ತೀರಾ ಅಗತ್ಯವಿದ್ದರೆ ಮಾತ್ರ ಸಿಂಗಾಪುರಕ್ಕೆ ಹೋಗಿ: ಕೇಂದ್ರದ ಮುನ್ನೆಚ್ಚರಿಕೆ

Published : Feb 23, 2020, 01:59 PM IST
ತೀರಾ ಅಗತ್ಯವಿದ್ದರೆ ಮಾತ್ರ ಸಿಂಗಾಪುರಕ್ಕೆ ಹೋಗಿ: ಕೇಂದ್ರದ ಮುನ್ನೆಚ್ಚರಿಕೆ

ಸಾರಾಂಶ

ತೀರಾ ಅಗತ್ಯವಿದ್ದರೆ ಮಾತ್ರ ಸಿಂಗಾಪುರಕ್ಕೆ ಹೋಗಿ: ಕೇಂದ್ರದ ಮುನ್ನೆಚ್ಚರಿಕೆ| ಇಂಡೋನೇಷ್ಯಾ, ವಿಯೆಟ್ನಾಂ, ಮಲೇಷ್ಯಾ ಪ್ರಯಾಣಿಕರ ಮೇಲೂ ನಿಗಾ| ಪ್ರಸ್ತುತ ದೇಶದ 21 ವಿಮಾನ ನಿಲ್ದಾಣಗಳಲ್ಲಿ ಕೊರೋನಾ ಪರೀಕ್ಷೆ

ನವದೆಹಲಿ[ಫೆ.23]: ಕೊರೋನಾ ಸೋಂಕು ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಭಾರತೀಯರು , ತೀರಾ ಅಗತ್ಯವಿಲ್ಲದ ಹೊರತಾಗಿ ಸಿಂಗಾಪುರಕ್ಕೆ ಭೇಟಿ ನೀಡುವುದು ಬೇಡ ಎಂಬ ಸಲಹೆಯನ್ನು ಕೇಂದ್ರ ಸರ್ಕಾರ ನೀಡಿದೆ.

ಸಂಪುಟ ಕಾರ್ಯದರ್ಶಿ ನೇತೃತ್ವದಲ್ಲಿ ಶನಿವಾರ ನಡೆದ ಪರಿಶೀಲನಾ ಸಭೆಯ ಬಳಿಕ ಈ ಮುನ್ನೆಚ್ಚರಿಕೆ ಹೊರಡಿಸಲಾಗಿದೆ. ಇದೇ ವೇಳೆ ಕೊರೋನಾಕ್ಕೆ ತತ್ತರಿಸಿರುವ ಚೀನಾದ ಸುತ್ತಮುತ್ತಲಿರುವ ರಾಷ್ಟ್ರಗಳನಾದ ಇಂಡೋನೇಷ್ಯಾ, ವಿಯೆಟ್ನಾಂ, ಮಲೇಷ್ಯಾದಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೂ ಭಾರತ ವಿಮಾನ ನಿಲ್ದಾಣಗಳಲ್ಲಿ ಪರೀಕ್ಷೆಗೊಳಪಡಿಸಲು ನಿರ್ಧರಿಸಲಾಗಿದ್ದು, ಈ ಕ್ರಮ ಸೋಮವಾರದಿಂದ ಜಾರಿಯಾಗಲಿದೆ ಎಂದು ಸರ್ಕಾರ ತಿಳಿಸಿದೆ.

ಪ್ರಸ್ತುತ ಚೀನಾ, ಹಾಂಕಾಂಗ್‌, ಥಾಯ್ಲೆಂಡ್‌, ದಕ್ಷಿಣ ಕೊರಿಯಾ, ಸಿಂಗಾಪುರ ಹಾಗೂ ಜಪಾನ್‌ನಿಂದ ಭಾರತಕ್ಕೆ ಆಗಮಿಸುತ್ತಿರುವ ಪ್ರಯಾಣಿಕರನ್ನು ದೇಶದ 21 ವಿಮಾನ ನಿಲ್ದಾಣಗಳಲ್ಲಿ ಪರೀಕ್ಷೆಗೊಳಪಡಿಸಲಾಗುತ್ತಿದೆ. ಇದುವರೆಗೂ 21,805 ಪ್ರಯಾಣಿಕರ ಮೇಲೆ ಸಮುದಾಯ ನಿಗಾ ವಹಿಸಲಾಗಿದೆ. ಅಲ್ಲದೆ, 3,97,152 ಮಂದಿ ವಿಮಾನ ಪ್ರಯಾಣಿಕರು ಹಾಗೂ ಸಮುದ್ರ ಮಾರ್ಗದ ಮೂಲಕ ಭಾರತ ಪ್ರವೇಶಿಸಿದ ಸುಮಾರು 10 ಸಾವಿರ ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

UIDAI Rules: ಯಾವುದೇ ಹೋಟೆಲ್‌ನಲ್ಲಿ ಆಧಾರ್ ಕಾರ್ಡ್ ಫೋಟೋಕಾಪಿ ನೀಡೋ ಅಗತ್ಯವಿಲ್ಲ: ಈ ಹೊಸ ನಿಯಮ ತಿಳ್ಕೊಳ್ಳಿ
ತಾಯಿಯ ಜಾತಿ ಆಧಾರದಲ್ಲೇ ಮಗಳಿಗೆ ಜಾತಿ ಪ್ರಮಾಣಪತ್ರ: ಸುಪ್ರೀಂ ಮಹತ್ವದ ತೀರ್ಪು