ಕೊರೋನಾ ನಿರ್ಬಂಧ: ಏಪ್ರಿಲ್ ಮೊದಲೆರಡು ವಾರದಲ್ಲಿ ನಿರುದ್ಯೋಗ ಸಮಸ್ಯೆ ಶೇ.8ರಷ್ಟು ಹೆಚ್ಚಳ!

Published : Apr 16, 2021, 02:29 PM IST
ಕೊರೋನಾ ನಿರ್ಬಂಧ: ಏಪ್ರಿಲ್ ಮೊದಲೆರಡು ವಾರದಲ್ಲಿ ನಿರುದ್ಯೋಗ ಸಮಸ್ಯೆ ಶೇ.8ರಷ್ಟು ಹೆಚ್ಚಳ!

ಸಾರಾಂಶ

ಕೊರೋನಾ ವೈರಸ್ ಕಾರಣ ಒಂದೊಂದೆ ರಾಜ್ಯಗಳು ಕಠಿಣ ನಿರ್ಬಂಧ ಹೇರಲಾಗುತ್ತಿದೆ. ಮಹಾರಾಷ್ಟ್ರ, ದೆಹಲಿ, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಕೊರೋನಾ ಕರ್ಫ್ಯೂ ಜಾರಿಯಾಗಿದೆ. ಕಠಿಣ ರೂಲ್ಸ್ ಹೇರಿದ ಎರಡೇ ವಾರಕ್ಕೆ ಭಾರತದ ನಿರುದ್ಯೋಗ ಸಮಸ್ಯೆಯಲ್ಲೂ ಹೆಚ್ಚಳವಾಗಿದೆ. ಈ ಕುರಿತು ಆತಂಕಕಾರಿ ವರದಿ ಇಲ್ಲಿದೆ.

ನವದೆಹಲಿ(ಏ.16): ಭಾರತದಲ್ಲಿ ಕೊರೋನಾ ದಾಖಲೆ ಬರೆದಿದೆ. ಒಂದೇ ದಿನ 2 ಲಕ್ಷಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗೋ ಮೂಲಕ ದಾಖಲೆ ಬರೆದಿದೆ. ಏಪ್ರಿಲ್ ಆರಂಭದಿಂದ ಕೊರೋನಾ ನಿಯಂತ್ರಣಕ್ಕೆ 144 ಸೆಕ್ಷನ್ ಜಾರಿ, ನೈಟ್ ಕರ್ಫ್ಯೂ,  ಶಾಲಾ-ಕಾಲೇಜು ಬಂದ್, ಸಿನಿಮಾ, ಸಭೆ ಸಮಾರಂಭಕ್ಕೆ ನಿರ್ಬಂಧ ಸೇರಿದಂತೆ ಹಲವು ಕಠಿಣ ನಿಯಮ ಜಾರಿಯಾಗಿದೆ. ಪರಿಣಾಮ ಕೇವಲ ಎರಡು ವಾರದಲ್ಲಿ ನಿರುದ್ಯೋಗದ ಸಮಸ್ಯೆ ಕೂಡ ದುಪ್ಪಟ್ಟಾಗಿದೆ.

ದೇಶದಲ್ಲಿ 13.5 ಕೋಟಿ ಜನರ ಉದ್ಯೋಗಕ್ಕೇ ಕುತ್ತು?

ಕೊರೋನಾ ಹಾಗೂ ಕಳೆದ ವರ್ಷ ಹೇರಿದ್ದ ಲಾಕ್‌ಡೌನ್ ಭಾರತದಲ್ಲಿ ನಿರುದ್ಯೋಗ ಸಮಸ್ಯೆ ಮತ್ತಷ್ಟು ಉಲ್ಬಣಿಸಿತ್ತು. ಇದೀಗ ಏಪ್ರಿಲ್ 2 ವಾರದಲ್ಲಿ ಹೊಸ ನಿಯಮಗಳು ಜಾರಿಯಾಗಿರುವ ಹಿನ್ನಲೆ ಭಾರತದ ನಿರುದ್ಯೋಗ ಸಮಸ್ಯೆ ಶೇಕಡಾ 8 ರಷ್ಟು ಹೆಚ್ಚಾಗಿದೆ ಎಂದು ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ(CMIE) ಅಧ್ಯಯನ ವರದಿ ಹೇಳಿದೆ.

ನಿರುದ್ಯೋಗ ಸಮಸ್ಯೆ ಶೇಕಡಾ 8ರಷ್ಟು ಇಳಿಕೆಯಾಗಿದೆ. ಇನ್ನು ಮುಂಬೈ, ಬೆಂಗಳೂರು, ದೆಹಲಿ ಸೇರಿದಂತೆ ಮಹಾನಗರಗಳಿಂದ ವಲಸೆ ಕಾರ್ಮಿಕರು ಮತ್ತೆ ತಮ್ಮ ತವರಿನತ್ತ ಮರಳುತ್ತಿದ್ದಾರೆ. ಇದರಿಂದ ಕಾರ್ಮಿಕರು ಕೆಲಕ್ಕೆ ಹಾಜರಾಗುವ ಸಂಖ್ಯೆ ಶೇಕಡಾ 40 ಕ್ಕೆ ಇಳಿದಿದೆ.

ಕರ್ನಾಟದ ನಿರುದ್ಯೋಗಿ ಯುವಕರಿಗೆ ಯಡಿಯೂರಪ್ಪ ಬಂಪರ್ ಆಫರ್

ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ(CMIE) ವರದಿ ಪ್ರಕಾರಣ  ಭಾರತದಲ್ಲಿ ನಿರುದ್ಯೋಗ ದರವು 7.2% ರಷ್ಟಿದ್ದು, ನಗರ ನಿರುದ್ಯೋಗವು 8.4% ಮತ್ತು ಗ್ರಾಮೀಣ ನಿರುದ್ಯೋಗ ಏಪ್ರಿಲ್ 14 ರ ವೇಳೆಗೆ 6.6% ರಷ್ಟಾಗಿದೆ. ಮಾರ್ಚ್‌ನಲ್ಲಿ ರಾಷ್ಟ್ರವ್ಯಾಪಿ ನಿರುದ್ಯೋಗವು 6.52% ರಷ್ಟಿದ್ದು, ನಗರ ನಿರುದ್ಯೋಗ 7.24% ಮತ್ತು ಗ್ರಾಮೀಣ ನಿರುದ್ಯೋಗ 6.17%. ಕ್ಕೆ ಏರಿಕೆಯಾಗಿದೆ.

ದಿಢೀರ್ ನಿರುದ್ಯೋಗ ಸಮಸ್ಯೆ ಏರಿಕೆಗೆ ಹೊಸ ಕೊರೋನಾ ನಿರ್ಬಂಧಗಳು ಕಾರಣ ಎಂದು CMIE ಹೇಳಿದೆ. ಆದರೆ ಕಳೆದ ವರ್ಷ ಹೇರಲಾಗಿದ್ದ ಸಂಪೂರ್ಣ ಲಾಕ್‌ಡೌನ್ ಬೀರಿದ ಪರಿಣಾಣ ಇದಕ್ಕಿಂತ ಭೀಕರವಾಗಿದೆ. ಈ ಬಾರಿ ಹೇರುವ ಕೊರೋನಾ ನಿರ್ಬಂಧಗಳು ನಿರುದ್ಯೋಗದ ಮೇಲೆ ಹೆಚ್ಚಿನ ಪರಿಣಾಮ ಬೀರುವುದು ನಿಶ್ಚಿತ. ಆದರೆ ಪ್ರಮಾಣ ಕಳೆದ ವರ್ಷಕ್ಕಿಂತ ಕಡಿಮೆ ಇರಲಿದೆ ಎಂದು CMIE ಹೇಳಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮನೆಯಲ್ಲಿ ಒಂದು ರೂಪಾಯಿ ಇಲ್ಲ ಆದ್ರೂ ಸಿಸಿಟಿವಿ ಯಾಕೆ ಹಾಕಿದ್ರಿ: ಸಿಕ್ಕಿದ್ದನ್ನು ದೋಚಿ ಪತ್ರ ಬರೆದಿಟ್ಟು ಹೋದ ಕಳ್ಳ
ಲೋಕಸಭೆಯಲ್ಲಿ ನೌಕರರ ಪರ ಮಸೂದೆ ಮಂಡನೆ: ಉದ್ಯೋಗಿಗಳ ಲೈಫ್​ ಜಿಂಗಾಲಾಲಾ- ಏನಿದೆ ಇದರಲ್ಲಿ?