ಕೊರೋನಾ ಕಾರಣ ಆಕ್ಸಿಜನ್‌ಗೆ ಹೆಚ್ಚಿದ ಬೇಡಿಕೆ; ಕೈಗಾರಿಕೆಗೆ ಆಮ್ಲಜನಕ ಪೂರೈಕೆ ನಿಷೇಧಿಸಿದ ಸರ್ಕಾರ!

Published : Apr 18, 2021, 10:51 PM ISTUpdated : Apr 18, 2021, 10:52 PM IST
ಕೊರೋನಾ ಕಾರಣ ಆಕ್ಸಿಜನ್‌ಗೆ ಹೆಚ್ಚಿದ ಬೇಡಿಕೆ; ಕೈಗಾರಿಕೆಗೆ ಆಮ್ಲಜನಕ ಪೂರೈಕೆ ನಿಷೇಧಿಸಿದ ಸರ್ಕಾರ!

ಸಾರಾಂಶ

ಕೊರೋನಾ ವೈರಸ್ ಹೆಚ್ಚಾಗುತ್ತಿರುವ ಕಾರಣ ಆಸ್ಪತ್ರೆಗಳು ಭರ್ತಿಯಾಗಿದೆ. ಸೋಂಕಿತರ ಚಿಕಿತ್ಸೆಗೆ ಆಕ್ಸಿಜನ್ ಬೇಡಿಕೆ ಹೆಚ್ಚಾಗಿದೆ. ಕೆಲ ರಾಜ್ಯಗಳು ಆಕ್ಸಿನ್ ಕೊರತೆ ಕುರಿತು ಪ್ರಶ್ನೆ ಎತ್ತಿದೆ. ತೀವ್ರ ಬೇಡಿಕೆ ಇರುವ ಕಾರಣ ಕೇಂದ್ರ ಸರ್ಕಾರ ಕೆಲ ಕೈಗಾರಿಗಳಿಗೆ ಪೂರೈಸುತ್ತಿದ್ದ ಆಕ್ಸಿಡನ್ ಸಿಲಿಂಡರ್ ನಿಷೇಧಿಸಿದೆ.

ನವದೆಹಲಿ(ಏ.18): ಕೊರೋನಾ ವೈರಸ್ ಪ್ರಕರಣಗಳು ರಾಕೆಟ್ ವೇಗದಲ್ಲಿ ಸಾಗುತ್ತಿದೆ. ಇತ್ತ ಆಸ್ಪತ್ರೆಗಳಲ್ಲಿ ಕೊರೋನಾ ಸೋಂಕಿತರು ಭರ್ತಿಯಾಗುತ್ತಿದ್ದಾರೆ. ಇದರ ನಡುವೆ ಹಲವು ಆಸ್ಪತ್ರೆಗಳಲ್ಲಿ ಆಕ್ಸಿಜನ್ ಸಿಲಿಂಡರ್ ಕೊರತೆ ಕಾಡುತ್ತಿದೆ. ಬೇಡಿಕೆ ಹೆಚ್ಚಾದ ಬೆನ್ನಲ್ಲೇ ಇದೀಗ ಕೇಂದ್ರ ಸರ್ಕಾರ ಕೆಲ ಕೈಗಾರಿಗಳಿಗೆ ಪೂರೈಸುತ್ತಿದ್ದ ಆಕ್ಸಿಜನ್ ಸಿಲಿಂಡರ್ ಸ್ಥಗಿತಗೊಳಿಸಿದೆ.

ಕೇಂದ್ರ ಕುತಂತ್ರಕ್ಕೆ ಆಕ್ಸಿಜನ್ ಕೊರತೆ ಎಂದ ದೆಹಲಿ ; ಕೇಜ್ರಿವಾಲ್ ರಾಜಕೀಯಕ್ಕೆ ಜನರ ಆಕ್ರೋಶ!

9 ಕೈಗಾರಿಗಳನ್ನು ಹೊರತು ಪಡಿಸಿ ಇತರ ಕೈಗಾರಿಗಳಿಗೆ ಆಕ್ಸಿನ್ ಸಿಲಿಂಡರ್ ಸ್ಥಗಿತಗೊಳಿಸುವಂತೆ ಕೇಂದ್ರ ನಿರ್ಧರಿಸಿದೆ.  ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಪತ್ರ ಬರೆದಿದ್ದಾರೆ. ಈ ಪತ್ರದಲ್ಲಿ ಒಂಬತ್ತು ಕೈಗಾರಿಕೆಗಳನ್ನು ಹೊರತುಪಡಿಸಿ, ಕೈಗಾರಿಕಾ ಉದ್ದೇಶಕ್ಕಾಗಿ ಆಮ್ಲಜನಕವನ್ನು ಪೂರೈಸುವುದನ್ನು ನಿಷೇಧಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಿರ್ದೇಶನ ನೀಡಿದ್ದಾರೆ. 

ಮಹಾರಾಷ್ಟ್ರ, ಮಧ್ಯಪ್ರದೇಶ, ಗುಜರಾತ್, ದೆಹಲಿ ಮತ್ತು ಉತ್ತರ ಪ್ರದೇಶದಲ್ಲಿ ಆಕ್ಸಿಜನ್ ಬೇಡಿಕೆ ಹೆಚ್ಚಾಗಿದೆ. ಕೊರೋನಾ ಸೋಂಕಿತರ ಜೀವ ಉಳಿಸುವುದು ಮುಖ್ಯ ಎಂದು ಕೇಂದ್ರ ಹೇಳಿದೆ. 

ಪ್ರಮುಖ ನಗರಗಳಲ್ಲಿ ಆಕ್ಸಿಜನ್ ಕೊರತೆ ಇದೀಗ ತೀವ್ರವಾಗುತ್ತಿದೆ. ಸೋಂಕಿತರಿಗೆ ಆಮ್ಲಜನಕ ಕೊರತೆ ಕಾಡುತ್ತಿರುವುದರಿಂದ ಚಿಕಿತ್ಸೆ ಸವಾಲು ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ದೇಗುಲ ಪ್ರವೇಶಿಸುವುದಿಲ್ಲ ಎಂದ ಕ್ರಿಶ್ಚಿಯನ್ ಮಿಲಿಟರಿ ಅಧಿಕಾರಿಯ ಅಮಾನತು ಎತ್ತಿ ಹಿಡಿದ ಸುಪ್ರೀಂಕೋರ್ಟ್‌ ಹೇಳಿದ್ದೇನು?
ಇಂಡಿಗೋದ ಭಾರೀ ಕುಸಿತ: ಒಂದೇ ವಿಮಾನಯಾನ ಸಂಸ್ಥೆಯ ಏಕಸ್ವಾಮ್ಯವಾದಾಗ