
ನವದೆಹಲಿ(ಏ.15): ಕೊರೋನಾ ವೈರಸ್ 2ನೇ ಅಲೆಗೆ ಇಡೀ ಭಾರತವೇ ಅಪಾಯದಲ್ಲಿ ಸಿಲುಕಿದೆ. ಮಹಾರಗಳಲ್ಲಿ ಆಸ್ಪತ್ರೆಗಳು ಭರ್ತಿಯಾಗುತ್ತಿದೆ. ಬೆಡ್ಗಳು ಸಿಗುತ್ತಿಲ್ಲ. ಲಾಕ್ಡೌನ್ ಮಾತೇ ಇಲ್ಲ ಎಂದಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇದೀಗ ಕೊರೋನಾ ನಿಯಂತ್ರಣಕ್ಕೆ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದ್ದಾರೆ.
'ಕೊರೋನಾ ನಿಯಂತ್ರಣಕ್ಕೆ ಜನತೆ ಸ್ವಯಂ ಕರ್ಫ್ಯೂ ವಿಧಿಸಿಕೊಳ್ಳಿ
ದೆಹಲಿಯಲ್ಲಿ ವೀಕೆಂಡ್ ಕರ್ಫ್ಯೂ ಜಾರಿಮಾಡಿದ್ದರೆ, ಉತ್ತರ ಪ್ರದೇಶದ 10 ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ರಾತ್ರಿ 8 ಗಂಟೆಯಿಂದ ಬೆಳಗ್ಗೆ 7 ಗಂಟೆ ವರೆಗೆ ಕರ್ಫ್ಯೂ ಜಾರಿ ಮಾಡಲಾಗಿದೆ. ಮಹಾರಾಷ್ಟ್ರ ಬಳಿಕ ಇದೀಗ ದೆಹಲಿ ಹಾಗೂ ಉತ್ತರ ಪ್ರದೇಶದಲ್ಲೂ ಕಠಿಣ ನಿಯಮಗಳು ಜಾರಿಯಾಗಿದೆ.
ದೆಹಲಿ ವೀಕೆಂಡ್ ಕರ್ಫ್ಯೂ ವೇಳೆ ಕೇವಲ ಅಗತ್ಯ ವಸ್ತುಗಳು ಹಾಗೂ ತುರ್ತು ಸೇವೆ ಲಭ್ಯವಾಗಲಿದೆ. ಇನ್ನುಳಿದಂತೆ ಎಲ್ಲಾ ಸೇವೆಗಳು ಸ್ಥಗಿತಗೊಳ್ಳಲಿದೆ. ಶಾಪಿಂಗ್ ಮಾಲ್, ಜಿಮ್, ಆಡಿಟೋರಿಯಂ ಬಂದ್ ಆಗಲಿವೆ. ಸಿನಿಮಾ ಹಾಲ್ಗಳಲ್ಲೇ ಶೇಕಡಾ 30 ರಷ್ಟು ಮಾತ್ರ ಸೀಟಿಂಗ್ ಅವಕಾಶ ನೀಡಲಾಗಿದೆ.
ದೆಹಲಿಯಲ್ಲಿ ಆಸ್ಪತ್ರೆ ಬೆಡ್ ಖಾಲಿ ಇವೆ. ಸದ್ಯ 50,000 ಬೆಡ್ ಖಾಲಿ ಇದ್ದು, ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಕೇಜ್ರಿವಾಲ್ ಹೇಳಿದ್ದಾರೆ. ಇತ್ತ ಉತ್ತರ ಪ್ರದೇಶದಲ್ಲಿ ನೈಟ್ ಕರ್ಫ್ಯೂ ಹೇರಲಾಗಿದೆ. ಈ ನೈಟ್ ಕರ್ಫ್ಯೂ ವೇಳೆ ಕೊರೋನಾ ಪಾಸಿಟೀವ್ ಸಂಖ್ಯೆಗಳನ್ನು ಸೂಕ್ಷ್ಮವಾಗಿ ಗಮಿಸಲು ಸರ್ಕಾರ ಮುಂದಾಗಿದೆ. ಇಷ್ಟೇ ಅಲ್ಲ ಅಗತ್ಯಬಿದ್ದರೆ ವೀಕೆಂಡ್ ಲಾಕ್ಡೌನ್ ಕುರಿತ ಚಿಂತನೆ ನಡೆಸಲಾಗುವುದು ಎಂದು ಸರ್ಕಾರ ಹೇಳಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ