಣಾಣಮ ಸೋಮವಾರದಿಂದ(ಜೂ.07) ಮುಂಬೈನಲ್ಲಿ ಬಸ್ ಸೇವೆ ಆರಂಭಗೊಳ್ಳುತ್ತಿದೆ.
ಕೊರೋನಾ ಗೆದ್ದ ಧಾರಾವಿ, ಸೀಕ್ರೆಟ್ ರಿವೀಲ್!
ಮುಂಬೈನಲ್ಲಿ ಕಳೆದ 24 ಗಂಟೆಯಲ್ಲಿ 866 ಹೊಸ ಪ್ರಕರಣ ದಾಖಲಾಗಿದೆ. ಕೊರೋನಾ ಸಂಖ್ಯೆ ಇಳಿಕೆ ಕಾರಣ ಸರ್ಕಾರ ಅನ್ಲಾಕ್ ಪ್ರಕ್ರಿಯೆ ಆರಂಭಿಸಿದೆ. ಸೋಮವಾರದಿಂದ ನಿಯಮಿತ ಬಸ್ ಸೇವೆ ಆರಂಭಗೊಳ್ಳುತ್ತಿದೆ ಎಂದು ಮುಂಬೈ ಬಿಇಎಸ್ಟಿ ಹೇಳಿದೆ.
ಬಸ್ನಲ್ಲಿನ ಸೀಟಿಗಿಂತ ಹೆಚ್ಚು ಪ್ರಯಾಣಿಕರನ್ನು ಸಾಗಿಸುವಂತಿಲ್ಲ. ಎಲ್ಲರೂ ಮಾಸ್ಕ್ ಹಾಕಿಕೊಳ್ಳಬೇಕು. ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯಾವಾಗಿದೆ ಎಂದು ಬಿಇಎಸ್ಟಿ ಹೇಳಿದೆ.
ದೆಹಲಿ, ಮುಂಬೈನಲ್ಲಿ ಸೋಂಕು ಭಾರೀ ಇಳಿಕೆ!
ಮುಂಬೈನಲ್ಲಿ ಮತ್ತಷ್ಟು ಕಠಿಣ ನಿಯಮಗಳು ಅಗತ್ಯ ಎಂದು ತಜ್ಞ ವೈದ್ಯರು ಅಭಿಪ್ರಾಯಪಟ್ಟಿದ್ದಾರೆ. ಇತರ ರಾಜ್ಯಗಳಲ್ಲಿ ಕೊರೋನಾ ವೈರಸ್ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ಹೀಗಾಗಿ ಏಕಾಏಕಿ ಮುಂಬೈನಲ್ಲಿ ಅನ್ಲಾಕ್ ಸೂಕ್ತವಲ್ಲ ಅನ್ನೋ ಅಭಿಪ್ರಾಯಗಳು ವ್ಯಕ್ತವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ